ಕೈಕೊಟ್ಟ ಮುಂಗಾರು-ಅನ್ನದಾತರು ಕಂಗಾಲು

•ಮುದಗಲ್ಲ ಭಾಗದಲ್ಲಿ ಹಸನಾಗದ ಭೂಮಿ •ಹಳ್ಳಿ-ತಾಂಡಾಗಳಿಗೆ ಮರಳಿ ಬಾರದ ಗುಳೆ ಹೋದ ರೈತರು-ಕಾರ್ಮಿಕರು

Team Udayavani, Jul 10, 2019, 10:55 AM IST

1–July-8

ಮುದಗಲ್ಲ: ಮಳೆ ಬಾರದ್ದರಿಂದ ರೈತರೊಬ್ಬರು ಭೂಮಿಯನ್ನು ಕೂಡ ಹಸನು ಮಾಡದೇ ಹಾಗೇ ಬಿಟ್ಟಿದ್ದಾರೆ.

ಮುದಗಲ್ಲ: ಪ್ರಸಕ್ತ ವರ್ಷವೂ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರು ಕೃಷಿ ಚಟುವಟಿಕೆಯಿಂದ ದೂರ ಉಳಿದಿದ್ದಾರೆ. ರಾಯಚೂರು ಜಿಲ್ಲೆಯ ಅಲ್ಲಲ್ಲಿ ಬಿದ್ದ ಅಲ್ಪಸ್ವಲ್ಪ ಮಳೆಗೆ ರೈತರು ಭೂಮಿಯನ್ನು ಹದ ಮಾಡಿಕೊಂಡು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಮುದಗಲ್ಲ ಭಾಗದಲ್ಲಿ ರೈತರು ಈವರೆಗೆ ಭೂಮಿ ಕೂಡ ಹಸನು ಮಾಡಿಕೊಂಡಿಲ್ಲ.

ಲಿಂಗಸುಗೂರು ತಾಲೂಕಿನ ಅನೇಕ ಹಳ್ಳಿ, ತಾಂಡಾಗಳ ರೈತರು, ಕೃಷಿ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಮಹಾನಗರಗಳಿಗೆ ಗುಳೆ ಹೋಗಿದ್ದಾರೆ. ಪ್ರತಿ ವರ್ಷ ಮಳೆ ಸುರಿದ ನಂತರ ಗ್ರಾಮಕ್ಕೆ ಮರಳುತ್ತಿದ್ದ ರೈತರು, ಕಾರ್ಮಿಕರು, ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ಇನ್ನೂ ಗ್ರಾಮಗಳತ್ತ ಮುಖ ಮಾಡಿಲ್ಲ. ತಾಲೂಕಿನಲ್ಲಿ ಉಳಿಮೆ ಮಾಡಲಾದ ಭೂಮಿಗಿಂತ ಹಾಗೇ ಬಿಟ್ಟ ಭೂಮಿಯೇ ಹೆಚ್ಚಿದೆ. ಕಳೆದ ಬಾರಿ ಇಷ್ಟೊತ್ತಿಗೆಲ್ಲ ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆಗೆ ಮುಂದಾಗಿದ್ದರು. ಆದರೆ ಈ ವರ್ಷ ಮಾತ್ರ ವರುಣ ಕೃಪೆ ತೋರದ್ದರಿಂದ ಮತ್ತೇ ಬರ ಆವರಿಸುವ ಆತಂಕ ರೈತರನ್ನು ಕಾಡುತ್ತಿದೆ.

ವಾಡಿಕೆಯಂತೆ ಜೂನ್‌ ತಿಂಗಳಲ್ಲಿ ಮುಂಗಾರು ಮಳೆ ಸುರಿದಿದ್ದರೆ ಈ ವೇಳೆಗಾಗಲೇ ಬಿತ್ತನೆ ಕಾರ್ಯ ಆರಂಭವಾಗಿ ಮುಗಿಯಬೇಕಿತ್ತು. ಆದರೆ ಸಮರ್ಪಕ ಮಳೆ ಬಾರದ್ದರಿಂದ ಕೆಲ ರೈತರು ಭೂಮಿ ಕೂಡ ಹದ ಮಾಡಿಕೊಂಡಿಲ್ಲ.

ಮುಂಗಾರಿಗೆ ಸೂರ್ಯಪಾನ, ಸಜ್ಜೆ, ತೊಗರಿ, ಹತ್ತಿ, ಎಳ್ಳು, ಹೆಸರು ಸೇರಿದಂತೆ ಇತರ ಪ್ರಮುಖ ಬೆಳೆಗಳನ್ನು ಬೆಳೆಯುವ ಈ ಪ್ರದೇಶದಲ್ಲಿ ಇನ್ನು ಮುಂದೆ ಮಳೆ ಸುರಿದಲ್ಲಿ ಬಿತ್ತನೆ ಮಾಡಿದರೂ ಸರಿಯಾಗಿ ಬೆಳೆ ಬರುವುದಿಲ್ಲ ಎನ್ನುತ್ತಾರೆ ರೈತರು.

ಮುದಗಲ್ಲ ಭಾಗದಲ್ಲಿ ಖುಷ್ಕಿ 16,290 ಹೆಕ್ಟೇರ್‌ ಹಾಗೂ ನೀರಾವರಿ 1,650 ಹೆಕ್ಟೇರ್‌ ಸೇರಿ ಒಟ್ಟು 17,940 ಹೆಕ್ಟೇರ್‌ ಮುಂಗಾರು ಬಿತ್ತನೆ ಗುರಿ ಇದೆ. ಮೇ ಮತ್ತು ಜೂನ್‌ನಲ್ಲಿ 111 ಮಿ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 54 ಮಿ.ಮೀ. ಮಳೆಯಾಗಿದೆ. ಮಳೆಯ ಕೊರತೆಯಿಂದ ಬಿತ್ತನೆ ಕುಂಠಿತಗೊಂಡಿದೆ. ಬಿತ್ತನೆಗೆ ಬೇಕಾಗುವ ಅಗತ್ಯ ಬೀಜ, ರಸಗೊಬ್ಬರವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.