ಬೇಡಿಕೆ ಈಡೇರಿಕೆಗೆ ಒತ್ತಾಯ

•ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಸೇವಾ ಸಂಘದಿಂದ ಡಿಸಿಗೆ ಮನವಿ

Team Udayavani, Jul 8, 2019, 5:32 PM IST

08-July-46

ಮುದ್ದೇಬಿಹಾಳ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮುದ್ದೇಬಿಹಾಳ: ತಮ್ಮ 9 ಪ್ರಮುಖ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸೇವಾ ಸಂಘದ ನೂರಾರು ಸದಸ್ಯರು ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್‌ ಅವರು, ಜೂ. 24ರಂದು ಸಮಸ್ಯೆ ಬಗೆಹರಿಸುವಂತೆ ಕೋರಿ ಸಿಡಿಪಿಒಗೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿದ್ದ ಮತ್ತು ಸೂಕ್ತ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಸಿಡಿಪಿಒ ಅವರು ತಮ್ಮ ನಡವಳಿಕೆ ತಿದ್ದಿಕೊಳ್ಳಬೇಕು ಎಂದು ಹರಿಹಾಯ್ದರು.

ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 4 ತಿಂಗಳಿಂದ ಆಗದಿರುವ ಗೌರವ ಧನ ಕೂಡಲೇ ಬಿಡುಗಡೆ ಮಾಡಿ ಅವರ ಖಾತೆಗೆ ಜಮಾ ಮಾಡಬೇಕು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ, ಬಾಣಂತಿಯರಿಗೆ ಒದಗಿಸಿದ ಮೊಟ್ಟೆ, ತರಕಾರಿ ಬಿಲ್ 3 ತಿಂಗಳದ್ದು ಮಾತ್ರ ಮಾಡಿದ್ದು ಇನ್ನೂ 9 ತಿಂಗಳ ಬಿಲ್ ಮಾಡಬೇಕು.

ಮಕ್ಕಳಿಗೆ ನೀಡುವ ಮೊಟ್ಟೆಯ 2 ವರ್ಷದ ಬಿಲ್ ಮಾಡಿ ಮಕ್ಕಳಿಗೆ ಮೊಟ್ಟೆ ಕೊಡುವಲ್ಲಿ ಆಗುತ್ತಿರುವ ಸಮಸ್ಯೆ ತಪ್ಪಿಸಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳ 2 ವರ್ಷದ ಬಾಡಿಗೆ ಹಣವನ್ನು ಸಂಬಂಸಿದ ಕಟ್ಟಡ ಮಾಲಿಕರಿಗೆ ಸಂದಾಯ ಮಾಡಬೇಕು ಎಂದರು.

ಕೆಲವು ಮೇಲ್ವಿಚಾರಕಿಯರು ಅಂಗನವಾಡಿ ಕೇಂದ್ರಕ್ಕೆ ಬರುವ ಕಟ್ಟಿಗೆ ಹಣದಲ್ಲಿ 400 ರೂ., 500 ರೂ.ದಂತೆ ಸಹಾಯಕಿಯರಿಂದ ಅಕ್ರಮವಾಗಿ ವಸೂಲಿ ಮಾಡುತ್ತಿರುವುದನ್ನು ತಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಿಡಿಪಿಒ ಕಚೇರಿಯಲ್ಲಿ ಫೈಲ್ ಮಾಡುವುದಾಗಿ ಹೇಳಿ ಕೆಲ ಮೇಲ್ವಿಚಾರಕಿಯರು ಕಾರ್ಯಕರ್ತೆಯರಿಂದ ತಲಾ 1000 ರೂ. ಹಣ ಪಡೆದಿದ್ದು ಈ ಬಗ್ಗೆ ಸ್ಪಷ್ಟನೆ ನೀಡುವುದರ ಜೊತೆಗೆ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂಘದ ಪದಾಧಿಕಾರಿಗಳ ಜೊತೆ ಸಂಬಂಧಪಟ್ಟ ತಾಲೂಕುಗಳಲ್ಲಿ 3 ತಿಂಗಳಿಗೊಮ್ಮೆ ಜಂಟಿ ಸಭೆ ಕರೆಯುವಂತೆ ಆಯಾ ಸಿಡಿಪಿಒಗಳಿಗೆ ಸೂಚಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪ್ರಮುಖರಾದ ಶೋಭಾ ಘಾಟಗೆ, ಎಂ.ಬಿ. ಬಾಗಲಕೋಟ, ಎಸ್‌.ಎಸ್‌. ಕಾಖಂಡಕಿ, ಎಸ್‌.ಎಂ. ಅಂಗಡಗೇರಿ, ಅಯ್ಯಮ್ಮ ವಣಕಿಹಾಳ, ಹುಲಿಗೆಮ್ಮ ಕಂದಗಲ್ಲ, ನಾಗಮ್ಮ ನಾಟೀಕಾರ, ಚಂದ್ರಕಲಾ ಜೋಶಿ, ಸರೋಜಾ ನಾಯ್ಕೋಡಿ, ಶಶಿಕಲಾ ನಾಗರಾಳ, ಸುನಂದಾ ಸೈಲರ್‌, ಗುರುಬಾಯಿ ಲಮಾಣಿ, ಯಮನಕ್ಕ ವಡ್ಡರ ಸೇರಿ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ಕಾರ್ಯಕರ್ತೆಯರು, ಸಹಾಯಕಿಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.