ಜವಾಬ್ದಾರಿ ಅರಿಯಲಿ ಮಾಧ್ಯಮ: ಹೆಗ್ಡೆ

ಸತ್ಯ ಮುಚ್ಚಿ ಹಾಕಲು ಪ್ರಯತ್ನಿಸಬೇಡಿ•ಪೇಯ್ಡ ನ್ಯೂಸ್‌-ಬ್ಲ್ಯಾಕ್‌ವೆುೕಲ್ ಹಾವಳಿ ತೊಲಗಿಸಿ

Team Udayavani, Aug 24, 2019, 10:56 AM IST

24-April-10

ಮುದ್ದೇಬಿಹಾಳ: ಉದಯವಾಣಿ ವಿಜಯಪುರ ಜಿಲ್ಲಾ ವರದಿಗಾರ ಜಿ.ಎಸ್‌. ಕಮತರ ಅವರಿಗೆ ದಿ| ಡಾ.ನಾಗರಾಜ ಜಮಖಂಡಿ ಸ್ಮರಣಾರ್ಥ 2019-20ನೇ ಸಾಲಿನ ಮಾಧ್ಯಮ ಸಾಧಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮುದ್ದೇಬಿಹಾಳ: ದೇಶದ ಸಂವಿಧಾನದ ಮೂರು ಅಂಗಗಳ ಜೊತೆಗೆ ನಾಲ್ಕನೇ ಅಂಗ ಎನ್ನಿಸಿಕೊಂಡಿರುವ ಮಾಧ್ಯಮವೂ ಕಲುಷಿತಗೊಂಡಿದೆ ಎನ್ನುವುದಕ್ಕೆ ವಿಷಾದಿಸುತ್ತೇನೆ ಎಂದು ಲೋಕಾಯುಕ್ತ ನಿವೃತ್ತ ನ್ಯಾ| ಸಂತೋಷ ಹೆಗ್ಡೆ ಹೇಳಿದರು.

ಇಲ್ಲಿನ ಹುಡ್ಕೋದಲ್ಲಿರುವ ಟಾಪ್‌ ಇನ್‌ ಟೌನ್‌ ಕನ್ವೆನ್ಷನ್‌ ಹಾಲ್ನಲ್ಲಿ ಶುಕ್ರವಾರ ಕೆಜೆಯೂ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸಕ್ತ ರಾಜಕೀಯ ಬೆಳವಣಿಗೆ ಶಾಸಕಾಂಗದಲ್ಲಿ ಏನು ನಡೆಯುತ್ತಿದೆ ಎನುವುದಕ್ಕೆ ಸಾಕ್ಷಿಯಾಗಿದೆ. ಸರಕಾರ ಹುದ್ದೆಗಳಿಗೆ ಲಂಚ ನೀಡಿ ಬಂದವನು ಬೇರೊಬ್ಬರಿಂದ ಲಂಚ ಪಡೆಯುವ ಪ್ರವೃತ್ತಿ ಬೆಳಿಸಿಕೊಳ್ಳುತ್ತಾನೆ. ಇಂತಹ ಸ್ಥಿತಿ ಮಾಧ್ಯದಲ್ಲಿಯೂ ಪೇಯ್ಡ ನ್ಯೂಸ್‌ಗಳ ಮೂಲಕ ನಡೆಯುತ್ತಿವೆ. ಬ್ಲ್ಯಾಕ್‌ವೆುೕಲ್ ಪದ್ಧತಿ ನಡೆಯುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಮಾಣಿಕವಾಗಿ ಮತ್ತು ಜವಾಬ್ದಾರಿಯುತವಾಗಿ ಕೆಲಸ ಮಾಡಿದರೆ ಮಾತ್ರ ಮುಂದೆ ಇವುಗಳ ಮೇಲೆ ವಿಶ್ವಾಸ ಉಳಿದುಕೊಳ್ಳುತ್ತದೆ ಎಂದು ಹೇಳಿದರು.

