ಪೇಜಾವರ ಶ್ರೀಗೆ ಭಾವಪೂರ್ಣ ನಮನ

ಕೋಮು ಸೌಹಾರ್ದದ ಸೇತುವೆಯಾಗಿದ್ದ ಶ್ರೀ ಜನಸಾಮಾನ್ಯರಿಗೆ ಹತ್ತಿರವಾಗಿದ್ದ ಸ್ವಾಮೀಜಿ

Team Udayavani, Dec 30, 2019, 11:18 AM IST

30-December-2

ಮುದ್ದೇಬಿಹಾಳ: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಎಲ್ಲ ಕಾಲಕ್ಕೂ, ಎಲ್ಲ ಕಡೆ, ಎಲ್ಲ ಧರ್ಮಗಳಿಗೆ ಸಲ್ಲುವ ಮೇರು ವ್ಯಕ್ತಿತ್ವದ ಸಂತರು, ದಾರ್ಶನಿಕರು ಆಗಿದ್ದರು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದ್ದಾರೆ.

ಇಲ್ಲಿನ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ರವಿವಾರ ಸಂಜೆ ಬಿಜೆಪಿ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಶ್ರೀಪಾದಂಗಳಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ರೀಪಾದಂಗಳು ಹಿಂದೂ, ಮುಸ್ಲಿಂ ಕೋಮು ಸೌಹಾರ್ದದ ಸೇತುವೆಯಾಗಿದ್ದರು. ತಮ್ಮ ಮಠದಲ್ಲಿ ಮುಸ್ಲಿಮರಿಗೆ ಇಫ್ತಾರ್‌ ಕೂಟ ಏರ್ಪಡಿಸುವ ಮೂಲಕ ಈ ನೆಲದಲ್ಲಿ ವಾಸಿಸುವ ಮುಸ್ಲಿಮರೂ ಸಹಿತ ಭಾರತೀಯರು, ಸಲ್ಲ ಧರ್ಮಗಳೂ ಸಮಾನ ಎನ್ನುವ ಸಂದೇಶವನ್ನು ಸಾರಿದ್ದರು.

ಹಿಂದೂ ಧರ್ಮದ ಆಚರಣೆಯನ್ನು ಜಾರಿಗೊಳಿಸಿ ಈ ಧರ್ಮದ ಮಹತ್ವ ಸಾರಿದ್ದರು. ಈ ಭೂಮಿ ಮೇಲೆ ಸಾಕಷ್ಟು ರಾಷ್ಟ್ರಗಳಿದ್ದು ಬಹಳಷ್ಟು ಧರ್ಮಗಳು ಅಲ್ಲಲ್ಲಿ ಜನ್ಮ ತಾಳಿವೆ. ಆದರೆ ಭಾರತದಲ್ಲಿ ಮಾತ್ರ ಅನೇಕ ಧರ್ಮಗಳು ಬೆಳೆದಿವೆ. ಭಾರತ ಜಗತ್ತಿನ ಎಲ್ಲ ಧರ್ಮಗಳಿಗೆ ಆಶ್ರಯ ಕೊಟ್ಟಿರುವ ಪುಣ್ಯಭೂಮಿಯಾಗಿದ್ದು ಇದಕ್ಕೆ ಉದಾಹರಣೆ ಎನ್ನಿಸಿಕೊಂಡಿದೆ ಎಂದರು.

ಸಾಮಾನ್ಯ ವ್ಯಕ್ತಿಯೊಬ್ಬರು ಧಾರ್ಮಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡುವ ಮೂಲಕ ಈ ದೇಶದ ಹಿರಿಮೆ ಎತ್ತಿ ಹಿಡಿಯುವ ಕೆಲಸ ಮಾಡುವುದು ಸರಳ ಕೆಲಸವಲ್ಲ. ಪೇಜಾವರ ಶ್ರೀಗಳು ಅನೇಕ ಕಷ್ಟಕಾರ್ಪಣ್ಯಗಳ ನಡುವೆಯೂ ಹಿಂದೂ ಧರ್ಮದ ಮೌಲ್ಯ ಎತ್ತಿ ಹಿಡಿಯುವುದರ ಜೊತೆಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಲೇಬೇಕು ಎನ್ನುವ ನಿಲುವು ತಳೆದಿದ್ದರು.

ಸರ್ಕಾರಗಳು ತಪ್ಪು ಮಾಡಿದಾಗ ಸರಿದಾರಿಯಲ್ಲಿ ನಡೆಯಲು ತಿಳಿಸುತ್ತಿದ್ದರು. ಜನಸಾಮಾನ್ಯರಿಗೆ ತೀರ ಹತ್ತಿರದವರಾಗಿ ನಡೆದುಕೊಂಡಿದ್ದರು. ಇವರ ಅಗಲಿಕೆ ವಿಶ್ವದ ಸಂತ ಕುಲಕ್ಕೆ ತುಂಬಲಾಗದ ನಷ್ಟ ಎನ್ನಿಸಿಕೊಂಡಿದೆ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಡಾ| ಪರಶುರಾಮ ಪವಾರ, ಕಾಶೀಬಾಯಿ ರಾಂಪುರ, ಶಿವಶಂಕರಗೌಡ ಹಿರೇಗೌಡರ, ಸುರೇಶ ಕುಲಕರ್ಣಿ, ಜಗನ್ನಾಥ ಗೌಳಿ ಮಾತನಾಡಿದರು. ಪ್ರಮುಖರಾದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಸ್‌.ಆರ್‌. ಕುಲಕರ್ಣಿ, ಪುರಸಭೆ ಸದಸ್ಯೆ ಸಹನಾ ಬಡಿಗೇರ, ಬಿಜೆಪಿ ಎಸ್ಸಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀಲಮ್ಮ ಚಲವಾದಿ, ಗೌರಮ್ಮ ಹುನಗುಂದ, ಬಸಯ್ಯ ನಂದಿಕೇಶ್ವರಮಠ, ಮಂಜು ರತ್ನಾಕರ, ಅಶೋಕ ರಾಠೊಡ, ಹಣಮಂತ್ರಾಯ ದೇವರಳ್ಳಿ, ಎಲ್‌. ಎಸ್‌.ದೇಶಪಾಂಡೆ, ವಿಲಾಸ ದೇಶಪಾಂಡೆ, ಆನಂದ ತುಪ್ಪದ ಸೇರಿದಂತೆ 60-70 ಜನರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀಪಾದಂಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಜ್ಯೋತಿ ಬೆಳಗಿಸಲಾಯಿತು. ಅವರ ಸ್ಮರಣಾರ್ಥ ಮೌನಾಚರಣೆ ಮಾಡಲಾಯಿತು. ಪುನೀತ್‌ ಹಿಪ್ಪರಗಿ ನಿರೂಪಿಸಿದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.