ಹೆಚ್ಚಿನ ದರಕ್ಕೆ ಯೂರಿಯಾ ಮಾರಾಟ?

•ಕೃಷಿ ಅಧಿಕಾರಿಗಳು ನೀಡುವ ಸೂಚನೆ ಪಾಲನೆಯಾಗುತ್ತಿಲ್ಲ: ರೈತರ ಆರೋಪ

Team Udayavani, Aug 10, 2019, 1:46 PM IST

10-Naveen-14

ಮುದಗಲ್ಲ: ಭತ್ತದ ಬೆಳೆಗೆ ರೈತ ಗೊಬ್ಬರ ಹಾಕಿತ್ತಿರುವುದು.

ಮುದಗಲ್ಲ: ತಾಲೂಕಿನಲ್ಲಿ ಕೃಷಿಗೆ ಅಗತ್ಯ ಯೂರಿಯಾ ಗೊಬ್ಬರ ಅಭಾವ ತಲೆದೋರಿದ್ದು, ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ. ಈ ನಡುವೆ ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇತ್ತ ಕೃಷಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ರೈತರನ್ನು ಕೆರಳಿಸಿದೆ. ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಯೂರಿಯಾ ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ. ಬೇಡಿಕೆ ಇದ್ದಾಗ ಯೂರಿಯಾ ಗೊಬ್ಬರ ಕೊರತೆಯಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಪಟ್ಟಣದ ಕೆಲವು ರಸಗೊಬ್ಬರ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರವೊಂದನ್ನೇ ಕೇಳಿದರೆ ಸ್ಟಾಕ್‌ ಇಲ್ಲ ಎಂಬ ಉತ್ತರ ಬರುತ್ತಿದೆ. ಬೇರೆ ಗೊಬ್ಬರ, ಕಳೆನಾಶಕ, ಕೀಟನಾಶಕ ಖರೀದಿಸಿದರೇ ಮಾತ್ರ ಯೂರಿಯಾ ಗೊಬ್ಬರ ಸಿಗುತ್ತದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಬೀಜ, ಗೊಬ್ಬರವನ್ನು ನಿಗದಿತ ದರದಲ್ಲಿಯೇ ಮಾರಾಟ ಮಾಡಬೇಕು, ಚೀಲದ ಮೇಲೆ ನಮೂದಿಸಿರುವ ಬೆಲೆಗೆ ಮಾರಾಟ ಮಾಡಿ ರೈತರಿಗೆ ರಸೀದಿ ನೀಡಬೇಕು. ತಪ್ಪಿದರೇ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೃಷಿ ಅಧಿಕಾರಿಗಳು ಪ್ರತಿ ವರ್ಷ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಲೇ ಬಂದಿದ್ದಾರೆ. ಆದರೆ ವಾಸ್ತವದಲ್ಲಿ ಸೂಚನೆ ಪಾಲನೆಯಾಗಿಲ್ಲ. ಯಾವ ವರ್ತಕನಿಗೆ ನೋಟಿಸ್‌ ನೀಡಿ ದಂಡ ಹಾಕಿದ ಉದಾಹರಣೆಯೇ ಇಲ್ಲ. 50 ಕೆಜಿ ಯೂರಿಯಾ ಗೊಬ್ಬರ ಚೀಲಕ್ಕೆ ಸರಕಾರ ನಿಗದಿ ಮಾಡಿದ ದರ 267 ರೂ.ಇದೆ. ಹಮಾಲಿ, ಸಾರಿಗೆ ವೆಚ್ಚ ಸೇರಿ 290 ಅಥವಾ 300ಕ್ಕೆ ಮಾರಾಟ ಮಾಡಿದರೇ ಪರವಾಗಿಲ್ಲ. ಆದರೆ ಪಟ್ಟಣದಲ್ಲಿ ಕೆಲ ವರ್ತಕರು 350 ರೂ.ಗಳಂತೆ ಮಾರಾಟ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಒಂದೂವರೇ ತಿಂಗಳು ತಡವಾಗಿ ಆರಂಭವಾದ ಮುಂಗಾರಿಗೆ ರೈತರು ಸಜ್ಜೆ, ತೊಗರಿ, ಹೆಸರು, ಸೂರ್ಯಕಾಂತಿ ಬಿತ್ತನೆ ಮಾಡಿದ್ದಾರೆ. ಈಗ ಬೆಳೆಗಳಿಗೆ ಮೇಲ್ಗೊಬ್ಬರ ಹಾಕಲು ಉತ್ತಮ ತತಿ ಇದೆ. ಆದರೆ ಅಭಾವ ಪರಿಸ್ಥಿತಿ ಮನಗಂಡ ಕೆಲ ಮಾರಾಟಗಾರರು ತಮ್ಮಲ್ಲಿರುವ ಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರುತ್ತಿದ್ದಾರೆ. ಇನ್ನು ಕೆಲವರು ಬೇರಡೆ ದಾಸ್ತಾನು ಮಾಡಿ ಅಭಾವ ಸೃಷ್ಟಿಯಾಗುವಂತೆ ಮಾಡಿದ್ದಾರೆ ಎಂಬ ಆರೋಪ ಪಟ್ಟಣ ಸೇರಿದಂತೆ ತಾಲೂಕಿನ್ಯಾದಂತ ವ್ಯಾಪಕವಾಗಿ ಕೇಳಿ ಬರುತ್ತಿದೆ.

