ಬರದಿಂದ ಬೆಂದವರಿಗೆ ಉತ್ತರೆ ಆಸರೆ

ಮೊಳಕಾಲ್ಮೂರು ತಾಲೂಕಿನಲ್ಲಿ ಮೂರ್‍ನಾಲ್ಕು ದಿನ ಮಳೆ ಕೆರೆ-ಹಳ್ಳಗಳಲ್ಲಿ ಅಲ್ಪ ಪ್ರಮಾಣದಲ್ಲಿ ನೀರು ಸಂಗ್ರಹ

Team Udayavani, Sep 28, 2019, 12:56 PM IST

28-Sepctember-12

ಮೊಳಕಾಲ್ಮೂರು: ಸತತ ಬರಕ್ಕೆ ತುತ್ತಾಗುತ್ತಲೇ ಇರುವ ತಾಲೂಕಿನ ಜನರಿಗೆ ಕಳೆದ ಮೂರ್‍ನಾಲ್ಕು ದಿನಗಳ ಹಿಂದೆ ಸುರಿದ ಉತ್ತರೆ ಮಳೆ ಒಂದಿಷ್ಟು ಸಮಾಧಾನ ತಂದಿದೆ. ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆ ಸುರಿದ ಮಳೆಯಿಂದ ಕೆರೆ-ಹಳ್ಳಗಳಲ್ಲಿ ನೀರು ಸಂಗ್ರಹಗೊಂಡಿದೆ.

ತಾಲೂಕಿನ ಫಕ್ಕುರ್ತಿ, ಅಶೋಕಸಿದ್ದಾಪುರ, ಗೌರಸಮುದ್ರ ಕೆರೆ, ಚಿಕ್ಕನಹಳ್ಳಿ, ಭಟ್ರಹಳ್ಳಿ, ರಾಯಪುರ ಕೆರೆ, ಗುಂಡ್ಲೂರು, ಕೋನಸಾನಗರ ಕೆರೆ ಸೇರಿದಂತೆ ಪಟ್ಟಣದ ಕೂಗೆಗುಡ್ಡದ ಕೆರೆ, ದವಳಪ್ಪನಕುಂಟೆ, ಊರುಬಾಗಿಲಹೊಂಡ ಹಾಗೂ ಇನ್ನಿತರ ಕೆರೆ ಕುಂಟೆಗಳಿಗೆ ಅಲ್ಪ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಹಲವಾರು ವರ್ಷಗಳಿಂದ ಸಕಾಲದಲ್ಲಿ ಉತ್ತಮವಾಗಿ ಮಳೆಯಾಗದ ಕಾರಣ ಅಂತರ್ಜಲ ಮಟ್ಟ ಕಡಿಮೆಯಾಗಿ ಕುಡಿಯುವ ಹನಿ ನೀರಿಗೂ ಪರದಾಡುವಂತಾಗಿತ್ತು.

ಪಟ್ಟಣದಲ್ಲಿ ಕಳೆದ ಬಾರಿ ಯಾವ ಕೆರೆಗಳಿಗೂ ನೀರು ಬಾರದ ಕಾರಣ ಪಟ್ಟಣದ ಜನರು ರಂಗಯ್ಯನದುರ್ಗ ಜಲಾಶಯದ ನೀರನ್ನೇ ನೆಚ್ಚಿಕೊಂಡು ನೀರಿನ ದಾಹ ತಣಿಸಿಕೊಳ್ಳುವಂತಾಗಿತ್ತು. ಪಟ್ಟಣದ ದವಳಪ್ಪನಕುಂಟೆಗೆ ಸಾಧಾರಣ ಮಟ್ಟದಲ್ಲಿ ನೀರು ಬಂದಿದ್ದು ಅಂತರ್ಜಲ ಮಟ್ಟ ಹೆಚ್ಚಾಗಬಹುದು ಎಂಬ ನಿರೀಕ್ಷೆ ಹೊಂದಲಾಗಿದೆ.

