ಅನ್ನದಾತನಿಗೆ ಹೊರೆಯಾದ ಕೂಲಿ

ಕೃಷಿ ಚಟುವಟಿಕೆಗೆ ಕಾರ್ಮಿಕರ ಕೊರತೆ

Team Udayavani, Aug 1, 2019, 10:51 AM IST

1-Agust-10

ಮುದಗಲ್ಲ: ಆಶಿಹಾಳದ ಹೊಲವೊಂದರಲ್ಲಿ ಬಿತ್ತನೆಯಲ್ಲಿ ತೊಡಗಿದ್ದ ರೈತರು.

ದೇವಪ್ಪ ರಾಠೊಡ
ಮುದಗಲ್ಲ:
ಪಟ್ಟಣ ಸೇರಿದಂತೆ ನಾಗರಹಾಳ ಹೋಬಳಿ ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿದ ಪರಿಣಾಮ ಕೃಷಿ ಚಟುವಟಿಕೆ ಆರಂಭವಾಗಿದೆ. ಒಂದೆಡೆ ಕೂಲಿ ಕಾರ್ಮಿಕರ ಕೊರತೆ ಎದುರಾಗಿದ್ದರೆ, ದುಪ್ಪಟ್ಟು ಕೂಲಿ ರೈತರಿಗೆ ಹೊರೆಯಾಗಿ ಪರಿಣಮಿಸಿದೆ.

ಮುಂಗಾರು ಮಳೆ ಸುಮಾರು ಒಂದು ತಿಂಗಳು ತಡವಾಗಿ ಆರಂಭವಾಗಿದ್ದು, ಇತ್ತೀಚೆಗಷ್ಟೇ ಈ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಈಗ ಬಿತ್ತನೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕೃಷಿಕರು ಹೆಚ್ಚಿರುವುದರಿಂದ ಏಕಕಾಲಕ್ಕೆ ಬಿತ್ತನೆ ಚಟುವಟಿಕೆ ಶುರುವಾಗಿದೆ. ಸಣ್ಣ ರೈತರು ಕುಟುಂಬದ ಸದಸ್ಯರೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರೆ, ದೊಡ್ಡ ದೊಡ್ಡ ರೈತರು ಕೂಲಿಕಾರರನ್ನು ಅವಲಂಬಿಸಿದ್ದಾರೆ. ಹೀಗಾಗಿ ಕಾರ್ಮಿಕರ ಕೊರತೆ ಎದುರಾಗಿದ್ದು, ಸಹಜವಾಗಿಯೇ ಹೆಚ್ಚಿನ ಕೂಲಿಗೆ ಬೇಡಿಕೆ ಇಡುತ್ತಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ, ಬೇಸಾಯ ಹಾಗೂ ಕೂಲಿಗಾಗಿ ಸಾವಿರಾರು ರೂಪಾಯಿ ಮೀಸಲಿಡಬೇಕಾಗಿದೆ. ವರ್ಷದಿಂದ ವರ್ಷಕ್ಕೆ ಕೂಲಿ ದರ ಹೆಚ್ಚುತ್ತಿದ್ದು ರೈತರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ವರ್ಷದ ಹಿಂದೆ 100 ರೂ. ಇದ್ದ ಕೂಲಿ ಈಗ 200, 250ಕ್ಕೆ ತಲುಪಿದೆ ಎನ್ನುತ್ತಾರೆ ಅಡವಿಬಾವಿ ಗ್ರಾಮದ ರೈತ ಬಸನಗೌಡ ಮಾಲಿಪಾಟೀಲ.

ಕಾರ್ಮಿಕರ ಕೊರತೆ: ಇಷ್ಟು ದಿನ ಮಳೆ ಇಲ್ಲದ್ದಕ್ಕೆ ಈ ಭಾಗದ ಗ್ರಾಮ ಮತ್ತು ತಾಂಡಾಗಳಲ್ಲಿನ ಸಣ್ಣ ರೈತರು, ಕೃಷಿ ಕಾರ್ಮಿಕರು ಉದ್ಯೋಗ ಅರಸಿ ದೂರದ ಮಹಾನಗರಗಳಿಗೆ ಗುಳೆ ಹೋಗಿದ್ದಾರೆ. ಇನ್ನು ಸ್ಥಳೀಯವಾಗಿ ಇರುವವರು ಕೆಲವೆಡೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದಲ್ಲಿ ತೊಡಗಿದ್ದಾರೆ. ಹೀಗಾಗಿ ಕೃಷಿ ಚಟುವಟಿಕೆಗೆ ಕೃಷಿ ಕಾರ್ಮಿಕರ ಕೊರತೆ ಎದುರಾಗಿದೆ ಎನ್ನುತ್ತಾರೆ ರೈತರು.

