ತಂಬಾಕು ಮುಕ್ತ ಸಮಾಜಕ್ಕೆ ಕೈ ಜೋಡಿಸಿ

•ತಂಬಾಕು ಸೇವನೆ ದುಷ್ಪರಿಣಾಮದ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಿ: ನ್ಯಾ| ನಿರ್ಮಲಾ

Team Udayavani, May 31, 2019, 4:20 PM IST

1-June-33

ಮೊಳಕಾಲ್ಮೂರು: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜೆ.ಎಂ.ಎಫ್‌.ಸಿ.ನ್ಯಾಯಾಲಯದ ನ್ಯಾಯಾಧೀಶರಾದ ಎಸ್‌. ನಿರ್ಮಲಾ ಉದ್ಘಾಟಿಸಿದರು.

ಮೊಳಕಾಲ್ಮೂರು: ಸಮಾಜದಲ್ಲಿರುವ ಜನರ ಮೇಲೆ ಆರೋಗ್ಯದ ದುಷ್ಪರಿಣಾಮ ಬೀರದಂತೆ ಆರೋಗ್ಯವಂತ ಸಮಾಜಕ್ಕಾಗಿ ತಂಬಾಕು ಮುಕ್ತ ಸಮಾಜಕ್ಕೆ ಕೈ ಜೋಡಿಸಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎಸ್‌. ನಿರ್ಮಲಾ ಹೇಳಿದರು.

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಮೊಳಕಾಲ್ಮೂರು ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನೋತ್ಸವ ಅಂಗವಾಗಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮದ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಬೇಕು. ಸರ್ಕಾರವು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ಕಾನೂನು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತನೆ ನಡೆಸಿದೆ ಎಂದರು.

ತಂಬಾಕು ಸೇವನೆಯಿಂದ ಶ್ವಾಸಕೋಶದ ಕ್ಯಾನ್ಸರ್‌, ಹೃದಯ ರೋಗ, ಕಿಡ್ನಿ ಇನ್ನಿತರೆ ಅಂಗಾಂಗಗಳ ವೈಫಲ್ಯಕ್ಕೀಡಾಗಿ ಸಾಕಷ್ಟು ಸಾವು ನೋವಿಗೆ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಯಿಂದ ಸುತ್ತಮುತ್ತಲಿನವರ ಮೇಲೆ ಅನಾರೋಗ್ಯದ ದುಷ್ಪರಿಣಾಮ ಬೀರಲಿದೆ. ತಂಬಾಕು ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರಲಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕರು ಪ್ರಯಾಣಿಸುವ ವಾಹನಗಳಲ್ಲಿ ಬೀಡಿ , ಸಿಗರೇಟ್ ಸೇವನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ತಂಬಾಕು ಸೇವನೆ ಕಡಿಮೆ ಮಾಡಲು ದುಷ್ಪರಿಣಾಮದ ಬಗೆಗಿನ ಚಿತ್ರಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಬೇಕಾಗಿದೆ. ತಂಬಾಕು ಸೇವನೆ ಮಾಡುವ ಬಗ್ಗೆ ಮಾಧ್ಯಮಗಳು ಜಾಹೀರಾತು ನೀಡಲು ನಿಷೇಧಿಸಬೇಕು. ಜನರ ಆರೋಗ್ಯ ಕಾಪಾಡಲು ತಂಬಾಕು ಸೇವನೆ ಕಡಿಮೆಗೊಳಿಸಲು ಹಲವಾರು ಕಾನೂನುಗಳನ್ನು ಜಾಗೃತಿಗೊಳಿಸಿ ಆರೋಗ್ಯವಂತ ಜೀವನ ರೂಪಿಸಿಕೊಳ್ಳಬೇಕು ಎಂದರು.

