ಡಾಂಬರ್‌ ರಸ್ತೆ ಗುಂಡಿಗೆ ಮರಂ

ಪುರಸಭೆ ಕ್ರಮಕ್ಕೆ ಸಾರ್ವಜನಿಕರ ಅಸಮಾಧಾನ

Team Udayavani, Jul 21, 2019, 10:37 AM IST

21-July-9

ಮುದಗಲ್ಲ: ಪಟ್ಟಣದ ಪೊಲೀಸ್‌ ಠಾಣೆ ಮುಂಭಾಗದ ಮಸ್ಕಿ ರಸ್ತೆಗೆ ಮರಂ ಹಾಕಲಾಗಿದೆ.

ಮುದಗಲ್ಲ: ಪಟ್ಟಣದಲ್ಲಿ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಪುರಸಭೆ ಡಾಂಬರ್‌-ಕಂಕರ್‌ ಹಾಕಿ ಮುಚ್ಚದೇ ಮರಂ ಹಾಕಿ ಮುಚ್ಚಲು ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣ್ಣದ ಮೂಲಕ ಹಾದುಹೋಗಿರುವ ರಾಯಚೂರ-ಬೆಳಗಾವಿ ರಾಜ್ಯ ಹೆದ್ದಾರಿ, ಮಸ್ಕಿ ರಸ್ತೆ, ಹಳೆಪೇಟೆ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಪುರಸಭೆ ಮರಂ ಹಾಕಿ ಮುಚ್ಚುತ್ತಿದೆ. ಈ ರಸ್ತೆಗಳಲ್ಲಿ ಎಡಬಿಡದೇ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಡಾಂಬರ್‌-ಕಂಕರ್‌ ಹಾಕಿ ಗುಂಡಿಗಳನ್ನು ಮುಚ್ಚಿದ್ದರೆ ವಾಹನ ಚಾಲಕರು, ಸವಾರರಿಗೆ ಅನುಕೂಲವಾಗುತ್ತಿತ್ತು. ಆದರೆ ಮರಂ ಹಾಕಿ ಮುಚ್ಚಲಾಗುತ್ತಿದ್ದು, ಮಳೆ ಬಂದರೆ ಮತ್ತೆ ಕಿತ್ತಿಕೊಂಡು ಹೋಗುತ್ತದೆ. ಅಲ್ಲದೇ ಮರಂನಿಂದ ರಸ್ತೆಯಲ್ಲೆಲ್ಲ ಧೂಳು ಏಳುತ್ತದೆ. ರಸ್ತೆ ಬದಿಯಲ್ಲಿ ಮಾರುವ ತಿಂಡಿತಿನಿಸುಗಳ ಮೇಲೆ, ಹಣ್ಣು-ತರಕಾರಿಗಳ ಮೇಲೆ ಧೂಳು ಮೆತ್ತುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.

ಸರಕಾರಿ ಆಸ್ಪತ್ರೆಯಿಂದ ಕಿಲ್ಲಾದ ಕಂದಗದವರೆಗೆ, ಪೊಲೀಸ್‌ ಠಾಣೆ ಮುಂಭಾಗದಿಂದ ವೆಂಕಟರಾಯನ ಪೇಟೆ ಸರಕಾರಿ ಶಾಲೆವರೆಗೆ, ಚಾವಡಿ ಕಟ್ಟೆಯಿಂದ ಗೋಪಾಲಕೃಷ್ಣ ಪ್ರೌಢ ಶಾಲೆವರೆಗೆ ವಿಪರೀತ ಧೂಳು ಏಳುತ್ತದೆ. ರಸ್ತೆಗೆ ವಾಹನ ಬಂದರೆ ಹಿಂಬದಿಯಲ್ಲಿ ಬರುವ ವಾಹನಗಳು ಕಾಣದಂತಾಗುತ್ತದೆ. ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳ ಮಾಲೀಕರಿಗೂ ಧೂಳಿನ ಕಿರಿಕಿರಿ ತಪ್ಪಿಲ್ಲ,

ಪುರಸಭೆಗೆ ಬಂದ ನೂತನ ಮುಖ್ಯಾಧಿಕಾರಿ ನರಸಿಂಹಮೂರ್ತಿ ಸಾರ್ವಜನಿಕರು ಕಸ-ಕಡ್ಡಿ ಬಿಸಾಡುವ ಸ್ಥಳದಲ್ಲಿ ರಂಗೋಲಿಗಳನ್ನು ಬಿಡಿಸುವ ಮೂಲಕ ಸ್ವಚ್ಛತೆಗೆ ಮುಂದಾಗಿದ್ದರು. ಆದರೆ ಈಗ ತಾವೇ ಮುಂದೆ ನಿಂತು ಡಾಂಬರ್‌ ರಸ್ತೆಗಳಲ್ಲಿ ಬಿದ್ದ ಗುಂಡಿಗಳನ್ನು ಮಣ್ಣು ಹಾಕಿ ಮುಚ್ಚಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕರವೇ ಘಟಕ ಅಧ್ಯಕ್ಷ ಎಸ್‌.ಎ. ನಯಿಮ್‌ ದೂರಿದ್ದಾರೆ. ಮರಂ ಹಾಕಿದ ಎರಡೇ ದಿನಕ್ಕೆ ಸುರಿದ ಅಲ್ಪಮಳೆಗೆ ರಸ್ತೆಗಳು ಕೆಸರು ಮಯವಾಗಿವೆ. ಕೆಸರಿನಲ್ಲಿ ತೇವಾಂಶ ಕಡಿಮೆಯಾದ ತಕ್ಷಣಕ್ಕೆ ರಭಸದಿಂದ ಬರುವ ವಾಹನಗಳಿಂದ ಧೂಳು ಏಳುತ್ತಿದೆ.

ನಿಯಮ ರೂಪಿಸಿಲ್ಲ: ಪಟ್ಟಣದಲ್ಲಿ ಯಾವುದೇ ಮನೆ, ಅಂಗಡಿಗಳನ್ನು ದುರಸ್ತಿಗೊಳಿಸಿದರೆ, ಅಥವಾ ಹಳೆ ಕಟ್ಟಡ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಲು ಬೇಕಾಗುವ ಮಣ್ಣು, ಉಸುಕು, ಕಲ್ಲು, ಕಂಕರುಗಳನ್ನು ರಸ್ತೆಯಲ್ಲಿಯೇ ಸಂಗ್ರಹಿಸಿ ಉಪಯೋಗಿಸುವುದರಿಂದ ಪಟ್ಟಣದ ಬಹುತೇಕ ಡಾಂಬರ್‌ ಮತ್ತು ಸಿಸಿ ರಸ್ತೆಗಳು ಹಾಳಾಗಿವೆ. ಪಟ್ಟಣದಲ್ಲಿ ಧೂಳು ಮತ್ತು ಕೊಳಚೆ ಸಂಗ್ರಹವಾಗುತ್ತಿದೆ. ಹೊಸ‌ ಕಟ್ಟಡಕ್ಕೆ ಪರವಾನಗಿ ನೀಡುವ ಪುರಸಭೆ ಅಧಿಕಾರಿಗಳು ಸ್ವಚ್ಛತೆಗೆ ಯಾವುದೇ ನಿಯಮವಳಿ ರೂಪಿಸದೇ ಇರುವುದು ಇದಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಹದೆಗೆಟ್ಟಿರುವ ರಸ್ತೆ, ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ಧೂಳು ಮುಕ್ತ ಪಟ್ಟಣ್ಣವನ್ನಾಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.