ಬೆಳೆಗೆ ಜೀವ ಕಳೆ: ಖೈರವಾಡಗಿ, ಕಾಚಾಪುರ, ಬಯ್ನಾಪುರ, ಅಮದಿಹಾಳ, ಉಪ್ಪಾರ ನಂದಿಹಾಳ ಹಾಗೂ ನಾಗರಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಜೂನ್‌ ತಿಂಗಳಲ್ಲಿಯೇ ಉತ್ತಮ ಮಳೆ ಸುರಿದ ಕಾರಣ ರೈತರು ಹರ್ಷದಿಂದ ಬಿತ್ತನೆ ಆರಂಭಿಸಿದ್ದರು. ಬಿತ್ತನೆ ಮಾಡಿ 25 ದಿನಗಳೇ ಕಳೆದಿದ್ದವು. ಮತ್ತೆ ಮಧ್ಯದಲ್ಲಿ ಮಳೆ ಕೈಕೊಟ್ಟ ಕಾರಣ ಆತಂಕಗೊಂಡಿದ್ದರು. ಆದರೆ ಕಳೆದ ವಾರದಿಂದ ಉತ್ತಮ ಮಳೆ ಸುರಿದ ಕಾರಣ ಬೆಳೆಗಳಿಗೆ ಜೀವಕಳೆ ಬಂದಿದೆ. ಹತ್ತಿ, ತೊಗರಿ, ಸಜ್ಜಿ, ಹೆಸರು, ಮೆಕ್ಕೆಜೋಳ, ಎಳ್ಳು ಬೆಳೆ ಚೆನ್ನಾಗಿ ಬಂದಿದೆ. ಕೂಲಿಕಾರರ ಸಮಸ್ಯೆ ನಡುವೆಯೂ ಎಡೆಕುಂಟೆ, ಕಸ ತಗೆಯುವುದು, ರಸಗೊಬ್ಬರ ಬಳಕೆ ಕಾರ್ಯದಲ್ಲಿ ರೈತರು ತೊಡಗಿದ್ದಾರೆ.

ಎತ್ತುಗಳಿಗೆ ಬೇಡಿಕೆ: ರೈತರ ಮಿತ್ರ ಎನ್ನಿಸಿಕೊಂಡಿರುವ ಎತ್ತುಗಳಿಗೆ ಬೇಡಿಕೆ ಹೆಚ್ಚಿದೆ. ಮಳೆ ಸುರಿದಾಗ ಭೂಮಿ ಹದಗೊಳಿಸಲು, ಬಿತ್ತನೆ ಮಾಡಲು, ಎಡೆಕುಂಟಿಗೆ ರಾಸುಗಳು ಬೇಕೇಬೇಕು. ರೈತರು ರಾಸುಗಳನ್ನು ಬಾಡಿಗೆ ಪಡೆಯಲು ದಿನ ಒಂದಕ್ಕೆ 1000 ದಿಂದ 1500 ರೂ. ನೀಡಬೇಕಾಗಿದೆ. ಎಂದು ಆಶಿಹಾಳ ತಾಂಡಾದ ರೈತ ಮಾನಪ್ಪ ರಾಮದಾಸಪ್ಪ ತಿಳಿಸಿದ್ದಾರೆ.

ಭೂ ರಹಿತರು ನಗರ ಪ್ರದೇಶಗಳಿಗೆ ಗುಳೆ ಹೋಗಿದ್ದಾರೆ. ಇಲ್ಲಿಯೇ ಇರುವ ಕೆಲ ಕೂಲಿ ಕಾರ್ಮಿಕರು ನರೇಗಾ ಕೆಲಸದಲ್ಲಿ ತೊಡಗಿದ್ದಾರೆ. ಹೀಗಾಗಿ ಕೃಷಿ ಚಟುವಟಿಕೆಗೆ ಕೂಲಿಕಾರರ ಕೊರತೆ ಎದುರಾಗಿದೆ.
ದೇವಪ್ಪ ತೊಂಡಿಹಾಳ ,
ರೈತ

ಮುಂಗಾರು ತಡವಾದರೂ ಉತ್ತಮ ಮಳೆಯಾಗಿದ್ದರಿಂದ ಬೆಳೆ ಚೆನ್ನಾಗಿಬಂದಿದೆ. ರೈತರು ಕೃಷಿ ಇಲಾಖೆ ಮಾರ್ಗದರ್ಶನದಲ್ಲಿ ಕೃಷಿಯಲ್ಲಿ ತೊಡಗಿ ಹೆಚ್ಚಿನ ಇಳುವರಿ ಪಡೆಯಬಹುದು.
ವೆಂಕಟೇಶ ಕುಲಕರ್ಣಿ,
ಕೃಷಿ ಅಧಿಕಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.