ವಕೀಲ ಡಿ. ಬಸವರಾಜ್‌ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧಿಸಲಾಗಿದೆ. ಗ್ರಾಮೀಣ ಪ್ರದೇಶದ ಜಮೀನುಗಳಲ್ಲಿ ಕೆಲ ರೈತರು ತಂಬಾಕನ್ನು ಬೆಳೆದು ಅನಧಿಕೃತವಾಗಿ ಮಾರಾಟ ಮಾಡುವುದು ಕಾನೂನು ಅಪರಾಧವಾಗಿದೆ. ಕಾನೂನಾತ್ಮಕವಾಗಿ ತಂಬಾಕನ್ನು ಬೆಳೆದು ಮಾರಾಟ ಮಾಡಬೇಕಾಗಿದೆ. ಜನರ ಆರೋಗ್ಯಕ್ಕೆ ಮಾರಕವಾಗಿರುವುದರಿಂದ ತಂಬಾಕನ್ನು ಸೇವನೆ ಮಾಡಬಾರದು. ತಂಬಾಕಿನಿಂದಾಗುವ ಗುಟ್ಕಾ, ಬೀಡಿ, ಸಿಗರೇಟ್ ಸೇವನೆಯಿಂದ ಆರೋಗ್ಯದ ಮೇಲೆ ಹಾನಿಯಾಗಲಿದೆ. ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ. ಆರೋಗ್ಯವಂತ ಸದೃಢ ಸಮಾಜ ನಿರ್ಮಾಣ ಮಾಡಲು ತಂಬಾಕು ಸೇವನೆಯಿಂದ ದೂರವಿರಬೇಕು ಎಂದರು.

ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ| ಮಧುಕುಮಾರ್‌ ಮಾತನಾಡಿ, ಸಮಾಜದಲ್ಲಿ ಬಹುತೇಕರು ತಮಗೆ ಉಲ್ಲಾಸ ಮತ್ತು ಕ್ರಿಯಾಶೀಲರಾಗಿರಲು ತಂಬಾಕು ಸೇವನೆ ಮಾಡಲಾಗುತ್ತಿದೆ. ತಂಬಾಕಿನಿಂದ ಹಲವಾರು ರೂಪಗಳಿದ್ದು, ತಂಬಾಕು ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ತಂಬಾಕಿನಲ್ಲಿ ನಿಕೋಟಿನ್‌ ಎಂಬ ಅಂಶವಿರುವುದರಿಂದ ಇದು ಮೆದುಳು ಮತ್ತು ನರನಾಡಿಗಳನ್ನು ದುರ್ಬಲಗೊಳಿಸಿ ಹಲವಾರು ಮಾರಣಾಂತಿಕ ಕಾಯಿಲೆಗಳಿಗೆ ಎಡೆ ಮಾಡಿಕೊಡುತ್ತದೆ. ತಂಬಾಕು ಸೇವನೆಯಿಂದ ಕ್ಯಾನ್ಸರ್‌ ಹಾಗೂ ಇನ್ನಿತರ ಮಾರಣಾಂತಿಕ ಕಾಯಿಲೆಗಳು ಬರುವುದರಿಂದ ತಂಬಾಕು ಸೇವನೆಯಿಂದ ದೂರವಿರ ಬೇಕು ಎಂದರು.

ಸಹಾಯಕ ಸರ್ಕಾರಿ ಅಭಿಯೋಜಕ ಲಿಂಗೇಶ್ವರ, ವಕೀಲರ ಸಂಘದ ಪ್ರಭಾರೆ ಅಧ್ಯಕ್ಷ ಪಾಪಯ್ಯ, ವಕೀಲರಾದ ಎಂ.ಎನ್‌. ವಿಜಯಲಕ್ಷ್ಮೀ , ಪಿ.ಜಿ. ವಸಂತಕುಮಾರ್‌, ವಿನೋದ, ಚಂದ್ರಶೇಖರ್‌, ಕುಮಾರಪ್ಪ, ಆನಂದ, ಮಂಜುನಾಥ, ಅನಂತಮೂರ್ತಿ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.