ಬಾಲಕಿಯರ ಬಿಸಿಎಂ ಹಾಸ್ಟೆಲ್‌ ನಿರುಪಯುಕ್ತ ?

ಪಟ್ಟಣದಿಂದ 3 ಕಿಮೀ ದೂರದಲ್ಲಿ ನಿರ್ಮಾಣವಿದ್ಯಾರ್ಥಿನಿಯರ ಸಂಚಾರಕ್ಕೂತೊಂದರೆ

Team Udayavani, Nov 18, 2019, 1:02 PM IST

18-November-10

„ಎಸ್‌.ರಾಜಶೇಖರ
ಮೊಳಕಾಲ್ಮೂರು:
ಪಟ್ಟಣದ ಹೊರ ವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿ 2.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಲಕಿಯರ ಬಿಸಿಎಂ ಹಾಸ್ಟೆಲ್‌ ಕಟ್ಟಡವು ವಿದ್ಯಾರ್ಥಿಗಳ ಬಳಕೆಗೆ ಬಾರದೆ ನಿರುಪಯುಕ್ತವಾಗಲಿದೆ.

ಪಟ್ಟಣದಿಂದ ಸುಮಾರು 3 ಕಿಮೀಗೂ ಹೆಚ್ಚಿನ ದೂರದಲ್ಲಿರುವ ನಿರ್ಮಾಣವಾಗುತ್ತಿರುವ ನೂತನ ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಬಾಲಕಿಯರ ಕಾಲೇಜ್‌ ಹಾಸ್ಟೆಲ್‌ ಕಟ್ಟಡವು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಉಪಯೋಗಕ್ಕೆ ಬಾರದೆ ವ್ಯರ್ಥವಾಗುವ ಸಾಧ್ಯತೆ ಹೆಚ್ಚಾಗಿದೆ.

ತಾಲೂಕು ಕೇಂದ್ರ ಸ್ಥಾನವಾದ ಪಟ್ಟಣದಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಪಪೂ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಗ್ರಾಮೀಣ ಪ್ರದೇಶದ ಬಿಸಿಎಂನ ಕಾಲೇಜು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಯಾವುದೇ ವಿದ್ಯಾರ್ಥಿ ನಿಲಯಗಳ ಸೌಲಭ್ಯದಿಂದ ವಂಚಿತವಾಗಿದೆ.

ಇತ್ತೀಚಿನ ದಿನಗಳಲ್ಲಿ 3 ಕಿಮೀಗೂ ಹೆಚ್ಚಿನ ದೂರದಲ್ಲಿ ಬಿಸಿಎಂ ಇಲಾಖೆಯಿಂದ 2.75 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ಹಾಸ್ಟೆಲ್‌ ನಿರ್ಮಾಣ ಹಂತದಲ್ಲಿದೆ. ಈ ಹಾಸ್ಟೆಲ್‌ 3 ಕಿಮೀಗೂ ಹೆಚ್ಚಿನ ದೂರದಲ್ಲಿರುವುದರಿಂದ ಪಟ್ಟಣದ ಕಾಲೇಜುಗಳಿಗೆ ನಿತ್ಯವೂ ಬಾಲಕಿಯರು ಸಕಾಲಕ್ಕೆ ಹೋಗಲು ಕಷ್ಟಸಾಧ್ಯವಾಗಲಿದೆ.

ಪಟ್ಟಣದಿಂದ 3 ಕಿಮೀ ದೂರದಲ್ಲಿರುವ ಪಟ್ಟಣದ ಕಾಲೇಜುಗಳಿಗೆ ಹೋಗಲು ಪ್ರೌಢಾವಸ್ಥೆಯಲ್ಲಿರುವ ಬಾಲಕಿಯರಿಗೆ ಯಾವುದೇ ಉಚಿತ ವಾಹನದ ಸೌಲಭ್ಯವಿರುವುದಿಲ್ಲದಿರುವುದರಿಂದ ನಿತ್ಯ ಸಕಾಲಕ್ಕೆ ನಡೆದುಕೊಂಡು ಹೋಗಿ ಬರಲು ದುಸ್ಸಾಹಸವೇ ಸರಿ.

ನಿರ್ಮಾಣ ಹಂತದಲ್ಲಿರುವ ಬಾಲಕಿಯರ ಬಿಸಿಎಂನ ಕಾಲೇಜು ಹಾಸ್ಟೆಲ್‌ ಕಟ್ಟಡವು ಹತ್ತಿರದ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿದ್ದರೂ ಯಾವುದೇ ರಕ್ಷಣೆಯಿಲ್ಲದೆ ಗುಡ್ಡಗಾಡು ಪ್ರದೇಶಕ್ಕೆ ಪ್ರೌಢಾವಸ್ಥೆಯಲ್ಲಿರುವ ಬಾಲಕಿಯರನ್ನು ಕಳುಹಿಸುವುದು ಅಪಾಯಕಾರಿಯಾಗಿದೆ.

ಈಗಾಗಲೇ ಬಾಲಕಿಯರ ಬಿ.ಸಿ.ಎಂ ಕಾಲೇಜು ಹಾಸ್ಟೆಲ್‌ ಹೆಚ್ಚಿನ ಜನಸಂದಣಿಯಲ್ಲಿರುವ ಪಟ್ಟಣದ ದಾಸರಹಟ್ಟಿಯಲ್ಲಿ ಖಾಸಗಿ ಕಟ್ಟಡದಲ್ಲಿರುವುದರಿಂದ ಯಾವುದೇ ಅನಾಹುತಗಳಾಗದಂತೆ ತಡೆಯಬಹುದಾಗಿದೆ. ಆದರೆ 3 ಕಿಮೀ ದೂರದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿ ನಿರ್ಮಾಣವಾಗಲಿರುವ ಬಾಲಕಿಯರ ಬಿಸಿಎಂನ ಕಾಲೇಜು ಹಾಸ್ಟೆಲ್‌ ನಿಂದ ಪಟ್ಟಣದಲ್ಲಿರುವ ಕಾಲೇಜುಗಳಿಗೆ ಹೆಣ್ಣು ಮಕ್ಕಳು ಹೋಗಿ ಬರುವಾಗ ಎಂತಹ ದುಷ್ಕೃತ್ಯಗಳು ಸಂಭವಿಸಬಹುದೆಂದು ಊಹಿಸಿಕೊಳ್ಳುವುದು ಅಸಾಧ್ಯ.

ಒಂದು ವೇಳೆ ಜಾಗದ ಕೊರತೆ ನೆಪವೊಡ್ಡಿ ಇಲ್ಲಿಯೇ ಬಾಲಕಿಯರ ಬಿ.ಸಿ.ಎಂ ನ ಕಾಲೇಜು ಹಾಸ್ಟೆಲ್‌ ನಿರ್ಮಿಸಿ ಪ್ರಾರಂಭಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಆಗುವ ದುರ್ಘ‌ಟನೆಗಳಿಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೇ ನೇರ ಹೊಣೆಗಾರರಾಗುವ ಸಾಧ್ಯತೆ ಇದೆ. ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಬಾಲಕಿಯರ ಬಿಸಿಎಂ ಕಾಲೇಜು ಹಾಸ್ಟೆಲ್‌ನ್ನು ಪಟ್ಟಣ ವ್ಯಾಪ್ತಿಯಲ್ಲಿಯೇ ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.