ಕೆಪಿಎಸ್ಸಿ ಪರೀಕ್ಷೆಯಲ್ಲಿ ಆಶಿಹಾಳ ತಾಂಡಾದ ಪ್ರತಿಭೆಗಳ ಸಾಧನೆ


Team Udayavani, Dec 25, 2019, 1:43 PM IST

25-December-15

ಮುದಗಲ್ಲ: ಕರ್ನಾಟಕ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (ಕೆಪಿಎಸ್‌ಸಿ)ಪ್ರಕಟಿಸಿರುವ ಕೆಎಎಸ್‌ ಅಧಿಕಾರಿಗಳ ಆಯ್ಕೆಪಟ್ಟಿಯಲ್ಲಿ ಸಮೀಪದ ಆಶಿಹಾಳ ತಾಂಡಾದ ಇಬ್ಬರು ಬಡ ಪ್ರತಿಭೆಗಳು ಸ್ಥಾನ ಪಡೆದಿದ್ದಾರೆ.

ಇದರಲ್ಲಿ ಒಬ್ಬರು ಕಮರ್ಷಿಯಲ್‌ ಟ್ಯಾಕ್ಸ್‌ ಆಫೀಸರ್‌ ಹುದ್ದೆಗೆ ಆಯ್ಕೆಯಾದರೆ, ಇನ್ನೊಬ್ಬರು ಕಾರ್ಮಿಕ ಇಲಾಖೆ ಲೇಬರ್‌ ಕಮೀಷನರ್‌ ಹುದ್ದೆಗೆ ಆಯ್ಕೆಗೊಂಡು ತಾಂಡಾ ಹಾಗೂ ತಾಲೂಕಿನ ಕೀರ್ತಿ ಬೆಳಗಿಸಿದ್ದಾರೆ.

ಸುನೀಲಕುಮಾರ: ಎಸ್‌ಸಿ ಕೋಟಾದಡಿ ಕಮರ್ಷಿಯಲ್‌ ಟ್ಯಾಕ್ಸ್‌ ಆಫೀಸರ್‌ ಹುದ್ದೆಗೆ ಆಯ್ಕೆಯಾದ ಸುನೀಲಕುಮಾರ ಬಾಳಪ್ಪ ರಾಠೊಡ ಬೆಂಗಳೂರಿನಲ್ಲಿ ಬಿಇ ವ್ಯಾಸಂಗ ಮುಗಿಸಿದ್ದಾರೆ. ಹೈದ್ರಾಬಾದ್‌ನ ಐಎಎಸ್‌ ಮತ್ತು ಕೆಎಎಸ್‌ ಕೋಚಿಂಗ್‌ ಸೇಂಟರ್‌ನಲ್ಲಿ ತರಬೇತಿ ಪಡೆದಿದ್ದಾರೆ. ಈ ಹಿಂದೆ ಕೆಎಎಸ್‌ ಪರೀಕ್ಷೆ ಬರೆದಿದ್ದ ಇವರು ಎಲಿಜಿಬಲ್‌ ಆಗಿದ್ದರು. ಆದರೆ ಸಂದರ್ಶನದಲ್ಲಿ ಫೇಲಾಗಿದ್ದರು.

ಎರಡನೇ ಬಾರಿಗೆ ಕೆಎಎಸ್‌ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಕಮರ್ಷಿಯಲ್‌ ಟ್ಯಾಕ್ಸ್‌ ಆಫೀಸರ್‌ ಹುದ್ದೆಗೆ ಆಯ್ಕೆಯಾಗಿದ್ದಾರೆ. ಈತನ ತಂದೆ ಬಾಳಪ್ಪ, ತಾಯಿ ಆರತಿಬಾಯಿ ಆಶಿಹಾಳ ತಾಂಡಾದಲ್ಲಿ ವಾಸವಾಗಿದ್ದಾರೆ. ಅವಿನಾಶ ನಾಯ್ಕ: ಎಸ್‌ಸಿ ಕೆಟಗೇರಿಯಲ್ಲಿ ಕಾರ್ಮಿಕ ಇಲಾಖೆಯಲ್ಲಿ ಲೇಬರ್‌ ಕಮಿಷನರ್‌ ಹುದ್ದೆಗೆ ಆಯ್ಕೆಯಾದ ಆಶಿಹಾಳ ತಾಂಡಾದ ಡಾ| ಅವಿನಾಶ ಬುಡ್ನಾನಾಯ್ಕ ವೃತ್ತಿಯಲ್ಲಿ ಸರ್ಕಾರಿ ವೈದ್ಯರಾಗಿದ್ದಾರೆ. ಬಾಗಲಕೋಟೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಎರಡು ಬಾರಿ ಐಎಎಸ್‌ ಪರೀಕ್ಷೆ ಮತ್ತು ಎರಡು ಬಾರಿ ಕೆಎಎಸ್‌ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆದರೆ ಮೌಖೀಕ ಸಂದರ್ಶನದಲ್ಲಿ ಅಂಕ ಗಳಿಸುವಲ್ಲಿ ಯಶಸ್ವಿ ಆಗಿದ್ದಿಲ್ಲ.

ಈ ಬಾರಿಯ ಕೆಪಿಎಸ್‌ಸಿ ಪರೀಕ್ಷೆಯಲ್ಲಿ 67ನೇ ರ್‍ಯಾಂಕ್‌ ಗಳಿಸುವ ಮೂಲಕ ಲೇಬರ್‌ ಕಮೀಷನರ್‌ ಹುದ್ದೆಗೆ ಆಯ್ಕೆಯಾಗಿದ್ದಾರೆ. ಬಾಲ್ಯದಿಂದಲೂ ಛಲವಂತನಾಗಿದ್ದ ಅವಿನಾಶ ಚುರುಕಾಗಿದ್ದ ಎಂದು ಪಾಲಕರು ಪತ್ರಿಕೆಗೆ ಪ್ರತಿಕ್ರಿಯೆ ನೀಡಿದರು. ಅವಿನಾಶನ ತಂದೆ ಬುಡ್ನಾನಾಯ್ಕ ಬಾಗಲಕೋಟೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮ್ಯಾನೇಜರ್‌ ಆಗಿದ್ದು, ತಾಯಿ ಲಕ್ಷ್ಮೀ ಬಾಗಲಕೋಟೆಯಲ್ಲಿ ವಾಸವಾಗಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.