ಜನರಿಗೆ ನೀರಿನ ಬರ: ಹೋಟೆಲ್ ಗೆ ಭರಪೂರ!

ಮೊಳಕಾಲ್ಮೂರು ಪಪಂ ನೀರಗಂಟಿಗಳ ವಿರುದ್ಧ ಆಕ್ರೋಶ•ನೀರು ವ್ಯರ್ಥವಾಗುತ್ತಿದ್ದರೂ ಗಮನ ನೀಡುವವರಿಲ್ಲ

Team Udayavani, Sep 15, 2019, 12:39 PM IST

15-Sepctember-11

ಮೊಳಕಾಲ್ಮೂರು: ಜನರು ದುಬಾರಿ ಹಣ ತೆತ್ತು ಟ್ಯಾಂಕರ್‌ ನೀರು ಪಡೆದರು.

ಮೊಳಕಾಲ್ಮೂರು: ಸತತ ಬರ, ಮಳೆ ವೈಫಲ್ಯದಿಂದಾಗಿ ಪಟ್ಟಣದ ಜನರು ಹನಿ ನೀರಿಗೂ ಪರದಾಡುವಂತಾಗಿದೆ. ಜನರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕಾದ ಪಟ್ಟಣ ಪಂಚಾಯತ್‌, ಕೆಲವು ಹೋಟೆಲ್ಗಳಿಗೆ ಭರಪೂರ ನೀರು ಸರಬರಾಜು ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಪಟ್ಟಣದ ಎಲ್ಲಾ 16 ವಾರ್ಡ್‌ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಜನರಿಗೆ ಸುಮಾರು 15-20 ದಿನಗಳಾದರೂ ಹನಿ ನೀರು ಬಿಡದ ಪಟ್ಟಣ ಪಂಚಾಯತ್‌, ಹಲವಾರು ಬಾರಿ ಪಟ್ಟಣದ ಬಸ್‌ನಿಲ್ದಾಣದ ಹೋಟೆಲ್ ಸೇರಿದಂತೆ ಕೆಲವು ಹೋಟೆಲ್ಗಳಿಗೆ ಮಾತ್ರ ನೀರು ಪೂರೈಕೆ ಮಾಡುತ್ತಿದೆ. ಅದು ಕೂಡ ನೀರನ್ನು ನದಿಯಂತೆ ಹರಿಸಿ ವ್ಯರ್ಥಗೊಳಿಸಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಸಾರ್ವಜನಿಕರು ನೀರಿಗಾಗಿ ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಟ್ಟಣ ಪಂಚಾಯತ್‌ ನೀರಗಂಟಿಗಳು ನೀರು ಬಿಡಲು ತಡವಾದಲ್ಲಿ ಆಂಧ್ರದಿಂದ ಆಮದಾಗುವ ಶುದ್ದ ಕುಡಿಯುವ ನೀರಿಗೆ ಒಂದು ಕೊಡಕ್ಕೆ 20 ರೂ. ಕೊಟ್ಟು ಕುಡಿಯುವ ನೀರು ಪಡೆಯಬೇಕಾಗಿದೆ. ಬಳಕೆಗಾಗಿ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ 500-600 ರೂ. ತೆತ್ತು ನೀರಿನ ದಾಹ ತಣಿಸಿಕೊಳ್ಳುವಂತಾಗಿದೆ.

ಪಟ್ಟಣ ಪಂಚಾಯತ್‌ ನೀರಗಂಟಿಗಳು 15-20 ದಿನಗಳಿಗೊಮ್ಮೆ ಒಂದು ಲೈನ್‌ಗೆ ಕೇವಲ ಅರ್ಧ ಇಲ್ಲವೇ ಮುಕ್ಕಾಲು ಗಂಟೆ ಕಾಲ ಮಾತ್ರ ಅಲ್ಪ ಪ್ರಮಾಣದಲ್ಲಿ ನೀರು ಬಿಡುತ್ತಿದ್ದಾರೆ. ನಿಗದಿಪಡಿಸಿದ ಸಮಯದಲ್ಲಿ ಅಲ್ಪ ಪ್ರಮಾಣದ ನೀರು ಬಿಟ್ಟು ಬಂದ್‌ ಮಾಡುತ್ತಾರೆ. ಆದರೆ ಬಸ್‌ ನಿಲ್ದಾಣದ ಹೋಟೆಲ್ ಹಾಗೂ ಹಲವಾರು ಸಂಪ್‌ಗ್ಳಿಗೆ ಹೆಚ್ಚಾಗಿ ನೀರು ಹರಿಸುತ್ತಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಪಟ್ಟಣಕ್ಕೆ ರಂಗಯ್ಯನದುರ್ಗ ಜಲಾಶಯದಿಂದ ಸರಬರಾಜು ಮಾಡುವ ಮೋಟಾರ್‌ ಪಂಪ್‌ ಕೆಟ್ಟುಹೋಗಿದೆ ಎಂದು ತಿಳಿಸಿ ಸುಮಾರು 15-20 ದಿನಗಳಾದರೂ ಹನಿ ನೀರು ಬಿಟ್ಟಿಲ್ಲ. ಆದರೆ ಬಸ್‌ನಿಲ್ದಾಣದ ಹೋಟೆಲ್ನ ಸಂಪ್‌ಗೆ ರಾತ್ರಿಪೂರ್ತಿ ನೀರು ಹರಿಸಲಾಗಿದೆ. ಇದರಿಂದ ಸಂಪ್‌ ಭರ್ತಿಯಾಗಿ ಬಸ್‌ನಿಲ್ದಾಣದಿಂದ ಮೊಬಾರಕ್‌ ಮೊಹಲ್ಲಾದವರೆಗೂ ನೀರು ವ್ಯರ್ಥವಾಗಿ ಹರಿದು ಹೋಗಿದೆ. ಇದು ಜನರನ್ನು ಕೆರಳಿಸಿದೆ.

ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಹೊಸದಾಗಿ ಬಂದಿರುವ ಪಪಂ ಮುಖ್ಯಾಧಿಕಾರಿಗೆ ಈ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಸಮರ್ಪಕ ನೀರು ಪೂರೈಕೆಗೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮುಂದಾಗಬೇಕು ಎಂಬುದು ನಾಗರಿಕರ ಒತ್ತಾಯ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.