ಪ್ರವಾಹ ಭೀತಿ: 20 ಕುಟುಂಬ ಸ್ಥಳಾಂತರ

•ಅಧಿಕಾರಿಗಳಿಂದ ಅಗತ್ಯ ಕ್ರಮ •ಪರಿಸ್ಥಿತಿ ವರದಿ ಸಲ್ಲಿಸಲು ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

Team Udayavani, Aug 10, 2019, 1:35 PM IST

10-Naveen-13

ಮುದ್ದೇಬಿಹಾಳ: ಕಮಲದಿನ್ನಿ, ಕುಂಚಗನೂರ ಗ್ರಾಮಕ್ಕೆ ಎಸಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮೀನುಗಾರಿಕೆ ಬೋಟ್‌ನಲ್ಲಿ ಸಂಚರಿಸಿ ಪರಿಸ್ಥಿತಿ ಖುದ್ದು ಪರಿಶೀಲನೆ ನಡೆಸಿದರು.

ಮುದ್ದೇಬಿಹಾಳ: ಕೃಷ್ಣಾ ನದಿಯ ಪ್ರವಾಹ ನಿರೀಕ್ಷಿತ ಹಾನಿ ತಂದೊಡ್ಡುವ ಸಂಭವ ಅರಿತ ಅಧಿಕಾರಿಗಳ ತಂಡ ತಾಲೂಕಿನ ಕೃಷ್ಣಾ ನದಿ ದಂಡೆಯ ತಂಗಡಗಿ, ಕುಂಚಗನೂರ, ಕಮಲದಿನ್ನಿ, ಮುದೂರ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಪ್ರವಾಹದ ಮುನ್ನೆಚ್ಚರಿಕೆ ಕ್ರಮವಾಗಿ ಒಟ್ಟು 20 ಕುಟುಂಬಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಂಡಿದ್ದಾರೆ. ಸ್ಥಳಾಂತರಗೊಂಡವರಿಗೆಲ್ಲ ಆಯಾ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ವಸತಿ ಹೂಡಲು ವ್ಯವಸ್ಥೆ ಮಾಡಿದ್ದು ಇವರಿಗೆಲ್ಲ ಶಾಲೆಯ ಬಿಸಿಯೂಟ ಕೊಡಲು ಸೂಚಿಸಲಾಗಿದೆ.

ಶುಕ್ರವಾರ ಸಂಜೆ ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ನೇತೃತ್ವದ ಅಧಿಕಾರಿಗಳ ತಂಡ ತಂಗಡಗಿ, ಕುಂಚಗನೂರ, ಕಮಲದಿನ್ನಿ ಗ್ರಾಮಕ್ಕೆ ವಸ್ತುಸ್ಥಿತಿ ಅವಲೋಕಿಸಲು ಆಗಮಿಸಿತ್ತು. ಮೊದಲಿಗೆ ಕುಂಚಗನೂರ ಗ್ರಾಮಕ್ಕೆ ತೆರಳಿ ಅಧಿಕಾರಿಗಳು ಪರಿಶೀಲಿಸಿ ಅಲ್ಲಿ ಜನವಸತಿಗೆ ಪ್ರವಾಹದಿಂದ ಯಾವುದೇ ಸಮಸ್ಯೆ ಇಲ್ಲ ಎನ್ನುವುದನ್ನು ಮನಗಂಡರು. ನಂತರ ಕಮಲದಿನ್ನಿಗೆ ತೆರಳಬೇಕಾದರೆ ಕುಂಚಗನೂರ-ಕಮಲದಿನ್ನಿ ರಸ್ತೆ ನಡುವೆ ಒಂದು ಭಾಗದಲ್ಲಿ ಪ್ರವಾಹದ ನೀರಿನಿಂದ ಭರ್ತಿ ಆಗಿತ್ತು. ಹೀಗಾಗಿ ಗ್ರಾಮಸ್ಥರೊಬ್ಬರ ಟ್ರ್ಯಾಕ್ಟರ್‌ ಏರಿದ ಅಧಿಕಾರಿಗಳು ಪ್ರವಾಹದ ನೀರಲ್ಲೆ ಸಾಗಿ ಬಂದರು. ಕಮಲದಿನ್ನಿಯಲ್ಲಿ ಅಂದಾಜು 6 ಮನೆಗಳು ನದಿಗೆ ಸಮೀಪ ಇದ್ದು ಈ ಮನೆಗಳ ಗೋಡೆಗಳಿಗೆ ಪ್ರವಾಹದ ನೀರು ಅಪ್ಪಳಿಸುತ್ತಿರುವುದನ್ನು ತಿಳಿದು ಖುದ್ದು ಪರಿಶೀಲಿಸಲು ಮೀನುಗಾರರ ಬೋಟ್‌ನಲ್ಲಿ ಕುಳಿತು ಪರಿಸ್ಥಿತಿ ಅವಲೋಕಿಸಿದರು. ಈ ಮನೆಗಳಿಗೆ ಧಕ್ಕೆ ಆಗುವುದನ್ನು ಮನಗಂಡು ಆ ಕೂಡಲೇ ಅವರೆಲ್ಲರನ್ನೂ ಸ್ಥಳೀಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡರು.

