ಬಾಡಿದ ಬಾಳೆ-ಪಪ್ಪಾಯಿ ಬೆಳೆ

• ಬೆಳೆ ರಕ್ಷಣೆಗೆ ರೈತರ ಸಾಹಸ • ಟ್ಯಾಂಕರ್‌ ನೀರು ಹರಿಸಿದರೂ ತಪ್ಪದ ಸಂಕಷ್ಟ

Team Udayavani, May 12, 2019, 11:28 AM IST

Udayavani Kannada Newspaper

ಮುದಗಲ್ಲ: ಸಮೀಪದ ಹಡಗಲಿ ತಾಂಡಾ, ದೇಸಾಯಿ ಬೋಗಾಪುರ, ತಲೇಖಾನ, ಛತ್ತರ, ನಾಗಲಾಪುರ, ಯರದೊಡ್ಡಿ ಗ್ರಾಮದ ತೋಟಗಳ ಕೊಳವೆಬಾವಿಗಳಲ್ಲಿ ನೀರಿಲ್ಲದ್ದಕ್ಕೆ ಬಾಳೆ, ಪಪ್ಪಾಯಿ ಹಾಗೂ ದಾಳಿಂಬೆ ಬೆಳೆಗಳು ಒಣಗಿ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ.

ಒಣಬೇಸಾಯದಿಂದ ಬೇಸತ್ತ ರೈತರು ಜಮೀನುಗಳಲ್ಲಿ ಕೊಳವೆಬಾವಿ ಕೊರೆಸಿ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ಬಾಳೆ, ಪಪ್ಪಾಯಿ ಬೆಳೆಯಲು ಮುಂದಾಗಿದ್ದರು. ಆದರೆ ಬೇಸಿಗೆಯಲ್ಲಿ ಅಂತರ್ಜಲಮಟ್ಟ ಕುಸಿದ ಕಾರಣ ಭೂಮಿಯಲ್ಲಿ ತೇವಾಂಶ ಕೊರತೆಯಿಂದ ಬೆಳೆಗಳು ಒಣಗಿವೆ.

ಆರಂಭದಲ್ಲಿ ಕೊಳವೆಬಾವಿಯಲ್ಲಿ ನೀರು ಬಿದ್ದಿದ್ದರಿಂದ ಚೆನ್ನಾಗಿ ಹುರುಪಿನಿಂದ ದಾಳಿಂಬೆ, ಬಾಳೆ, ಪಪ್ಪಾಯಿ ಬೆಳೆಯಲು ಮುಂದಾದ ಬೆಳೆಗಾರರು ಮಾದರಿ ರೈತರಾಗುವ ಕನಸು ಕಂಡಿದ್ದರು. ಆದರೆ ಸಮರ್ಪಕ ಮಳೆ ಆಗದ್ದಕ್ಕೆ ಅಂತರ್ಜಲ ಕುಸಿದಿದ್ದರಿಂದ ನೀರು ಹರಿಸಲಾಗದೇ ಇದೀಗ ಬೆಳೆಗಳು ಬಾಡಿವೆ.

ಯರದೊಡ್ಡಿ ಗ್ರಾಮದ ಶಿವಬಸಪ್ಪ ಹನುಮಂತಪ್ಪ ಗುಂಡದ ಎಂಬವರು 3 ಎಕರೆ ಜಮೀನಿನಲ್ಲಿ ಕೊರೆಸಿದ ಕೊಳವೆಬಾವಿಯಲ್ಲಿ ನೀರು ಬಿದ್ದ ಕಾರಣ ಬಾಳೆ ನಾಟಿ ಮಾಡಿದ್ದರು. ಆದರೆ 8 ತಿಂಗಳ ಬಳಿಕ ಅಂತರ್ಜಲ ಕುಸಿದಿದ್ದರಿಂದ ಬಾಳೆ ಬೆಳೆ ಕೈಗೆ ಬರುವ ಮುನ್ನ ಒಣಗಿ ನಿಂತಿದ್ದು ಸುಮಾರು 5 ಲಕ್ಷ ರೂ. ನಷ್ಟವಾಗಿದೆ ಎಂದು ರೈತ ಶಿವಬಸಪ್ಪ ಗುಂಡದ ಅಳಲು ತೋಡಿಕೊಂಡಿದ್ದಾರೆ.

