ಚುರುಕಿನಿಂದ ಕಾರ್ಯ ನಿರ್ವಹಿಸಲು ಸೂಚನೆ

ಇಲಾಖೆಯ ಪ್ರಗತಿ ವರದಿ ಸಲ್ಲಿಸಿ

Team Udayavani, Jun 16, 2019, 4:04 PM IST

16-June-34

ಮುದ್ದೇಬಿಹಾಳ: ಇಲ್ಲಿನ ತಾಪಂ ಸಭಾ ಭವನದಲ್ಲಿ ಸಾಮಾನ್ಯ ಸಭೆ ನಡೆಯಿತು.

ಮುದ್ದೇಬಿಹಾಳ: ಚುನಾವಣೆ ಕಾರಣಗಳನ್ನು ಹೇಳಿ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳನ್ನು ಹಿಂದುಳಿಸಿದ್ದ ಅಧಿಕಾರಿಗಳು ಈಗಲಾದರೂ ತಾಲೂಕಿನಲ್ಲಿ ಚುರುಕಿನಿಂದ ಕಾರ್ಯ ನಿರ್ವಹಿಸಬೇಕು ಎಂದು ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ತಾಪಂ ಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುದ್ದೇಬಿಹಾಳ ಕ್ಷೇತ್ರದಲ್ಲಿ ಮಳೆರಾಯನ ಕೃಪೆಯಾಗುತ್ತಿದ್ದು ರೈತರಿಗೆ ಬೇಕಾಗಬಹುದಾದ ರಸಗೊಬ್ಬರಗಳನ್ನು ಸರಿಯಾಗಿ ವಿತರಿಸಬೇಕು. ಅಲ್ಲದೇ ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಆಳಿಸಿ ಬಗೆಹರಿಸುವ ಪ್ರಯತ್ನವನ್ನು ಮಾಡಬೇಕು ಎಂದು ಹೇಳಿದರು.

ತಾಪಂ ಸದಸ್ಯ ಪ್ರೇಮಸಿಂಗ್‌ ಚವ್ಹಾಣ ಮಾತನಾಡಿ, ತಾಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಬೇಕಾಗಿದೆ. ತಾಲೂಕಿನಲ್ಲಿ ಯಾವ ಯಾವ ಶಾಲೆಗಳಲ್ಲಿ ಎಸ್‌ಡಿಎಂಸಿ ರಚನೆಯಾಗಬೇಕು ಎಂಬ ವರದಿ ಪಡೆದುಕೊಂಡು ಅಂತಹ ಶಾಲೆಗಳಲ್ಲಿ ಕೂಡಲೇ ರಚನೆ ಮಾಡಬೇಕು. ಅಲ್ಲದೇ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಸಿಗಬೇಕಾದ ಪಠ್ಯಕ್ರಮ ಪುಸ್ತಕಗಳನ್ನು ಯಾವುದೇ ವಿಳಂಬವಿಲ್ಲದೇ ವಿತರಣೆಯಾಗಬೇಕು. ಆದರ್ಶ ವಿದ್ಯಾಲಯದ ಕಟ್ಟಡ ಕಾಮಗಾರಿ ಸಂಪೂರ್ಣವಾಗಿ ಕಳಪೆಯಿಂದ ಆಗಿದೆ ಎಂಬ ದೂರುಗಳು ಕೇಳಿಬಂದಿದ್ದು ಇದರ ಬಗ್ಗೆ ಕೂಡಲೇ ತನಿಖೆ ನಡೆಸಬೇಕು ಎಂದು ಹೇಳಿದರು.

ತಂಗಡಗಿ ತಾಪಂ ಸದಸ್ಯ ಶ್ರೀಶೈಲ ಮರೋಳ ಮಾತನಾಡಿ, ಗ್ರಾಮದ ಸರಕಾರಿ ಶಾಲೆಯ ಹೆಚ್ಚುವರಿ ಕೊಠಡಿ ಕಾಮಗಾರಿಗೆ ಖಾಸಗಿ ವ್ಯಕ್ತಿಯೊಬ್ಬರು ತಡೆಯಾಜ್ಞೆ ತಂದಿದ್ದು ನ್ಯಾಯಾಲಯಕ್ಕೆ ಪ್ರತಿ ವರದಿ ಸಲ್ಲಿಸುವಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಗ್ರಾಮದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಕೂಡಲೇ ಇದರ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.

ಬಿಸಿಯೂಟಕ್ಕೆ ಸಾಮಗ್ರಿ ನೀಡಿ: ಶಾಲೆಗಳಲ್ಲಿ ನೀಡುವ ಬಿಸಿಯೂಟದ ಕೋಣೆಗೆ ಸುಣ್ಣ ಬಣ್ಣ ಬಳಿಸಲು ಸಣ್ಣಪುಟ್ಟ ದುರಸ್ತಿಗೆ ಪ್ರತಿ ಶಾಲೆಗೆ ತಲಾ 10 ಸಾವಿರ ಹಾಗೂ ಮಕ್ಕಳಿಗೆ ಊಟ ಬಡಿಸಲು ತಟ್ಟೆ ಮತ್ತು ಲೋಟಕ್ಕಾಗಿ ತಲಾ 5 ಸಾವಿರ ಅನುದಾನದ ಪ್ರಸ್ತಾವನೆ ಸಲ್ಲಿಸಿದ್ದು ಅನುದಾನ ಬಂದಲ್ಲಿ ತುಂಬಾ ಅನುಕೂಲವಾಗುತ್ತದೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಂಗಮೇಶ ಹಲ್ದೂರ ಸಭೆಯಲ್ಲಿ ಹೇಳಿದರು.

ಇಒ ಮಾತಿಗೂ ಕಿಮ್ಮತ್ತಿಲ್ಲ್ಲ: ಪ್ರತಿ ತಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಇಲಾಖೆಯ ಪ್ರಗತಿ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚಿಸಿದ್ದರು. ಆದರೆ ತಾಲೂಕಿನ ಕೆಲ ಇಲಾಖೆ ಅಧಿಕಾರಿಗಳು ಪ್ರಗತಿ ವರದಿಯನ್ನು ಸಲ್ಲಿಸುವಲ್ಲಿ ವಿಫಲರಾಗುತ್ತಿದ್ದಾರೆ. ಮುಂದಿನ ಸಭೆಯಲ್ಲಿ ಕಡ್ಡಾಯವಾಗಿ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ತಾಲೂಕ ಪಂಚಾಯತ ಇಒ ಪ್ರಕಾಶ ದೇಸಾಯಿ ಸಭೆಯಲ್ಲ ತಿಳಿಸಿದರು. ಸಭೆಯಲ್ಲಿ ತಾಪಂ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.