ಪ್ರವಾಹ ಪೀಡಿತ ಸ್ಥಳಕ್ಕೆ ಜನಪ್ರತಿನಿಧಿಗಳ ದಂಡು

ನೀರಲ್ಲೇ ನುಗ್ಗಿದ ಕಾರುಗಳ ಮಧ್ಯೆ ಕೈ ಕೊಟ್ಟ ನಾಡಗೌಡರ ಕಾರು

Team Udayavani, Aug 18, 2019, 12:46 PM IST

18-Agust-24

ಮುದ್ದೇಬಿಹಾಳ: ಪ್ರವಾಹದ ನೀರು ರಸ್ತೆ ಮೇಲೆ ಹರಿಯುತ್ತಿರುವುದನ್ನು ಲೆಕ್ಕಿಸದೆ ಎಂ.ಬಿ. ಪಾಟೀಲ ಕಾರು ಸಾಗಿತು.

ಮುದ್ದೇಬಿಹಾಳ: ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಗ್ರಾಮಗಳಿಗೆ ಮಾಜಿ ಗೃಹ ಮಂತ್ರಿ, ಶಾಸಕ ಎಂ.ಬಿ.ಪಾಟೀಲ, ಸಿ.ಎಸ್‌. ನಾಡಗೌಡ, ಜೆಡಿಎಸ್‌ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಮಂಗಳಾದೇವಿ ಬಿರಾದಾರ ಸೇರಿದಂತೆ ಸಮಿಶ್ರ ಪಕ್ಷದ ಮುಖಂಡರು ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ ನಿರಾಶ್ರಿತರ ಅಹವಾಲು ಸ್ವೀಕರಿಸಿ ಹಾನಿಯಾದ ಬಗ್ಗೆ ರಾಜ್ಯ ಸರಕಾರದ ಮೇಲೆ ಒತಡ ಹೇರಲಾಗುವುದು ಎಂಬ ಭರವಸೆ ನೀಡಿದರು.

ತಾಲೂಕಿನ ತಂಗಡಗಿ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ನಿರಾಶ್ರಿತರ ಕೆಲ ಬೇಡಿಕೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮಾಜಿ ಗೃಹ ಸಚಿವರು ನಿರಾಶ್ರಿತರು ಯಾವುದಕ್ಕೂ ಭಯಪಡುವ ಅಗತ್ಯವಿಲ್ಲ. ರಾಜ್ಯ ಸರಕಾರ ಸೂಕ್ತವಾಗಿ ಪ್ರವಾಹ ನಿರ್ವಹಣೆ ಮಾಡಲಿದೆ. ಇಲ್ಲವಾದಲ್ಲಿ ನಿಮ್ಮೊಂದಿಗೆ ನಾವೂ ಕೂಡಾ ಹೋರಾಟ ನಡೆಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳೊನ ಎಂದು ಹೇಳಿದರು.

ನೀರಲ್ಲೇ ನುಗ್ಗಿದ ಕಾರುಗಳು: ಪ್ರವಾಹ ಪೀಡಿತ ಕುಂಚಗನೂರ ಗ್ರಾಮಕ್ಕೆ ಭೇಟಿ ನೀಡಿದ ನಂತರ ಕಮಲದಿನ್ನಿ ಗ್ರಾಮಕ್ಕೆ ಹೋಗಬೇಕಿತ್ತು. ಆದರೆ ಎರಡೂ ಗ್ರಾಮಗಳನ್ನು ಸಂಪರ್ಕಿಸುವ ಮುಖ್ಯರಸ್ತೆಯ ಒಂದು ಕಡೆ ಮೊಳಕಾಲ ಮಟ್ಟದವರೆಗೂ ಪ್ರವಾಹದ ನೀರು ತುಂಬಿತ್ತು. ಅಲ್ಲಿ ವಾಹನ ಸಂಚರಿಸಲು ಪ್ರಯಾಸ ಪಡುವ ಸ್ಥಿತಿ ಇತ್ತು.

ಆದರೂ ಮಾಜಿ ಸಚಿವ ನಾಡಗೌಡರ ಸೂಚನೆ ಮೇರೆಗೆ ಎಂ.ಬಿ. ಪಾಟೀಲ ಮತ್ತು ಕಾಂಗ್ರೆಸ್‌ ಧುರೀಣರು ಇದ್ದ ಕಾರುಗಳನ್ನು ಚಾಲಕರು ನೀರಲ್ಲೇ ವೇಗವಾಗಿ ಚಲಾಯಿಸಿಕೊಂಡು ಈ ಕಡೆಯಿಂದ ಆ ಕಡೆಗೆ, ಮರಳಿ ಆ ಕಡೆಯಿಂದ ಈ ಕಡೆಗೆ ಬಂದರು. ಈ ವೇಳೆ ಪ್ರವಾಹದ ನೀರು ವಿಂಡ್‌ಶೀಲ್ಡ್ ಎತ್ತರಕ್ಕೂ ಚಿಮ್ಮಿ ಕಾರಂಜಿಯಂತೆ ಪುಟಿಯುತ್ತಿದ್ದು ನೋಡುಗರಿಗೆ ಮನರಂಜನೆ ಒದಗಿಸಿತು.

ಈ ವೇಳೆ ಶಾಸಕರ ಧೈರ್ಯವನ್ನು ಕಾಂಗ್ರೆಸ್ಸಿಗರು ಕೊಂಡಾಡಿದರು. ಆದರೆ ಮಾಜಿ ಸಚಿವ ನಾಡಗೌಡರ ಕಾರು ಮಾತ್ರ ನೀರಲ್ಲಿ ಸಿಕ್ಕಿಹಾಕಿಕೊಂಡು ಏರ್‌ಫಿಲ್ಟರ್‌ನಲ್ಲಿ ನೀರು ನುಗ್ಗಿ ಏಕಾಏಕಿ ಬಂದ್‌ ಆಯಿತು. ಮರಳಿ ಎಷ್ಟೇ ಪ್ರಯತ್ನಿಸಿದರೂ ಚಾಲೂ ಆಗಲಿಲಲ್ಲ. ಆಗ ಅದರಲ್ಲಿದ್ದ ಎಂ.ಬಿ. ಪಾಟೀಲರ ಆಪ್ತ ಸಹಾಯಕ ಮಹಾಂತೇಶ ಬಿರಾದಾರ, ನಾಡಗೌಡರ ಆಪ್ತ ಸಹಾಯಕ ಮಲ್ಲಿಕಾರ್ಜುನ ಬಾಗೇವಾಡಿ, ಕಾಂಗ್ರೆಸ್‌ ಧುರೀಣ ರಾಯನಗೌಡ ತಾತರಡ್ಡಿ ಮತ್ತಿತರರು ಕೆಳಗಿಳಿದು ಕಾರನ್ನು ಹಿಂದಿನಿಂದ ತಳ್ಳಿ ನೀರು ದಾಟಿಸಿದರು. ನಂತರ ಹೇಗೋ ಕಾರನ್ನು ತಂಗಡಗಿ ಗ್ರಾಮದವರೆಗೆ ಇನ್ನೊಂದು ವಾಹನದ ಸಹಾಯದಿಂದ ತಂದು, ಅಲ್ಲಿ ದುರಸ್ತಿ ಮಾಡಿಸಿಕೊಂಡು ನಂತರ ಮುದ್ದೇಬಿಹಾಳಕ್ಕೆ ತರಲಾಯಿತು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.