ದವಳಪ್ಪನಕುಂಟೆಗೆ ಭೇಟಿ: ಪಟ್ಟಣ ಪಂಚಾಯತ್‌ ಮುಖ್ಯಾ ಧಿಕಾರಿ ಕಾಂತರಾಜ್‌ ದವಳಪ್ಪನ ಕುಂಟೆಗೆ ಭೇಟಿ ನೀಡಿ ನೀರಿನ ಪ್ರಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ ವ್ಯಾಪ್ತಿಯ ದವಳಪ್ಪನಕುಂಟೆ, ಕೂಗೆಗುಡ್ಡದ ಕೆರೆ, ಊರುಬಾಗಿಲ ಹೊಂಡ ಹಾಗೂ ಇನ್ನಿತರ ಹಳ್ಳಗಳಿಗೆ ಉತ್ತರೆ ಮಳೆಯಿಂದ ನೀರು ಬಂದಿದೆ. ಇದರಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿದೆ.

ಈಗಾಗಲೇ ಪಟ್ಟಣ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತದಿಂದ ಕುಡಿಯುವ ನೀರು ಸರಬರಾಜು ಮಾಡುವ ಕೊಳವೆಬಾವಿಗಳು ಸ್ಥಗಿತವಾಗುವ ಭೀತಿ ಎದುರಾಗಿತ್ತು. ಉತ್ತರೆ ಮಳೆಯ ಆಗಮನದಿಂದ ಪಟ್ಟಣದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬಹುದು ಎಂದರು.

ಪಟ್ಟಣದ ಘಟಗಿನಬೋರನಾಯಕನ ಹಟ್ಟಿಯ ಬಿ. ಗಿರಿಧರ ಮಾತನಾಡಿ, ದವಳಪ್ಪನಕುಂಟೆಯ ನೀರನ್ನು ಪಟ್ಟಣದ ಜನತೆಗೆ ಕುಡಿಯುವ ನೀರಿಗಾಗಿ
ಬಳಸಲಾಗುತ್ತಿದೆ. ಹಾಗಾಗಾಇ ಆ ಜಾಗದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕಾಗಿದೆ. ಚಿಕನ್‌, ಮಟನ್‌, ಚರ್ಮದ ಅಂಗಡಿಯವರು ತ್ಯಾಜ್ಯ ಹಾಕುವುದರಿಂದ ನೀರು ಕುಡಿಯಲು ಯೋಗ್ಯವಾಗಿಲ್ಲ. ಈ ನೀರಿನ ಸೇವನೆಯಿಂದ ಕಾಯಿಲೆಗಳು ಹರಡುವ ಭೀತಿ ಎದುರಾಗಿದೆ. ತ್ಯಾಜ್ಯ ಹಾಕದಂತೆ ಸೂಕ್ತ ಕ್ರಮ ಕೈಗೊಂಡು ಅಂಥವರ ವಿರುದ್ಧ ದಂಡ ವಿ ಧಿಸಬೇಕು. ಗೃಹ ತ್ಯಾಜ್ಯ ಹಾಕುವುದರಿಂದ ಹೂಳು ತುಂಬುವುದರಿಂದ ತ್ಯಾಜ್ಯ ಹಾಕದಂತೆ ಕಾನೂನು ಕ್ರಮ ಕೈಗೊಂಡು ಈ ನೀರನ್ನು ಸಂರಕ್ಷಿಸಿ ಪಟ್ಟಣದ ಜನರಿಗೆ ಕುಡಿಯಲು ಪೂರೈಕೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯ ಮಂಜಣ್ಣ, ಇಂಜಿನಿಯರ್‌ ವಿಶ್ವನಾಥ, ಮುಖಂಡರಾದ ಪಿ.ಆರ್‌. ಸಿದ್ದಣ್ಣ, ಶಿವಲಿಂಗ, ಗೋಪಾಲ, ಅರ್ಜುನ, ಭೀಮಣ್ಣ, ಗುತ್ತಿಗೆದಾರ ಬಸವ ರೆಡ್ಡಿ ಹಾಗೂ ಪಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.