ಮರಳಿ ತಂಗಡಗಿ ಗ್ರಾಮಕ್ಕೆ ಬರುವಾಗ ಅಲ್ಲಿನ ಹರಿಜನ ಕಾಲೋನಿಯ 4 ಕುಟುಂಬಗಳ ಮನೆಗಳು ಪ್ರವಾಹದ ನೀರಿಗೆ ತೀರ ಹತ್ತಿರದಲ್ಲಿರುವುದನ್ನು ಕಂಡರು. ಯಾವುದೇ ಕ್ಷಣದಲ್ಲಿ ಪ್ರವಾಹದ ನೀರು ಹೆಚ್ಚಳವಾಗಬಹುದು ಎನ್ನುವುದನ್ನು ಅರಿತು ಮುನ್ನೆಚ್ಚರಿಕೆ ಕ್ರಮವಾಗಿ ಆ ಕುಟುಂಬಗಳನ್ನೂ ಸಹಿತ ಸ್ಥಳೀಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡರು.

ಈ ಮಧ್ಯೆ ಕಮಲದಿನ್ನಿ ಭಾಗದಲ್ಲಿ ಪ್ರವಾಹದ ಹಾನಿ ಹೆಚ್ಚಾಗುವ ಸಂಭವ ಇದ್ದುದನ್ನು ಖುದ್ದು ಪರಿಶೀಲಿಸಿ ಖಚಿತಪಡಿಸಿಕೊಂಡಿದ್ದ ಉಪ ವಿಭಾಗಾಧಿ ಕಾರಿ ಗೆಣ್ಣೂರ ಅವರು ಜಿಲ್ಲಾ ನೋಡಲ್ ಅಧಿಕಾರಿಯೂ ಆಗಿರುವ ಕೃಷಿ ಇಲಾಖೆ ಅಧಿಕಾರಿ ಪ್ರಸಾದ್‌, ತಂಗಡಗಿ ಪಿಡಿಒ ಖೂಬಾಸಿಂಗ್‌ ಜಾಧವ, ಆ ಭಾಗದ ಗ್ರಾಮ ಲೆಕ್ಕಾಧಿಕಾರಿಗಳ ತಂಡವನ್ನು ಮುಂದಿನ ಬೆಳವಣಿಗೆ ಗಮನಿಸಿ ವರದಿ ಸಲ್ಲಿಸಲು ನೇಮಿಸಿದರು. ಅದೇ ರೀತಿ ಮುದೂರಕ್ಕೆ ಇಒ ಶಶಿಕಾಂತ, ಪಿಡಿಒ ಮುದಗಲ್ಲ, ಗ್ರಾಮ ಲೆಕ್ಕಾಧಿಕಾರಿ ತಂಡವನ್ನು ನೇಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮಕ್ಕೆ ಸೂಚಿಸಿದರು.

ಸ್ಥಳಾಂತರ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಉಪ ವಿಭಾಗಾಕಾರಿ ಸೋಮಲಿಂಗ ಗೆಣ್ಣೂರ, ಕಮಲದಿನ್ನಿ, ಗಂಗೂರ, ಕುಂಚಗನೂರ, ತಂಗಡಗಿ, ಮುದೂರ ಗ್ರಾಮಗಳಿಗೆ ಮಾತ್ರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಳಹಂತದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಪರಿಸ್ಥಿತಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಆರೋಗ್ಯ ಸಿಬ್ಬಂದಿ ಕೂಡಾ ಸಾಂಕ್ರಾಮಿಕ ರೋಗ ತಡೆಗಟ್ಟಲು ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ. ಎಲ್ಲರ ಸಾಂಘಿಕ, ಒಗ್ಗಟ್ಟಿನ ಪ್ರಯತ್ನದಿಂದ ಪ್ರವಾಹದ ಗಂಭೀರ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಲು ಜಿಲ್ಲಾಡಳಿತ ಎಲ್ಲ ತಯಾರಿ ಮಾಡಿಕೊಂಡಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.