ಮಕ್ಕಳು ಸೇರಿ 10 ಮಂದಿ ಕಚ್ಚಿದ್ದ ಮಂಗ ಸೆರೆ
Team Udayavani, Mar 3, 2021, 8:17 PM IST
ಶಹಾಪುರ: ಖಾನಾಪುರ ಗ್ರಾಮದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಮಂಗವೊಂದು ಮಕ್ಕಳು ಸೇರಿದಂತೆ 10 ಮಂದಿಗೆ ಕಚ್ಚುವ ಮೂಲಕ ಭೀತಿಯನ್ನುಂಟು ಮಾಡಿತ್ತು. ಕಳೆದ ಮೂರು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮದಲ್ಲಿಯೇ ಬೀಡು ಬಿಟ್ಟು ಹುಚ್ಚು ಹಿಡಿದ ಮಂಗ ಹಿಡಿಯಲು ಕಾರ್ಯಾಚರಣೆ ನಡೆಸಿತ್ತು. ಗದಗ ಜ್ಯೂದಿಂದ ಬಂದಿದ್ದ ನುರಿತ ತಂಡ ಮಂಗಳವಾರ ಹುಚ್ಚು ಹಿಡಿದಿದ್ದ ಮಂಗ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಗಾಯಗೊಂಡವರನ್ನು ಧಾರವಾಡ ಮತ್ತು ಹುಬ್ಬಳ್ಳಿ, ತಾಳಿಕೋಟೆ ಮತ್ತು ರಾಯಚೂರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹುಚ್ಚು ಹಿಡಿದ ಮಂಗ ಹಿಡಿಯಲು ಗದಗ ಮೂಲದ ನುರಿತ ತಂಡ ಹಾಗೂ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ಹರಸಾಹಸ ಪಟ್ಟಿದ್ದು, ಕೊನೆಗೆ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ವಲಯ ಅರಣ್ಯ ಅ ಧಿಕಾರಿ ಐ.ಬಿ. ಹೂಗಾರ ತಿಳಿಸಿದ್ದಾರೆ. ಬಂ ಧಿಸಿದ ಮಂಗ ಗದಗ ಜ್ಯೂಗೆ ಕಳುಹಿಸಿ ಕೊಡಲಾಗಿದ್ದು, ಗ್ರಾಮಸ್ಥರು ಹೆದರಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