ತ್ರಿವಿಧ ದಾಸೋಹ ಕ್ಷೇತ್ರ ಶ್ರೀ ಅಂಕಲಿಮಠ


Team Udayavani, May 27, 2019, 5:46 PM IST

Udayavani Kannada Newspaper

ದೇವಪ್ಪ ರಾಠೊಡ
ಮುದಗಲ್ಲ:
ವಿಶಿಷ್ಟಾದ್ವೈತ ಸಿದ್ಧಾಂತದ ತಳಹದಿ ಮೇಲೆ ನಿರ್ಮಾಣಗೊಂಡ ತಲೆಕಟ್ಟು ಗ್ರಾಮದ ಶ್ರೀ ಅಂಕಲಿಮಠವು ರಾಜ್ಯ ಮತ್ತು ನೆರೆ ರಾಜ್ಯಗಳಲ್ಲಿ ಪ್ರಸಿದ್ದಿ ಪಡೆದಿದೆ. ಸುಮಾರು 300 ವರ್ಷಕ್ಕೂ ಹೆಚ್ಚು ಇತಿಹಾಸ ಇರುವ ಶ್ರೀಮಠದ ಮೂಲ ಪುರುಷರಾದ ಶ್ರೀ ನಿರುಪಾದಿಧೀಶ್ವರರು ತಮ್ಮ ಜೀವಿತಾವಧಿಯಲ್ಲಿಯೇ 12 ಮಠಗಳನ್ನು ಸ್ಥಾಪಿಸಿದರು.

ಅಂಕಲಿಮಠ (ತಲೆಕಟ್ಟು) ಮುದಗಲ್ಲ ಪಟ್ಟಣ ದಕ್ಷಿಣ ಭಾಗದಿಂದ 12 ಕಿ.ಮೀ. ದೂರದಲ್ಲಿದೆ. ಶ್ರೀಮಠವು ನಿತ್ಯ ತ್ರಿವಿಧ ದಾಸೋಹ ತಾಣವಾಗಿರುವದು ವಿಶೇಷ. ಜಾತಿ, ಧರ್ಮವನ್ನು ಮೀರಿ ಸರ್ವಜನಾಂಗದ ಭಕ್ತಿಯ ಮಠವಾಗಿರುವ ಶ್ರೀ ಅಂಕಲಿಮಠ ಇಂದು ಲಕ್ಷಾಂತರ ಭಕ್ತ ಸಮೂಹದ ಆರಾಧ್ಯ ಕ್ಷೇತ್ರವಾಗಿರುವುದು ವಿಶೇಷ.

ಹಿನ್ನೆಲೆ: ಗೋಕಾಕ ಜಿಲ್ಲೆಯ ಅಂಕಲಗಿ ಗ್ರಾಮದ ಶ್ರೀ ಅಡವಿ ಸಿದ್ದೇಶ್ವರರು ತಮ್ಮ ಪರಮ ಶಿಷ್ಯರಾಗಿದ್ದ ಶ್ರೀ ನಿರುಪಾದಿಧೀಶ್ವರರಿಗೆ ಅಂಕಲಿಮಠಕ್ಕೆ ಹೊರಡ‌ಲು ಅಪ್ಪಣೆ ನೀಡಿದರು. ಗುರುವಿನ ಮಾತಿನಂತೆ ಹೊರಟು ನಿಂತ ಶ್ರೀಗಳಿಗೆ ಅವರ ಗುರುಗಳು ವಿಭೂತಿ (ಭಸ್ಮ) ಕಟ್ಟಿ, ಅಕ್ಕಿ, ಕಾಯಿಯನ್ನು ಕೊಟ್ಟು ಕಳುಹಿಸಿದರು. ಶಿರಬಂದನಪುರ ಆಗಿದ್ದ ಇಗಿನ ಅಂಕಲಿಮಠಕ್ಕೆ ನಿರುಪಾದಿಧೀಶ್ವರು ಬಂದು ಮಠವನ್ನು ಸ್ಥಾಪಿಸಿದ್ದು ಇಂದಿಗೂ ತ್ರಿವಿಧ ದಾಸೋಹ ಕ್ಷೇತ್ರವಾಗಿ ಭಕ್ತರ ಮನದಲ್ಲಿ ಶ್ರೀಮಠ ಪೂಜ್ಯನೀಯ ಸ್ಥಾನ ಪಡೆದಿದೆ.

ಅಂದು ಮುಳ್ಳು ಕಂಟಿಗಳಿಂದ ಕೂಡಿದ್ದ ಈ ಸ್ಥಳದಲ್ಲಿ ದುಷ್ಟಶಕ್ತಿ ಪ್ರಭಾವದಲ್ಲಿತ್ತು. ಆದರೆ ದೇವಿ ವರಶಕ್ತಿ ಪಡೆದುಕೊಂಡಿದ್ದ ಶ್ರೀ ನಿರುಪಾದಿಧೀಶ್ವರರು ಈ ಸ್ಥಳವನ್ನು ತಮ್ಮ ಆರಾಧ್ಯದೇವಿ ಸ್ಥಾಪನೆಗೆ ಬಳಸಿಕೊಂಡು ಆ ಸ್ಥಳವನ್ನು ಸ್ವಚ್ಛಗೊಳಿಸಿ ಛಲಬಿಡದ ಹಠವಾದಿಯಂತೆ ಮಠ ಸ್ಥಾಪಿಸಿದರು. ತಮ್ಮ ಗುರುಗಳು ನೀಡಿದ ವಿಭೂತಿ ಗಟ್ಟಿಯನ್ನು ಪ್ರತಿಷ್ಠಾಪಿಸಿದರು. ಅಂದಿನಿಂದ ಇಂದಿನವರೆಗೆ ಅಂಕಲಿಮಠ ಸುಕ್ಷೇತ್ರ ವರ್ಷಪೂರ್ತಿ ಜ್ಞಾನ, ಭಕ್ತಿ ಹಾಗೂ ಅನ್ನಸಂತರ್ಪಣೆ ಮೂಲಕ ತ್ರಿವಿಧ ದಾಸೋಹ ಕ್ಷೇತ್ರವೆಂದೇ ಹೆಸರು ಪಡೆದಿದೆ. ಶ್ರೀ ನಿರುಪಾದೀಶ್ವರರು ಅನೇಕ ಪವಾಡಗಳನ್ನು ಮಾಡುತ್ತ ನಡೆದಾಡುವ ದೇವರು ಎನಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಶ್ರೀ ಮಠದ ಜಾತ್ರಾ ಮಹೋತ್ಸವ ಜರುಗಲಿದ್ದು ಲಕ್ಷಾಂತರ ಭಕ್ತ ಸಮೂಹ ಸಾಕ್ಷೀಕರಿಸಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.