ಮುರಿದು ಬಿದ್ದ ಗೇಟ್-ನಾಮಫಲಕ

ಇವಿಎಂ ಸಾಗಿಸುವ ವಾಹನ ತಗುಲಿದ್ದರಿಂದ ಮೊಳಕಾಲ್ಮೂರು ಸರ್ಕಾರಿ ಪಪೂ ಕಾಲೇಜು ಕಾಂಪೌಂಡ್‌ಗೆ ಹಾನಿ

Team Udayavani, Apr 26, 2019, 5:15 PM IST

26-April-35

ಮೊಳಕಾಲ್ಮೂರು: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಗೇಟ್‌ ಮತ್ತು ನಾಮಫಲಕ ಬಿದ್ದುಹೋಗಿರುವುದು.

ಮೊಳಕಾಲ್ಮೂರು: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸ್ಟ್ರಾಂಗ್‌ ರೂಂನಿಂದ ವಿದ್ಯುನ್ಮಾನ ಮತಯಂತ್ರಗಳನ್ನು ಜಿಲ್ಲಾ ಕೇಂದ್ರಕ್ಕೆ ಸಾಗಿಸುವ ವಾಹನ ಕಾಂಪೌಂಡ್‌ಗೆ ತಾಗಿದ ಪರಿಣಾಮ ನಾಮಫಲಕ ಹಾಗೂ ಗೇಟ್‌ಗೆ ಹಾನಿಯಾಗಿದೆ.

ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ತರಗತಿಗಳು ನಡೆಯುತ್ತವೆ. ರಕ್ಷಣೆಗಾಗಿ ಭದ್ರವಾದ ಗೇಟ್, ಕಾಂಪೌಂಡ್‌ನೊಂದಿಗೆ ನಾಮಫಲಕವನ್ನು ಅಳವಡಿಸಲಾಗಿತ್ತು. ಇದೇ ಕಾಲೇಜು ಆವರಣದಲ್ಲಿರುವ ಗುರುಭವನದ ಮುಂಭಾಗದಲ್ಲಿಯೂ ಮತ್ತೂಂದು ಗೇಟ್ ನಿರ್ಮಾಣ ಮಾಡಿ ಕಾಲೇಜು ಆವರಣದಲ್ಲಿ ಮದ್ಯಪಾನ ಮತ್ತು ಅನೈತಿಕ ಚಟುವಟಿಕೆಗಳು ನಡೆಯದಂತೆ ಜಾಗರೂಕತೆ ವಹಿಸಲಾಗಿತ್ತು.

ವಿಧಾನಸಭೆ, ಲೋಕಸಭೆ , ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆ ನಡೆದಾಗ ವಿದ್ಯುನ್ಮಾನ ಮತಯಂತ್ರಗಳನ್ನು ಇಡಲು ಕಾಲೇಜು ಕೊಠಡಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಏ. 18 ರಂದು ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ 284 ಮತಗಟ್ಟೆಗಳಿಂದ ತಂದ ಇವಿಎಂಗಳನ್ನು ಭದ್ರವಾಗಿರಿಸಲಾಗಿತ್ತು. ರಾತ್ರಿ ವೇಳೆ ಜಿಲ್ಲಾ ಕೇಂದ್ರಕ್ಕೆ ಸಾಗಿಸುವಾಗ ಇವಿಎಂಗಳಿದ್ದ ವಾಹನ ಕಾಲೇಜು ಕಾಂಪೌಂಡ್‌ ಮತ್ತು ಗೇಟ್‌ಗೆ ತಾಗಿದ್ದರಿಂದ ನಾಮಫಲಕ ಮತ್ತು ಗೇಟ್ ಕಿತ್ತುಹೋಗಿವೆ. ರಜೆ ಮುಗಿಯುತ್ತಿದ್ದಂತೆ ಶಾಲಾ- ಕಾಲೇಜು ಪ್ರವೇಶ ಆರಂಭವಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳ ರಕ್ಷಣೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗೇಟ್ ಮತ್ತು ನಾಮಫಲಕವನ್ನು ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಉರುಳಿ ಬಿದ್ದಿದ್ದ ನಾಮಫಲಕ ಮತ್ತು ಗೇಟ್ ತೆರವುಗಳಿಸಲಾಗಿದೆ ಎನ್ನಲಾಗುತ್ತಿದ್ದು, ದುರಸ್ತಿ ಕಾರ್ಯವನ್ನು ಆದಷ್ಟು ಬೇಗ ಆರಂಭಿಸಬೇಕಿದೆ.

ಪಟ್ಟಣದ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳ ರಕ್ಷಣೆಗಾಗಿ ನಿರ್ಮಾಣ ಮಾಡಲಾಗಿರುವ ಕಾಂಪೌಂಡ್‌ಗೆ ಹಾನಿಯಾಗಿದೆ. ಇವಿಎಂ ಸಾಗಿಸುವ ವಾಹನ ತಾಗಿದ್ದರಿಂದ ನಾಮಫಲಕ ಮತ್ತು ಗೇಟ್ ಬಿದ್ದುಹೋಗಿವೆ. ಶೀಘ್ರದಲ್ಲೇ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು.
•ಪಿ.ವಿರೂಪಾಕ್ಷಪ್ಪ ,
ಜನಸಂಸ್ಥಾನ ಸಂಸ್ಥೆ.

ಚುನಾವಣೆ ಸಂದರ್ಭದಲ್ಲಿ ನಡೆದ ಘಟನೆಯ ಕುರಿತು ತಹಶೀಲ್ದಾರರೊಂದಿಗೆ ಚರ್ಚಿಸಿ ದುರಸ್ತಿಗೆ ಕ್ರಮ ಕೈಗೊಳ್ಳುತ್ತೇವೆ. ಶಾಲಾ- ಕಾಲೇಜು ಆಸ್ತಿಯನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ.
•ಎನ್‌. ಸೋಮಶೇಖರ್‌, ಬಿಇಒ.

ಚುನಾವಣೆ ಸಂದರ್ಭದಲ್ಲಿ ಇವಿಎಂ ಸಾಗಿಸುವ ವಾಹನ ಶಾಲಾ-ಕಾಲೇಜು ಕಾಂಪೌಂಡ್‌ನ‌ ಗೇಟ್ ಮತ್ತು ನಾಮಫಲಕ ಬಿದ್ದಿರುವುದು ಗಮನಕ್ಕೆ ಬಂದಿದೆ. ದುರಸ್ತಿಗೊಳಿಸಲು ಲೋಕೋಪಯೋಗಿ ಇಲಾಖೆ ಅಭಿಯಂತರರಿಗೆ ಸೂಚನೆ ನೀಡಲಾಗಿದೆ.
•ಎಸ್‌. ಅನಿತಲಕ್ಷ್ಮೀ, ತಹಶೀಲ್ದಾರ್‌.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.