ಮಿನಿ ವಿಧಾನಸೌಧದಲ್ಲಿ ಅವ್ಯವಸ್ಥೆ ಸರಿಪಡಿಸಿ

ಶೌಚಾಲಯ ಸಮಸ್ಯೆಯಿಂದ ಬೇಸತ್ತಿದ್ದಾರೆ ಜನ •ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ

Team Udayavani, May 5, 2019, 10:25 AM IST

5-MAY-5

ಮುದ್ದೇಬಿಹಾಳ: ಪಟ್ಟಣದ ಮಿನಿ ವಿಧಾನಸೌಧದ ಹೊರನೋಟ.

ಮುದ್ದೇಬಿಹಾಳ: ಅಯ್ಯೋ ಇದು ಮಿನಿ ವಿಧಾನಸೌಧವೋ ಇಲ್ಲಾ ಬಸ್‌ ನಿಲ್ದಾಣವೋ ಒಂದೂ ತಿಳಿಯುತ್ತಿಲ್ಲ. ಇವರು ಜನರಿಗೆ ಸ್ವಚ್ಛ ಭಾರತ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಮಿನಿ ವಿಧಾನಸೌಧ ಯಾವಾಗ ಸ್ವಚ್ಛವಾಗುತ್ತೂ. ದೇವರೇ ಬಲ್ಲ ಎನ್ನುವಂತಾಗಿದೆ.

ಇದು ಮುದ್ದೇಬಿಹಾಳ ಪಟ್ಟಣದ ಹುಡ್ಕೊ ಕಾಲೋನಿಯಲ್ಲಿರುವ ಮಿನಿ ವಿಧಾನಸೌಧದ ದುಸ್ಥಿತಿ. ಸ್ವಚ್ಛ ಭಾರತ ಯೋಜನೆ ಬಗ್ಗೆ ತಾಲೂಕಾಡಳಿತ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಪ್ರತಿಯೊಂದು ಮನೆಗೆ ಒಂದು ಶೌಚಾಲಯ ನಿರ್ಮಿಸಿಕೊಳ್ಳಲು ಇದೇ ಯೋಜನೆಯಡಿ ಸಹಾಯಧನವನ್ನೂ ನೀಡುತ್ತದೆ. ಆದರೆ ಮಿನಿ ವಿಧಾನಸೌದ ಕಟ್ಟಡದಲ್ಲಿ ಮಾತ್ರ ಶೌಚಾಲಯವೇ ಇಲ್ಲದಂತಾಗಿದೆ. ಇದು ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿತನ ಎತ್ತಿ ತೋರಿಸುವಂತಿದೆ.

ಇಲ್ಲಿನ ಮಿನಿ ವಿಧಾನಸೌದದಲ್ಲಿ ಉಪ ನೋಂದಣಾಧಿಕಾರಿ, ನೆಮ್ಮದಿ, ಭೂಮಿ, ತಹಶೀಲ್ದಾರ್‌, ಸಿಟಿ ಸರ್ವೆ, ಉಪ ಖಜಾನೆ , ಚುನಾವಣೆ ವಿಭಾಗದ, ಆಹಾರ ಇಲಾಖೆ ಸೇರಿದಂತೆ ಇನ್ನಿತರ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಕಚೇರಿಗಳಿಗೆ ನಿತ್ಯವೂ ಸಾವಿರಾರು ಜನರು ತಮ್ಮ ಕೆಲಸದ ನಿಮಿತ್ತ ಆಗಮಿಸಿ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತು ತಮ್ಮ ಕೆಲಸಗಳನ್ನು ಮುಗಿಸಿಕೊಳ್ಳುವಂತಾರೆ. ಆದರೆ ಮಲಮೂತ್ರ ವಿಸರ್ಜನೆಗೆ ಶೌಚಾಲಯವಿಲ್ಲದೆ ಸಾರ್ವಜನಿಕರು ಪರಾದಡುವಂತಾಗುತ್ತದೆ.

ಅಧಿಕಾರಿಗಳ ನಿರ್ಲಕ್ಷ್ಯ: ಮಿನಿ ವಿಧಾನಸೌಧದಲ್ಲಿ ಉದ್ಘಾಟನಾ ಸಮಯದಲ್ಲಿ ಶೌಚಾಲಯವಿತ್ತು. ಆದರೆ ನಂತರ ದಿನಗಳಲ್ಲಿ ಶೌಚಾಲಯ ನಿರ್ವಹಣೆಯಲ್ಲಿ ತಾಲೂಕಾಡಳಿತ ಅಧಿಕಾರಿಗಳು ನಿರ್ಲಕ್ಷಿಸಿದ ಹಿನ್ನೆಲೆ ಕೇವಲ ಒಂದೇ ವರ್ಷದಲ್ಲಿಯೇ ನಿರ್ಮಾಣ ಮಾಡಿದ ಶೌಚಾಲಯದ ಬಾಗಿಲಿಗೆ ಬೀಗ ಜಡಿಯಲಾಗಿದೆ.

