ಇದು ಬಿಜೆಪಿ ದುಬಾರಿ ದರ್ಬಾರ್‌: ಹೆಬ್ಟಾಳಕರ


Team Udayavani, Oct 8, 2021, 3:35 PM IST

fgtru

ಬೆಳಗಾವಿ: ತೈಲ ಬೆಲೆ ಏರಿಕೆ, ಅಡಿಗೆ ಅನಿಲ ಬೆಲೆ ಹೆಚ್ಚಳದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬೆಳಗಾವಿ ಗ್ರಾಮೀಣ ಶಾಸಕಿ ಮತ್ತು ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಟಾಳಕರ ಅವರು ಇದು ಬಿಜೆಪಿ ದುಬಾರಿ ದರ್ಬಾರ್‌ ಎಂದು ಟ್ವೀಟರ್‌ ಮೂಲಕ ಟೀಕಾ ಪ್ರಹಾರ ಮಾಡಿದ್ದಾರೆ.

ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಸರಣಿ ಟ್ವೀಟ್‌ ಮಾಡಿರುವ ಹೆಬ್ಟಾಳಕರ ಹತ್ತು ಲಕ್ಷ ರೂ.ಗಿಂತಲೂ ಹೆಚ್ಚು ವಾರ್ಷಿಕ ಆದಾಯವಿರುವ, ಸಮರ್ಥ ಕುಟುಂಬಗಳು ತಮ್ಮ ಗ್ಯಾಸ್‌ ಸಬ್ಸಿಡಿ ಬಿಟ್ಟು ಕೊಡಿ, ಅದರಿಂದ ಅಡುಗೆ ಅನಿಲ ಖರೀದಿಸಲಾಗದ ಕುಟುಂಬಕ್ಕೆ ಉಚಿತ ಸಂಪರ್ಕ ಕಲ್ಪಿಸಬಹುದು ಎಂದು ಪ್ರಧಾನಿಯವರು ಮನವಿ ಮಾಡಿದ್ದರು. ಈಗ ನಿಜಕ್ಕೂ ಎಷ್ಟು ಬಡ ಕುಟುಂಬಗಳಿಗೆ ಉಚಿತ ಗ್ಯಾಸ್‌ ಸಂಪರ್ಕ ಸಿಕ್ಕಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಗೃಹ ಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಜನಸಾಮಾನ್ಯರು ತಮ್ಮ ಜೀವನ ನಡೆಸಲು ಮನೆಯಲ್ಲಿದ್ದ ಒಡವೆಗಳನ್ನು ಮಾರುವ ಸ್ಥಿತಿ ನಿರ್ಮಾಣವಾಗಿದೆ. ಅಚ್ಛೇದಿನ ಭರವಸೆ ನೀಡಿ, ಮನೆಯನ್ನೇ ಬರಿದಾಗಿಸುತ್ತಿದೆ ಬಿಜೆಪಿ ಸರ್ಕಾರ. ಬಡತನ, ಆರ್ಥಿಕ ಸಂಕಷ್ಟದ ಕಾರಣಕ್ಕೆ 1 ವರ್ಷದಲ್ಲಿ ರಾಜ್ಯದಲ್ಲಿ 850 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂಥ ಬಿಕ್ಕಟ್ಟಿನ ಸಮಯದಲ್ಲಿ ರಾಜ್ಯದ ಆರ್ಥಿಕತೆಗೆ ಚಾಲನೆ ನೀಡುವ ಕಾರ್ಯಕ್ರಮ ರೂಪಿಸಬೇಕಾದ ಸರ್ಕಾರ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದೆ ಎಂದು ಟೀಕಿಸಿದ್ದಾರೆ.

ಗ್ಯಾಸ್‌ ಸಿಲಿಂಡರ್‌ ಖರೀದಿಯ ಬಳಿಕ ಬರುತ್ತಿದ್ದ ಸರ್ಕಾರದ ಸಬ್ಸಿಡಿ ಹಣ ಖಾತೆಗೆ ಬರುವುದು ನಿಂತು ಸುಮಾರು ಎರಡು ವರ್ಷಗಳೇ ಕಳೆದಿವೆ. ಯಾರಿಗೂ ಏನೂ ತಿಳಿಸದೆ ಸರ್ಕಾರ ಸಬ್ಸಿಡಿ ನಿಲ್ಲಿಸಿದ್ದು ಏಕೆ? ಹಾಗಾದರೆ ಉಜ್ವಲ ಯೋಜನೆಯ ಪ್ರಯೋಜನವೇನು ಮೋದಿ ಅವರೇ ಎಂದು ಖಾರವಾಗಿ ಪ್ರಶ್ನಿಸಿರುವ ಹೆಬ್ಟಾಳಕರ, ಪ್ರತಿ ಲೀಟರ್‌ ಪೆಟ್ರೋಲ್‌ ನ ಮೂಲ ಬೆಲೆ 37 ರೂ. ಅದರ ಮೇಲೆ ಕೇಂದ್ರ ಸರ್ಕಾರ ವಿಧಿಸುವ ಅಬಕಾರಿ ಸುಂಕ 32.90 ರೂ. ರಾಜ್ಯಗಳು ವಿಧಿಸುವ ತೆರಿಗೆ ಸುಮಾರು 28 ರೂ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್‌ ಕಮಿಷನ್‌ 8 ರೂ. ಅಲ್ಲಿಗೆ ಪೆಟ್ರೋಲ್‌ ಬೆಲೆ 106ರೂ ದಾಟುತ್ತದೆ. ಬಿಜೆಪಿ ಸರಕಾರ ತೆರಿಗೆ ಹಣದ ಮೂಲಕ ಜನರ ಲೂಟಿಗಿಳಿದಿದೆ ಎಂದು ಹೇಳಿದ್ದಾರೆ.

ಅಡುಗೆ ಅನಿಲ ಬೆಲೆ 15 ರೂ. ಹೆಚ್ಚಳವಾಗಿದೆ. 14.2 ಕೆಜಿಯ ಸಿಲಿಂಡರ್‌ ಬೆಲೆ 902.5 ರೂ. ತಲುಪಿದೆ. ಕಳೆದ 2 ತಿಂಗಳಲ್ಲಿ ನಾಲ್ಕನೇ ಬಾರಿ ಗ್ಯಾಸ್‌ ಬೆಲೆ ಏರಿಕೆಯಾಗಿದೆ. ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್‌ ಕೊಡುವುದಾಗಿ ಭರವಸೆ ನೀಡಿ, ಜನರ ಉಜ್ವಲ ಭವಿಷ್ಯವನ್ನೇ ಬಿಜೆಪಿ ಹಾಳು ಮಾಡಿದೆ. ಅಚ್ಛೇ ದಿನದ ಭರವಸೆ ನೀಡಿ, ಕೆಟ್ಟ ದಿನಗಳ ಅನುಭವ ಮಾಡಿಸುತ್ತಿದೆ ಎಂದು ಹೆಬ್ಟಾಳಕರ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.