ಅರ್ಜಿ ಫಾರ್ಮ್ಗಾಗಿ ಜನರ ಹರಸಾಹಸ!
ಪಪಂ ಕಚೇರಿ ಎದುರು ಜನಜಂಗುಳಿ18ರೊಳಗೆ ಅರ್ಜಿ ಸಲ್ಲಿಸಲು ಸೂಚನೆ
Team Udayavani, Dec 4, 2019, 1:20 PM IST
ಮೊಳಕಾಲ್ಮೂರು: ಪಟ್ಟಣದ ವ್ಯಾಪ್ತಿಯಲ್ಲಿರುವ ನಿವೇಶನ ಮತ್ತು ಮನೆ ಯಿಲ್ಲದ ವಸತಿ ರಹಿತ ನಾಗರಿಕರು ಆಶ್ರಯ ಮನೆ ಮತ್ತು ನಿವೇಶನ ಸೌಲಭ್ಯಕ್ಕಾಗಿ ಅರ್ಜಿ ಫಾರ್ಮ್ ಪಡೆಯಲು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಸಾರ್ವಜನಿಕರ ಹರಸಾಹಸ ಪಡುವಂತಾಗಿದೆ.
ಡಿ.2ರಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿವೇಶನ ಮತ್ತು ಮನೆ ಹೊಂದಿರದ ಸಾರ್ವಜನಿಕರು ಪಪಂ ವತಿಯಿಂದ ಆಶ್ರಯ ಮನೆ ಮತ್ತು ನಿವೇಶನ ನೀಡಲು ಡಿ.3ರಿಂದ ಸರ್ವೇ ಕಾರ್ಯ ನಡೆಯುತ್ತಿದ್ದು, ಪಟ್ಟಣದ ವ್ಯಾಪ್ತಿಯಲ್ಲಿರುವ ನಿವೇಶನ ಮತ್ತು ಮನೆ ಹೊಂದಿರದ ಸಾರ್ವಜನಿಕರು ಪಟ್ಟಣ ಪಂಚಾಯಿತಿ ಕಾರ್ಯಾಲಯದಿಂದ ಅರ್ಜಿ ಪಡೆದು ಡಿ.18 ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕೆಂದು ಪಟ್ಟಣ ಪಂಚಾಯಿತಿ ಕಾರ್ಯಾಲಯದಿಂದ ಆದೇಶ ಹೊರ ಬಂದ ಮರುದಿನವೇ ಪಟ್ಟಣದ ವ್ಯಾಪ್ತಿಯ ಸಾವಿರಾರು ನಾಗರಿಕರು ಕಾರ್ಯಾಲಯಕ್ಕೆ ಜಮಾಯಿಸಿ ಸರದಿ ಸಾಲಲ್ಲಿ ನಿಂತು 10 ರೂ. ನೀಡಿ ಒಂದು ಅರ್ಜಿ ಫಾರ್ಮ್ ಪಡೆಯಲು ನಾಗರಿಕರು ಹರಸಾಹಸ ಪಡುವಂತಾಗಿದೆ.
ವಸತಿ ರಹಿತ ಮಹಿಳೆಯರು, ವಯೋವೃದ್ಧರು ಸೇರಿದಂತೆ ಸುಮಾರು ಸಾವಿರಾರು ನಾಗರಿಕರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಜಮಾಯಿಸಿ ಸರದಿ ಸಾಲಲ್ಲಿ ನಿಂತು ಅರ್ಜಿ ಪಡೆದಿದ್ದಾರೆ. ಈ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಡಿ.18 ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