ಕುಂಟೋಜಿಯಲ್ಲಿ ಅಮಾನವೀಯ ಘಟನೆ

ಒಂದು ಚಕ್ಕಡಿಗೆ ಒಂದು ಕುದುರೆ ಮತ್ತೂಂದು ಎತ್ತು ಕಟ್ಟಿ ರೇಸ್‌•ಜಬರಿಯಿಂದ ಏಟು

Team Udayavani, Aug 31, 2019, 4:22 PM IST

31-Agust-34

ಮುದ್ದೇಬಿಹಾಳ: ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಿಮಿತ್ತ ಏರ್ಪಡಿಸಿದ್ದ ಕುದರೆ ಮತ್ತು ಎತ್ತುಗಳ ರೇಸ್‌ನಲ್ಲಿ ಎತ್ತಿಗೆ ರಕ್ತ ಬರುವ ರೀತಿಯಲ್ಲಿ ಹೊಡೆಯುತ್ತಿರುವ ಸ್ಪರ್ಧಿ.

ಮುದ್ದೇಬಿಹಾಳ: ಒಂದು ಚಕ್ಕಡಿಗೆ ಒಂದು ಕುದುರೆ ಮತ್ತೂಂದು ಎತ್ತು ಕಟ್ಟಿ ರೇಸ್‌ ಮಾಡಿಸಿ ಓಟದಲ್ಲಿ ಎತ್ತಿನ ವೇಜ್‌ ಕಡಿಮೆಯಾದರೆ ಎತ್ತಿನ ಚರ್ಮ ಹರಿಯುವಂತೆ ಜಬರಿಯಿಂದ ಬಾರಿಸುತ್ತ್ತ ಓಟದಲ್ಲಿ ಭಾಗಿಯಾದ ಅಮಾನವೀಯ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ನಡೆದಿದೆ.

ಪ್ರತಿ ಶ್ರಾವಣ ಮಾಸದ ಕೊನೆ ಸೋಮವಾರ ನಡೆಯುವ ನಂದಿ ಬಸವೇಶ್ವರ ಜಾತ್ರೆಯ ನಿಮಿತ್ತ ಜಾತ್ರಾ ಕಮೀಟಿಯಿಂದ ಇಂತಹ ಅಮಾನವೀಯ ಸ್ಪರ್ಧೆ ಏರ್ಪಡಿಸಲಾಗಿತ್ತು. ಗ್ರಾಮದಲ್ಲಿ ಇಂತಹ ರೇಸ್‌ಗೆ ಸಾಕಷ್ಟು ವಿರೋಧವಿದ್ದರೂ ಪ್ರತಿ ವರ್ಷವೂ ಈ ಸ್ಪರ್ಧೆ ನಡೆಸುತ್ತ್ತ ಬರಲಾಗುತ್ತದೆ. ಪ್ರಾಣಿ ಹಿಂಸೆ ಮಾಡಬಾರದು ಎಂಬ ಕಾನೂನು ಇದ್ದರೂ ಕುಂಟೋಜಿ ಗ್ರಾಮಕ್ಕೆ ಮಾತ್ರ ಇಲ್ಲದಂತಾಗಿತ್ತು.

ರೇಸ್‌ ಸ್ಪರ್ಧೆಯಲ್ಲಿ ಒಂದು ಚಕ್ಕಡಿಯಲಿ ಇಬ್ಬರು ಸ್ಪರ್ಧಿಗಳು ಭಾಗಿಯಾಗುವದು ಹಾಗೂ ಚಕ್ಕಡಿಗೆ ಒಂದು ಎತ್ತನ್ನು ಕಟ್ಟಿದರೆ ಇನ್ನೊಂದಕ್ಕೆ ಕುದುರೆಯನ್ನು ಕಟ್ಟಲಾಗಿತ್ತು. ಕುದುರೆಯ ಸರಿಸಾಟಿಯಾಗಿಯೇ ಎತ್ತು ಓಟ ಮಾಡಬೇಕು. ಇಲ್ಲವಾದಲ್ಲಿ ಚಕ್ಕಡಿಯಲ್ಲಿದ್ದ ಒಬ್ಬ ಹಗ್ಗವನ್ನು ಹಿಡಿದರೆ ಇನ್ನೊಬ್ಬ ಎತ್ತಿಗೆ ಛಡಿ ಏಟು ನೀಡುವನು. ಈ ಓಟದ ಸ್ಪರ್ಧೆಯಲ್ಲಿ ಎತ್ತಿಗೆ ಚಡಿ ಏಟು ಬಿಳುತ್ತಿದ್ದು ರಕ್ತ ಸುರಿಯುತ್ತಿದ್ದನ್ನು ಕಂಡು ನೂರಾರು ಜನರ ಕಣ್ಣಲ್ಲಿ ನೀರು ಬಂದಂತಾಯಿತು.