ಗ್ರಾಮೀಣ ಭಾಗದಲ್ಲಿ ಅಂಗಡಿಗಳನ್ನು ತೆರೆದು ಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರುತ್ತಿದ್ದಾರೆ. ರೈತರಿಗೆ ಜಿಎಸ್‌ಟಿ ರಸೀದಿ ನೀಡುತ್ತಿಲ್ಲ ಎಂದು ರೈತರಾದ ಗ್ಯಾನಪ್ಪ, ಮಲ್ಲಪ್ಪ, ದುರುಗಪ್ಪ, ಭೀಮಪ್ಪ ಆರೋಪಿಸಿದ್ದಾರೆ.

ಯೂರಿಯಾ ಗೊಬ್ಬರ ಅಭಾವ ಇಲ್ಲ . ರಸ್ತೆ ರಿಪೇರಿ ಇರುವುದರಿಂದ ಸಾರಿಗೆ ಸಮಸ್ಯೆಯಾಗಿದೆ. ರೈತರು ಹೆಚ್ಚಿಗೆ ಯೂರಿಯಾ ಬಳಕೆ ನಿಲ್ಲಿಸಿ ಬೇರೆ ಗೊಬ್ಬರ ಬಳಸುವುದರಿಂದ ಉತ್ತಮ ಇಳುವರಿ ಪಡೆಯಬಹುದಾಗಿದೆ. ಯೂರಿಯಾ ಬಳಕೆಯಿಂದ ಬೆಳೆಗಳಿಗೆ ಕೋಳೆ ಮತ್ತು ಕೀಟ ಬಾಧೆ ಕಾಡುತ್ತದೆ. ಹೆಚ್ಚಿನ ದರದಲ್ಲಿ ಮಾರಾಟ ಮಾಡುವ ಬಗ್ಗೆ ಇಲಾಖೆಗೆ ಲಿಖೀತ ದೂರುಗಳು ಬಂದಿಲ್ಲ.
ಡಾ| ಚೇತನಾ ಪಾಟೀಲ,
ಜಂಟಿ ನಿರ್ದೇಶಕರು, ಕೃಷಿ ಇಲಾಖೆ

ಯೂರಿಯಾ ಗೊಬ್ಬರ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ರೈತರಿಂದ ದೂರವಾಣಿ ಮೂಲಕ ದೂರುಗಳು ಬಂದಿವೆ. ಆದರೆ ರೈತರು ಮಾರಾಟಗಾರರಿಂದ ಪಡೆದ ರಸೀದಿ ನೀಡುತ್ತಿಲ್ಲ. ಈಗಾಗಲೇ ಮೂರು-ನಾಲ್ಕು ಅಂಗಡಿಗಳ ಮಾಲೀಕರಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದೇನೆ. ಯೂರಿಯಾ ಗೊಬ್ಬರ ಹೆಚ್ಚಿನ ದರಲ್ಲಿ ಮಾರಾಟ ಮಾಡುವುದು ಅಪರಾಧ.
ಮಹಾಂತೇಶ ಹವಾಲ್ದಾರ,
 ಸಹಾಯಕ ಕೃಷಿ ನಿರ್ದೇಶಕರು

ಯೂರಿಯಾ ಬೇಡಿಕೆ ಇರುವುದರಿಂದ ಕೃತಕ ಅಭಾವ ಸೃಷ್ಟಿ ಮಾಡಿದ ಅಧಿಧಿಕೃತ ಮಾರಾಟಗಾರರು ರಾಜರೋಷವಾಗಿ ರೈತರಿಗೆ 350 ರೂ. ಗಳಂತೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಕೃಷಿ ಅಧಿಕಾರಿಗಳಿಗೆ ದೂರು ನೀಡಿದಾಗ ಡೀಲರಗಳ ಸಭೆ ಕರೆದು ಸೂಚಿಸುವುದಾಗಿ ಹೇಳಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಅಮರಣ್ಣ ಗುಡಿಹಾಳ,
ರೈತ ಹೋರಾಟಗಾರ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.