ಹಡಗಲಿ ತಾಂಡಾದ ಜೇಮಲಪ್ಪ ರೂಪಲೆಪ್ಪ, ಅಮರೇಶ ರೂಪಲೆಪ್ಪ ಚವ್ಹಾಣ ತಲಾ 3 ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆದು ಪ್ರತಿ ವರ್ಷ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಸಾಂಪ್ರದಾಯಿಕ ಬೆಳೆಗಳಿಗೆ ತಿಲಾಂಜಲಿ ಹಾಡಿದ ಈ ಸಹೋದರರು ಪಪ್ಪಾಯಿ ಮತ್ತು ದಾಳಿಂಬೆ ಮಿಶ್ರ ಬೆಳೆ ಬೆಳೆದಿದ್ದರು. ಆದರೆ ಪಪ್ಪಾಯಿ ಕಟಾವಿಗೆ ಬರುವ ಮುನ್ನ ಕೊಳವೆಬಾವಿಯಲ್ಲಿ ನೀರು ಬತ್ತಿದ ಕಾರಣ ಟ್ಯಾಂಕರ್‌ ಮೂಲಕ ತೋಟಕ್ಕೆ ನೀರು ಹಾಯಿಸಿದರು. ಆದರೂ ಸಮರ್ಪಕ ಫಸಲು ಬಾರದೆ ನಷ್ಠ ಅನುಭವಿಸುವಂತಾಗಿದೆ.

ಯರದೊಡ್ಡಿ ಗ್ರಾಮದ ಗೌರಮ್ಮ ಶಿವಮೂರ್ತಯ್ಯ ಸೊಪ್ಪಿಮಠ ಎಂಬವರು 5 ಎಕರೆ ಜಮೀನಿನಲ್ಲಿ ಎರಡು ಕೊಳವೆಬಾವಿ ಕೊರೆಸಿದ್ದಾರೆ. ಒಂದು ಬೋರಿನಲ್ಲಿ ಅಲ್ಪ ನೀರು ಬಂದಿದ್ದರಿಂದ ಪಪ್ಪಾಯಿ ಬೆಳೆದಿದ್ದಾರೆ. ಪಪ್ಪಾಯಿ ಕಟಾವಿಗೆ ಬಂದಿದೆ. ಆದರೆ ಬೋರ್‌ನಲ್ಲಿ ನೀರು ಕಡಿಮೆಯಾಗಿದ್ದರಿಂದ ಮತ್ತೂಂದು ಬೋರ್‌ ಕೊರೆಸಿ ತೋಟಕ್ಕೆ ನೀರು ಹಾಯಿಸಿದರೂ ನೀರು ಸಾಲುತಿಲ್ಲ, ಬೇರೆ ಕಡೆಯಿಂದ ಟ್ಯಾಂಕರ್‌ ನೀರು ತಂದು ಗಿಡಗಳಿಗೆ ಬಿಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಆಗ್ರಹ: ತೋಟಗಾರಿಕೆ ಬೆಳೆಗಳನ್ನು ನಂಬಿದ ರೈತರು ನೀರಿನ ಕೊರತೆಯಿಂದಾಗಿ ಬೆಳೆ ಒಣಗಿ ನಷ್ಟ ಅನುಭವಿಸುವಂತಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ಬೆಳೆ ಹಾನಿಗೊಳಗಾದವರಿಗೆ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಭೀಕರ ಬರ ರೈತರನ್ನು ತಲ್ಲಣಗೊಳಿಸಿದೆ. ತೋಟಗಾರಿಕೆ ಬೆಳೆಗಳಿಗೆ ಜೋತು ಬಿಳುತ್ತಿದ್ದ ರೈತರು ಈ ಬಾರಿ ಅಂತರ್ಜಲ ಮಟ್ಟ ಕುಸಿತದಿಂದ ವಾಣಿಜ್ಯ ಬೆಳೆಗಳಿಗೆ ಮನಸು ಮಾಡುತ್ತಿಲ್ಲ.
••ವಿಶ್ವನಾಥ ಸೊಪ್ಪಿಮಠ,
ಹನಿ ನೀರಾವರಿ ಸಾಮಗ್ರಿ ವಿತರಕ.

ದೇವಪ್ಪ ರಾಠೊಡ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.