ಎತ್ತಿಗೆ ಕರೆಂಟ್ ಶಾಕ್‌: ಚಕ್ಕಡಿ ಸ್ಪರ್ಧೆಗೆ ಚಾಲನೆ ನೀಡುತ್ತಿದ್ದಂತೆ ಕೆಲ ಸ್ಪರ್ಧಿಗಳು ಜಾತ್ರಾ ಕಮೀಟಿ ಕಣ್ಣು ತಪ್ಪಿಸಿ ಎತ್ತುಗಳಿಗೆ ಕರೆಂಟ್ ಶಾಕ್‌ ನೀಡಿದ್ದು ಕಂಡು ಬಂತು. ಪ್ರಾಣಿಗೆ ಯಾವುದೇ ರೀತಿಯ ಕರೆಂಟ್ ಶಾಕ್‌ ನೀಡುವುದು ಕಾನೂನು ಬಾಹೀರವಾಗಿದ್ದರೂ ಕುಂಟೋಜಿಯಲ್ಲಿ ಯಾವುದೇ ಕಾನೂನು ಎದುರಾಗಲಿಲ್ಲ್ಲ ಎಂದು ಸ್ಥಳೀಯರು ಮಾತನಾಡಿದರು.

ಅಧಿಕಾರಿಗಳ ನಿರ್ಲಕ್ಷ್ಯ: ಜಾತ್ರಾ ಕಮೀಟಿಯವರು ಜಾತ್ರೆಯಲ್ಲಿ ಯಾವುದೇ ರೀತಿಯ ಹಿಂಸೆಯ ಸ್ಪರ್ಧೆಗಳನ್ನು ನಡೆಸಬಾರದು ಎಂದು ತಾಲೂಕು ಮಟ್ಟದ ಅಧಿಕಾರಿಗಳು ಮುನ್ನೆಚ್ಚರಿಕೆಯನ್ನು ಪ್ರತಿಯೊಂದು ಜಾತ್ರೆಯಲ್ಲೂ ನೀಡುತ್ತಾರೆ. ಆದರೆ ಗುರುವಾರ ಕುಂಟೋಜಿಯಲ್ಲಿ ನಡೆದ ಜಾತ್ರಾ ಸ್ಪರ್ಧೆಯಲ್ಲಿ ಎತ್ತುಗಳಿಗೆ ಹಿಂಸೆಯನ್ನು ನೀಡುತ್ತಿದ್ದರೂ ಅಧಿಕಾರಿಗಳು ಮಾತ್ರ ಸ್ಥಳದಲ್ಲಿ ಕಾಣಲಿಲ್ಲ ಎಂದು ಗ್ರಾಮದ ಪ್ರಜ್ಞಾವಂತ ನಾಗರಿಕರು ದೂರುತ್ತಿದ್ದಾರೆ.

ಗ್ರಾಮದಲ್ಲಿ ನಡೆಯುವ ಬಸವೇಶ್ವರ ಜಾತ್ರೆಯಲ್ಲಿ ಪ್ರತಿ ವರ್ಷವೂ ಈ ಅಮಾನವೀಯ ಘಟನೆಯ ಸ್ಪರ್ಧೆ ಏರ್ಪಡಿಸಲಾಗುತ್ತಿದೆ. ಇದರ ಬಗ್ಗೆ ಸಾಕಷ್ಟು ಬಾರಿ ನಾನು ವಿರೋಧಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೇ ಹಿಂದೆ ಈ ಸ್ಪರ್ಧೆಯಿಂದ ಕೆಲವರು ಪ್ರಾಣವನ್ನೆ ಕಳೆದುಕೊಂಡಿರೆ ಇನ್ನೂ ಕೆಲ ಎತ್ತುಗಳೂ ಸಾವಿಗಿಡಾಗಿವೆ. ಈಗಲಾದರೂ ಅಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.
ಬಿ.ಎಚ್.ಹುಲಗಣ್ಣಿಕುಂಟೋಜಿ ಗ್ರಾಮಸ್ಥ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.