ಸಮರ್ಪಕ ವಿದ್ಯುತ್‌ ಒದಗಿಸಿ

ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರ ಎದುರು ರೈತರ ಧರಣಿ

Team Udayavani, Aug 25, 2019, 1:29 PM IST

25-Agust-26

ಮುದಗಲ್ಲ: ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮುದಗಲ್ಲ: ಪದೇಪದೇ ವಿದ್ಯುತ್‌ ಕಡಿತದಿಂದ ರೋಸಿ ಹೋದ ನಾಗಲಾಪುರ ಗ್ರಾಮಸ್ಥರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಗ್ರಾಮದಲ್ಲಿನ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದ ಎದುರಿಗೆ ಶನಿವಾರ ಪ್ರತಿಭಟನೆ ನಡೆಸಿದರು.

ಕಳೆದ ಒಂದು ವರ್ಷದಿಂದ ವಿದ್ಯುತ್‌ ಕಣ್ಣಾಮುಚ್ಚಾಲೆ ಆಟ ನಿಂತಿಲ್ಲ, ಜೆಸ್ಕಾಂ ಅಧಿಕಾರಿಗಳಿಗೆ ಕೇಳಿದರು ಲೈನ್‌ ಟ್ರಿಪ್‌, ಲೈನ್‌ ಫಾಲ್ಟ್ , ಜಂಪ್‌ ಕಟ್ ಆಗಿದೆ, ಲೈನ್‌ ಕಟ್ಟಾಗಿದೆ ಎಂಬ ಉತ್ತರ ನೀಡುತ್ತಾರೆ. ನಾಗಲಾಪುರ ಪ್ರಸರಣ ಕೇಂದ್ರದಿಂದ ಸಿಂಧನೂರು, ಮಸ್ಕಿ ತಾಲೂಕಿನ ಹಳ್ಳಿಗಳಲ್ಲದೇ ಕೊಪ್ಪಳ ಜಿಲ್ಲೆಯ ಹಳ್ಳಿಗಳಿಗೂ ವಿದ್ಯುತ್‌ ಒದಗಿಸಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಪದೇಪದೆ ವಿದ್ಯುತ್‌ ಕೈಕೊಡುತ್ತಿದೆ. ಆಯಾ ತಾಲೂಕಿನ ಹಳ್ಳಿಗಳಿಗೆ ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಹಿಂದೆ ಎರಡ್ಮೂರು ಬಾರಿ ಪ್ರತಿಭಟನೆಗೆ ಮುಂದಾದಾಗ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಸಮಸ್ಯೆ ಬಗೆಹರಿಸಿಲ್ಲ, ಈಗ ಒಂದು ವಾರದಿಂದ ನಿರಂತರ ಜ್ಯೋತಿ ಲೈನ್‌ ಹಾಗೂ ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಇಲ್ಲದೇ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಅಧಿಕಾರಿಗಳು ಬರುವರೆಗೆ ಪ್ರತಿಭಟನೆ ಹಿಂಪಡೆಯುವದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಮೆದಕಿನಾಳ ಸೆಕ್ಷನ್‌ ವಿಭಾಗವನ್ನು ನಾಗಲಾಪುರ ಸೆಕ್ಷನ್‌ನಿಂದ ಬೇರ್ಪಡಿಸಬೇಕು ಎಂದು ಗ್ರಾಪಂ ಸದಸ್ಯ ಲಕ್ಷ್ಮಣ ರಾಠೊಡ ಆಗ್ರಹಿಸಿದರು.

ಲಿಂಗಸುಗೂರ ಜಿಸ್ಕಾಂ ಎಇಇ ಬನ್ನಪ್ಪ ಕರಿಬಂಟನಾಳ ಸ್ಥಳಕ್ಕೆ ಆಗಮಿಸಿ ಕನ್ನಾಳ ಲೈನ್‌ ತೆರವುಗೊಳಿಸಿ ವಿದ್ಯುತ್‌ ಸಂಪರ್ಕ ನೀಡಿದ ಬಳಿಕ ಮತ್ತು ಧರಣಿ ನಿರತರೊಂದಿಗೆ ಮಾತನಾಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಗ್ರಾಪಂ ಸದಸ್ಯರಾದ ಲಕ್ಷ್ಮಣ ರಾಠೊಡ, ಛತ್ರಪ್ಪ ಪೂಜಾರಿ, ಶಿವನಗೌಡ ಪೊಲೀಸ್‌ ಪಾಟೀಲ, ತಾಪಂ ಮಾಜಿ ಸದಸ್ಯ ಶರಣಪ್ಪ ಮಸ್ಕಿ, ಪ್ರಾಂತ ರೈತ ಸಂಘದ ಮುಖಂಡ ಆಂಜನೇಯ, ರಾಮಣ್ಣ ಗೌಂಡಿ, ಯಂಕಪ್ಪ ಒಡ್ಡರ್‌, ಬಸವರಾಜ, ಬಸವರಾಜ ಗೌಂಡಿ, ಯಮನೂರ, ಪ್ರಕಾಶ, ಬಾಲನಗೌಡ, ವೀರೇಶ, ಶ್ರೀಕಾಂತಗೌಡ ಗುತ್ತೆದಾರ, ದ್ಯಾಮಣ್ಣ ಗೌಂಡಿ, ಮುತ್ತಣ್ಣ, ಗ್ಯಾನನಗೌಡ, ಜಗನ್ನಾಥ, ಶಿವು ಸೇರಿದಂತೆ ಅನೇಕರು ಇದ್ದರು.

ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದಿಂದ ಮಸ್ಕಿ ತಾಲೂಕಿನ ಹಳ್ಳಿಗಳಿಗೆ ವಿದ್ಯುತ್‌ ಪೂರೈಸಲಾಗಿದೆ. ಅಲ್ಲಿನ ಲೈನ್‌ಮನ್‌ಗಳು ಸಮಸ್ಯೆಗಳನ್ನು ಬೇಗ ಪರಿಹರಸದ್ದರಿಂದ ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ.
ಬನ್ನೆಪ್ಪ ಕರಿಬಂಟನಾಳ,
ಜೆಸ್ಕಾಂ ಕಾರ್ಯಪಾಲನಾ ಅಭಿಯಂತರ,
ಲಿಂಗಸುಗೂರ ಉಪವಿಭಾಗ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.