ಪೇಯ್ಡ ನ್ಯೂಸ್‌, ಬ್ಲ್ಯಾಕ್‌ವೆುೕಲ್ ಹಾವಳಿಯನ್ನು ಮಾಧ್ಯಮ ಬಹಳ ಗಂಭೀರವಾಗಿ ಪರಿಗಣಿಸಬೇಕು. ಜನರು ತನ್ನಲ್ಲಿ ಇಟ್ಟ ಅಭಿಮಾನ, ಗೌರವ, ನಂಬಿಕೆಗಳಿಗೆ ಇಂಥವುಗಳಿಂದ ಧಕ್ಕೆ ಬರದಂತೆ ದಿಟ್ಟ ನಿರ್ಣಯ ತೆಗೆದುಕೊಳ್ಳಬೇಕು. ಸತ್ಯವನ್ನು ಒಪ್ಪಲೇಬೇಕು ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು. ಮಾಧ್ಯಮದವರಿಗೆ ಜವಾಬ್ದಾರಿ ಇರಬೇಕು. ಪ್ರಶಸ್ತಿಗಳು ಅದನ್ನು ಪಡೆಯುವಂಥ ಉತ್ತಮ ವ್ಯಕ್ತಿಗಳ ಕಾರ್ಯಕ್ಕೆ ಮೀಸಲಾಗಿರಬೇಕೆ ಹೊರತು ಬೇರೆ ಕಾರಣಕ್ಕೆ ಪ್ರಶಸ್ತಿ ಕೊಡಬಾರದು ಎಂದರು.

ಒಳ್ಳೆಯವರು, ಜನರ ಪ್ರೀತಿಗೆ ಪಾತ್ರರಾದವರನ್ನು ಗುರುತಿಸಿ ಸನ್ಮಾನಿಸಿದರೆ ಅದು ಸನ್ಮಾನಿಸಿದ ಸಂಸ್ಥೆಯ ಗೌರವ ಎತ್ತರ ಮಟ್ಟಕ್ಕೆ ತಗೊಂಡು ಹೋಗುತ್ತದೆ ಎಂದು ಕಿವಿಮಾತು ಹೇಳಿದರು. ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ, ಅರವಿಂದ ಜಮಖಂಡಿ, ಪ್ರಶಸ್ತಿ ಪುರಸ್ಕೃತರಾದ ಜಿ.ಎಸ್‌. ಕಮತರ, ಸುಕನ್ಯಾ ಮಾತನಾಡಿದರು. ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಮಂಗಳಾದೇವಿ ಬಿರಾದಾರ, ಎಂ.ಬಿ. ನಾವದಗಿ, ಮಲ್ಲಿಕಾರ್ಜುನ ಮದರಿ, ಡಾ| ಬಸವರಾಜ ಅಸ್ಕಿ, ಮಲ್ಲನಗೌಡ ಬಿರಾದಾರ, ಎಸ್‌.ಬಿ. ಚಲವಾದಿ, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ವಕೀಲರ ಸಂಘದ ಅಧ್ಯಕ್ಷ ಎಂ.ಎಚ್. ಕ್ವಾರಿ, ಪವನ್‌ ಕುಲಕರ್ಣಿ, ಡಿ.ಸಿ. ಪಾಟೀಲ, ಬಿಇಒ ಎಸ್‌.ಡಿ. ಗಾಂಜಿ, ಮಲಕೇಂದ್ರಗೌಡ ಪಾಟೀಲ, ಜಿ.ಟಿ. ಘೋರ್ಪಡೆ, ಗಿರೀಶಗೌಡ ಪಾಟೀಲ, ಬಿ.ನಾರಾಯಣ, ಅಬ್ದುಲ್ಹಕೀಮ್‌ ಇನ್ನಿತರರು ವೇದಿಕೆಯಲ್ಲಿದ್ದರು. ಸಂಗಮೇಶ ಶಿವಣಗಿ ಪ್ರಾರ್ಥಿಸಿದರು. ಪುಂಡಲಿಕ ಮುರಾಳ ಸ್ವಾಗತಿಸಿದರು. ನಾರಾಯಣ ಮಾಯಾಚಾರಿ ಪ್ರಾಸ್ತಾವಿಕ ಮಾತನಾಡಿದರು. ಜಿ.ಎನ್‌. ಹೂಗಾರ ಮತ್ತು ಶ್ರೀಶೈಲ ಹೂಗಾರ ನಿರೂಪಿಸಿದರು. ಮಂಜುನಾಥಸ್ವಾಮಿ ಕುಂದರಗಿ ವಂದಿಸಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.