ಕಸದ ಬುಟ್ಟಿ ಇಡಿ: ತಹಶೀಲ್ದಾರ್‌ ಕಚೇರಿಗೆ ಸಾವಿರಾರು ಜನರು ಆಗಮಿಸುತ್ತಾರೆ. ಈ ಸಮಯದಲ್ಲಿ ಅನುಪಯುಕ್ತ ಕಾಗದ ಪತ್ರಗಳು ಹಾಗೂ ಪ್ಲಾಸ್ಟಿಕ್‌ ಹಾಳೆಗಳನ್ನು ಎಲ್ಲೆಂದರಲ್ಲಿ ಎಸೆಯತ್ತಾರೆ. ಇದರಿಂದ ಮಿನಿ ವಿಧಾನಸೌಧ ಆವರಣ ಕಸದಿಂದ ಕೂಡಿದ್ದು ಮಿನಿ ವಿಧಾನಸೌಧ ಕಚೇರಿಯಲ್ಲಿ ಒಂದು ಕಸದ ಬುಟ್ಟಿ ಇಡಲು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿಯೇ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ ನಿರ್ವಹಣೆ ಸಾಧ್ಯವಾದಗ ಕಾರಣ ಶೌಚಾಲಯವನ್ನು ಬಂದ್‌ ಮಾಡಿಸಲಾಗಿತ್ತು. ಈಗಾಗಲೇ ಅವುಗಳನ್ನು ಪುರಸಭೆ ಕಾರ್ಮಿಕರಿಂದ ಸ್ವಚ್ಛಗೊಳಿಸಲಾಗಿದ್ದು ಶೀಘ್ರದಲ್ಲಿಯೇ ಶೌಚಾಲಯ ಬಾಗಿಲು ತೆರೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು. ಆದರೆ ಶೌಚಾಲಯಗಳನ್ನು ಉಪಯೋಗಿಸುವಾದ ಸಾರ್ವಜನಿಕರೂ ಸ್ವಚ್ಛತೆಗೆ ಮಹತ್ವ ನೀಡಬೇಕಿದೆ.
ವಿನಯಕುಮಾರ ಪಾಟೀಲ,
ತಹಶೀಲ್ದಾರ್‌, ಮುದ್ದೇಬಿಹಾಳ

ತಹಶೀಲ್ದಾರ್‌ ಕಚೇರಿಯೊಳಗ್‌ ಶೌಚಾಲಯ ಚಾಲು ಮಾಡ್ರಿ ಅಂತಾ ಎಷ್ಟೇ ಹೇಳಿದ್ರೂ ಯಾರೂ ಕಿವಿಗೆ ಹಾಕಿಕೊಳ್ಳಾಕತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಎಷ್ಟು ತೊಂದರೆಯಾಗಿದೆ ಅಂತಾ ಅವರಿಗೆ ತಿಳಿದಿಲ್ಲಾ. ಹಿಂದಿದ್ದ ತಹಶೀಲ್ದಾರ್‌ ಬಾಗವಾನ ಅವರಿಗೂ ಸಾಕಷ್ಟು ಬಾರಿ ಹೇಳಿದ್ವಿ. ಅವರೂ ನಮ್ಮ ಮಾತಿಗೆ ಕಿಮ್ಮತ್ತು ಕೊಡಲಿಲ್ಲ. ಈಗ ಹೊಸ ತಹಶೀಲ್ದಾರ್‌ ಸಾಹೇಬ್ರು ಬಂದಾರಾ. ಇವರಾದ್ರೂ ಶೌಚಾಲಯವನ್ನು ಚಾಲು ಮಾಡಿದ್ರ ಚಲೊ ಆಗತೈತ್ರಿ.
•ಹನುಮಂತ ದಾಸರ
ಅಧ್ಯಕ್ಷರು, ರಿಪಬ್ಲಿಕ್‌ ಸೇನೆ, ಮುದ್ದೇಬಿಹಾಳ

ಶಿವಕುಮಾರ ಶಾರದಳ್ಳಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.