ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಕ ನೀಡಿಕೆ ತಾರತಮ್ಯ: ಆರೋಪ

Team Udayavani, Aug 9, 2019, 1:27 PM IST

9-Agust-25

ಮುದಗಲ್ಲ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಜತೆ ವಾಗ್ವಾದ ನಡೆಸಿದ ವಿದ್ಯಾರ್ಥಿಗಳು.

ಮುದಗಲ್ಲ: ವಾರ್ಷಿಕ ಪರೀಕ್ಷೆಯಲ್ಲಿ ಅಂಕ ನೀಡಿಕೆಯಲ್ಲಿ ಉಪನ್ಯಾಸಕರು, ಪ್ರಾಂಶುಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪಟ್ಟಣದ ಪದ್ಮಾವತಿ ದೇಶಪಾಂಡೆ ಪಿಕಳಿಹಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಗುರುವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ತಮಗೆ ಇಷ್ಟ ಬಂದಂತೆ ಅಧಿಕಾರ ಚಲಾಯಿಸುತ್ತಾರೆ. ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿನ 52 ವಿದ್ಯಾರ್ಥಿಗಳಿಗೆ ಹಾಜರಾತಿ ಕಡಿಮೆ ಇದೆ ಎಂಬ ಕಾರಣಕ್ಕೆ ಅವರ ಹೆಸರನ್ನು ಸೂಚನಾ ಫಲಕದಲ್ಲಿ ಪ್ರಕಟಿಸಿ ಅವರಿಗೆ ಪರೀಕ್ಷೆ ಪ್ರವೇಶ ಪತ್ರ ಕೊಡಲಿಲ್ಲ. ಆದರೆ ಈ ಪೈಕಿ ತಮಗೆ ಆಪ್ತರಾದ 6 ಜನ ವಿದ್ಯಾರ್ಥಿಗಳಿಂದ ಹಣ ಪಡೆದು ಪರೀಕ್ಷಾ ಪ್ರವೇಶ ಪತ್ರ ನೀಡಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದರು.

ನಿತ್ಯ ಕಾಲೇಜಿಗೆ ಹಾಜರಾಗಿ ಓದುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಿದ್ದಾರೆ. ಕಾಲೇಜಿಗೆ ಹಾಜರಾಗದೇ ಪರೀಕ್ಷೆಗೆ ಹಾಜರಾದವರಿಗೆ ಹೆಚ್ಚು ಅಂಕ ನೀಡಿದ್ದಾರೆ. ಇದರ ಹಿಂದೆ ಉಪನ್ಯಾಸಕರು, ಪ್ರಾಚಾರ್ಯರ ಕೈವಾಡವಿದೆ. ಕಾಲೇಜಿನ ಉಪನ್ಯಾಸಕಿಯೊಬ್ಬರ ಮಗಳು ತರಗತಿಗೆ ಹಾಜರಾಗದಿದ್ದರೂ ಅವಳೇ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸುವಂತೆ ಅಂಕ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಂದ 100ರಿಂದ 500 ರೂ.ವರೆಗೆ ದಂಡ ವಸೂಲಿ ಮಾಡುತ್ತಿದ್ದು, ಈ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವ ಅನುಮಾನವಿದೆ. ಇದನ್ನು ಪ್ರಶ್ನಿಸಿದರೆ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಬೆದರಿಕೆ ಹಾಕುತ್ತಾರೆ ಎಂದು ವಿದ್ಯಾರ್ಥಿಗಳಾದ ಅಲ್ತಾಫ್‌, ಮೌಲಾಸಾಬ್‌, ಸಮೀರ್‌, ಅಲ್ಲಾವಲಿ, ಶರಣಬಸವ, ಶಿವಕುಮಾರ, ಸಲ್ಮಾನ್‌ ಖಾನ್‌, ಕೃಷ್ಣ, ಬಂದೇನವಾಜ್‌, ವಿಜಯ, ಅಲ್ಲಾವಲಿ, ಗೌಡಪ್ಪ, ಗಿರಿಯಪ್ಪ ಇತರರು ದೂರಿದರು.

ಸೌಲಭ್ಯ ಕೊರತೆ: ಪಧವಿ ಕಾಲೇಜಿನ ಗ್ರಂಥಾಲಯದಲ್ಲಿ ಪುಸ್ತಕಗಳು, ಪತ್ರಿಕೆಗಳು ಇರುವುದಿಲ್ಲ, ವಿದ್ಯಾರ್ಥಿಗಳು ಕೇಳಲು ಹೋದರೇ ಸರಕಾರ, ಇಲಾಖೆಯಿಂದ ಬಂದಿಲ್ಲ ಎನ್ನತ್ತಾರೆಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಈಗಿರುವ ಟ್ಯಾಂಕ್‌ ಸ್ವಚ್ಛ ಮಾಡುತ್ತಿಲ್ಲ. ಶೌಚಾಲಯ ಸೇರಿ ಮೂಲ ಸೌಕರ್ಯ ಕೊರತೆ ಇದೆ ಎಂದು ವಿದ್ಯಾರ್ಥಿಗಳು ದೂರಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.