ಬರ ಭೀಕರ: ಸಂತೆಗಳತ್ತ ದನ ಕರು

ಮೇವು-ನೀರಿನ ಕೊರತೆ; ಜಾನುವಾರು ಸಾಕಲು ರೈತರು ಹೈರಾಣ

Team Udayavani, Jul 8, 2019, 1:35 PM IST

08-July-26

ಮುದಗಲ್ಲ: ಸಂತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮಾರಾಟಕ್ಕೆ ಜಾನವಾರುಗಳನ್ನು ತಂದಿದ್ದರು.

ದೇವಪ್ಪ ರಾಠೊಡ
ಮುದಗಲ್ಲ
: ಮೇವ್‌ ಸಿಗಾಂಗಿಲ್ರಿ. ನೀರು ಕುಡಿಸೋದ್‌ ಕಷ್ಟ ಆಗ್ಯಾದ್ರಿ. ದನಕರ ಸಾಕೂದ್‌ ಭಾಳ್‌ ಕಷ್ಟ ಐತ್ರಿ. ಆದಕ್‌ ಮಾರಾಕ್‌ ಹತ್ತಿವ್ರಿ. ವರ್ಷ ಗಟ್ಟಲೇ ಸಾಕಿದ ಹಸು, ಎತ್ತುಗಳನ್ನು ಇನ್ನು ಮುಂದೆ ಸಾಕುವುದು ಅಸಾಧ್ಯ ಎಂದು ನಿರ್ಧರಿಸಿ ಮಾರಾಟ ಮಾಡಲು ಸಂತೆಗಳತ್ತ ಹೆಜ್ಜೆ ಇಡುತ್ತಿರುವ ರೈತರ ನೊವಿನ ನುಡಿಗಳಿವು. ನಾಲ್ಕೈದು ತಿಂಗಳಿಂದ ಮಳೆ ಇಲ್ಲದೆ ಭೂಮಿಯಲ್ಲಿ ಮೇವು ಬೆಳೆದಿಲ್ಲ. ಕಳೆದ ವರ್ಷ ಬೆಳೆದಿದ್ದ ಮೇವು ಇಲ್ಲಿಯತನಕ ಸಾಕಾಯಿತು. ಆದರೆ ಈಗ ದನಕರಗಳಿಗೆ ಮೇವಿಲ್ಲ. ನೀರು ಇಲ್ಲ. ಹೀಗಾಗಿ ಎತ್ತುಗಳನ್ನು ಮಾರಾಟ ಮಾಡುತ್ತಿದ್ದೇವೆ ಎನ್ನುತ್ತಾರೆ ರೈತ ಹುಲಗಪ್ಪ.

ಈಗ ಲಿಂಗಸುಗೂರು ತಾಲೂಕಿನ ವಿವಿಧೆಡೆ ಜಾನುವಾರುಗಳ ಮಾರಾಟ ಜೋರಾಗಿಯೇ ನಡೆದಿದೆ. ಭೀಕರ ಬರಗಾಲದಲ್ಲಿ ತಮ್ಮ ಜಾನುವಾರುಗಳನ್ನು ಸಾಕಲಾಗದೆ ರೈತರು ಸಿಕ್ಕಷ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರ ಲಾಭ ಪಡೆಯುತ್ತಿರುವ ದಲ್ಲಾಳಿಗಳು ಅಗ್ಗದ ದರದಲ್ಲಿ ಜಾನುವಾರುಗಳನ್ನು ಖರೀದಿಸಿ ಬೇರೆ ಜಿಲ್ಲೆ, ಹೊರ ರಾಜ್ಯಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಕಳೆದ ವರ್ಷ ಮುಂಗಾರು-ಹಿಂಗಾರು ಸಂಪೂರ್ಣ ವಿಫಲವಾಗಿದ್ದರಿಂದ ಮೇವು-ನೀರಿನ ಕೊರತೆ ಉಂಟಾಗಿದೆ. ಹಳ್ಳ-ಕೊಳ್ಳ, ತೆರೆದ ಬಾವಿ, ಚೆಕ್‌ಡ್ಯಾಂಗಳಲ್ಲಿನ ನೀರು ಬತ್ತಿ ಹೋಗಿದೆ. ಇಷ್ಟು ದಿನ ಒಣಮೇವು ಹಾಕಿ ಜಾನುವಾರುಗಳನ್ನು ಸಾಕಿ ಸಲುಹಿದ್ದೇವೆ. ಇನ್ನು ಮುಂದೆ ದನಕರುಗಳನ್ನು ಸಾಕುವುದು ದುಸ್ಥರವಾಗುತ್ತದೆ. ಮಾರಾಟ ಮಾಡದೆ ಬೇರೆ ದಾರಿ ಇಲ್ಲ ಎನ್ನುತ್ತಾನೆ. ಬನ್ನಿಗೋಳ ಗ್ರಾಮದ ರೈತ ಅಮರಪ್ಪ.

ಲಿಂಗಸುಗೂರು ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಸರಕಾರ ಘೋಷಣೆ ಮಾಡಿದೆ. ತಾಲೂಕಿಗೆ ಜಿಲ್ಲಾಧಿಕಾರಿಗಳು ಬರ ಪರಿಹಾರ ನೀಡುತ್ತಾರೆ. ಶಾಸಕರ ನೇತೃತ್ವದಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ಬರ ಕಾಮಗಾರಿ ಕೈಗೊಳ್ಳಲಿದೆ. ಮೇವು ಸಂಗ್ರಹ ಸೇರಿದಂತೆ, ಖಾತ್ರಿ ಯೋಜನೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ರಾಜಶೇಖರ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.