ಆಧಾರ್‌ ಕಾರ್ಡ್‌ ಮಾಡ್ಸೋಕೆ ಪಡಿಪಾಟಲು

ಮೊಳಕಾಲ್ಮೂರು ಪಟ್ಟಣ-ಗ್ರಾಮೀಣ ಪ್ರದೇಶದ ಜನರಿಗೆ ತಪ್ಪುತ್ತಿಲ್ಲ ಅಲೆದಾಟ

Team Udayavani, Jul 11, 2019, 11:47 AM IST

11-July-18

ಮೊಳಕಾಲ್ಮೂರು: ಆಧಾರ್‌ ಕಾರ್ಡ್‌ ಟೋಕನ್‌ ಪಡೆಯಲು ರಾಂಪುರ ನಾಡಕಚೇರಿ ಆವರಣದಲ್ಲಿ ಕಾಯುತ್ತಿರುವ ಜನ

ಎಸ್‌. ರಾಜಶೇಖರ
ಮೊಳಕಾಲ್ಮೂರು:
ಪಟ್ಟಣದ ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಆಧಾರ್‌ ಕಾರ್ಡ್‌ ಮಾಡಿಸಲು ಹಾಗೂ ಟೋಕನ್‌ ಪಡೆಯಲು ಜನಸಾಮಾನ್ಯರು ಹರಸಾಹಸ ಪಡುವಂತಾಗಿದೆ.

ತಾಲೂಕಿನಲ್ಲಿ ಬಹುತೇಕ ಜನರು ತಮ್ಮ ಮಕ್ಕಳ ಶಿಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷೆಯ ಹಲವಾರು ಯೋಜನೆಗಳನ್ನು ಪಡೆಯಲು ಆಧಾರ್‌ ಕಾರ್ಡ್‌ ಅಗತ್ಯವಾಗಿದೆ. ಈಗಾಗಲೇ ನೀಡಿರುವ ಬಹುತೇಕರ ಆಧಾರ್‌ ಕಾರ್ಡ್‌ಗಳಲ್ಲಿ ಹೆಚ್ಚಾಗಿ ತಿದ್ದುಪಡಿಗಾಗಿ ಮತ್ತು ಹೊಸದಾಗಿ ಆಧಾರ್‌ ಕಾರ್ಡ್‌ಗಳನ್ನು ಪಡೆಯಲು ಪ್ರತಿನಿತ್ಯ ಆಧಾರ್‌ ಕಾರ್ಡ್‌ಗಳ ಕೌಂಟರ್‌ಗಳಿಗೆ ಅಲೆಯುವಂತಾಗಿದೆ. ತಾಲೂಕಿನ ಕಸಬಾ ಮತ್ತು ದೇವಸಮುದ್ರ ಹೋಬಳಿಗಳಲ್ಲಿ ತೆರೆದ ಕೌಂಟರ್‌ಗಳಲ್ಲಿ ಪ್ರತಿನಿತ್ಯ ವೃದ್ಧರು, ಶಾಲಾ ಮಕ್ಕಳು, ಹೆಣ್ಣುಮಕ್ಕಳು ಅಲೆಯುವಂತಾಗಿದೆ. ಕಸಬಾ ಹೋಬಳಿಯ ಜನರಿಗಾಗಿ ಪಟ್ಟಣದ ತಾಲೂಕು ಕಚೇರಿ ಮತ್ತು ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಕೌಂಟರ್‌ಗಳನ್ನು ತೆರೆಯಲಾಗಿದೆ. ನೂರಾರು ಫಲಾನುಭವಿಗಳು ಮತ್ತು ದೇವಸಮುದ್ರ ಹೋಬಳಿಯ ಜನರಿಗೆ ಕೇವಲ ಒಂದೇ ಕೌಂಟರ್‌ ಅನ್ನು ರಾಂಪುರದ ನಾಡಕಚೇರಿಯಲ್ಲಿ ತೆರೆಯಲಾಗಿದೆ. ಇದರಿಂದ ಜನಸಾಮಾನ್ಯರು ಆಧಾರ್‌ ಕಾರ್ಡ್‌ಗಳನ್ನು ಪಡೆಯಲು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಆಧಾರ್‌ ಕಾರ್ಡ್‌ಗಾಗಿ ದೂರದ ಗ್ರಾಮಗಳಿಂದ ನೂರಾರು ರೂ. ವ್ಯಯ ಮಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಆಧಾರ್‌ ಕಾರ್ಡ್‌ ಕೌಂಟರ್‌ ಗಳಿಗೆ ಅಲೆದಾಡುವಂತಾಗಿದೆ.

ಪಟ್ಟಣದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನ ಕೌಂಟರ್‌ನಲ್ಲಂತೂ ಆಧಾರ್‌ ಕಾರ್ಡ್‌ ಸಮಸ್ಯೆ ಮಿತಿ ಮೀರಿದೆ. ಈ ಕೌಂಟರ್‌ನಲ್ಲಿ ವಾರಕ್ಕೊಮ್ಮೆ ಟೋಕನ್‌ ನೀಡುತ್ತಿರುವುದರಿಂದ ಕೇವಲ ಟೋಕನ್‌ ಪಡೆಯಲು ಗ್ರಾಮೀಣ ಭಾಗದ ಜನರು ಮತ್ತು ಪಟ್ಟಣದ ಜನರು ಬೆಳಗಿನ ಜಾವ 3 ಗಂಟೆಗೆ ಆಗಮಿಸಿ ಸರತಿ ಸಾಲಲ್ಲಿ ನಿಲ್ಲುವ ದುಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ರಾಂಪುರ ನಾಡಕಚೇರಿಯಲ್ಲಿಯೂ ಇದೇ ಸ್ಥಿತಿ ಇದೆ.

ಟೋಕನ್‌ ಪಡೆದವರಿಗೆ ತಕ್ಷಣ ಆಧಾರ್‌ ಕಾರ್ಡ್‌ ಲಭ್ಯವಾಗದೆ ತಿಂಗಳುಗಳ ಕಾಲ ಕಚೇರಿಗೆ ಅಲೆಯುವಂತಾಗಿದೆ. ಆಧಾರ್‌ ಕಾರ್ಡ್‌ ಪಡೆಯಲು ನಿತ್ಯವೂ ಕೌಂಟರ್‌ನಲ್ಲಿ ಟೋಕನ್‌ ನೀಡಿದರೆ ತ್ವರಿತವಾಗಿ ಆಧಾರ್‌ ಕಾರ್ಡ್‌ ನೀಡಬಹುದು. ಆದರೆ ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಾಲೂಕಿನಲ್ಲಿ ಆಧಾರ್‌ ಕಾರ್ಡ್‌ಗಾಗಿ ಹೆಚ್ಚಿನ ಕೌಂಟರ್‌ಗಳನ್ನು ತೆರೆದು ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.