ಕಚೇರಿಗೆ ಬೀಗ ಜಡಿದು ಪ್ರತಿಭಟನೆ

•ನೀರಾವರಿಯಿಂದ ವಂಚಿತರನ್ನಾಗಿ ಮಾಡಬೇಡಿ: ರೈತರ ಮನವಿ

Team Udayavani, Aug 8, 2019, 4:11 PM IST

8–Agust-45

ಮುದ್ದೇಬಿಹಾಳ: ಹುಡ್ಕೋ ಕಾಲೋನಿಯಲ್ಲಿರುವ ಎಎಲ್ಬಿಸಿ ಉಪ ವಿಭಾಗದ ನಂ-2 ಕಚೇರಿಗೆ ರೈತರು ಬುಧವಾರ ಬೀಜ ಜಡಿದು ಪ್ರತಿಭಟಿಸಿದರು.

ಮುದ್ದೇಬಿಹಾಳ: ಚಿಮ್ಮಲಗಿ ಏತ್‌ ನೀರಾವರಿ ಯೋಜನೆಯ ಪೂರ್ವ ಕಾಲುವೆಯ ವಿತರಣಾ ಕಾಲುವೆ 13ಎಯನ್ನು ಮುಖ್ಯ ಕಾಲುವೆಗೆ ಜೋಡಣೆ ಮಾಡದೇ ಈ ಭಾಗದ ರೈತರನ್ನು ನೀರಾವರಿಯಿಂದ ವಂಚಿತರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿ ಬುಧವಾರ ತಾಲೂಕಿನ ನೆರಬೆಂಚಿ ಗ್ರಾಮಸ್ಥರು ಹುಡ್ಕೊ ಕಾಲೋನಿಯಲ್ಲಿರುವ ಎಎಲ್ಬಿಸಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.

ಮುದ್ದೇಬಿಹಾಳ ತಾಲೂಕಿನ ಅಕ್ಕಪಕ್ಕದಲ್ಲಿ ಎರಡು ಆಣೆಕಟ್ಟುಗಳಿವೆ. ಈಗಾಗಲೇ ಬಹು ವರ್ಷಗಳ ಹಿಂದೆಯೇ ಮುದ್ದೇಬಿಹಾಳ ಕ್ಷೇತ್ರ ಸಂಪೂರ್ಣವಾಗಿ ನೀರಾವರಿಯಾಗಬೇಕಿತ್ತು. ಆದರೆ ಕೆಬಿಜೆಎನ್‌ಎಲ್ ಅಧಿಕಾರಿಗಳು ಸಮರ್ಪಕವಾಗಿ ಕಾಲುವೆಗಳನ್ನು ಮಾಡದ ಕಾರಣ ಕ್ಷೇತ್ರವು ನೀರಾವರಿಯಿಂದ ವಂಚಿತಗೊಂಡಿದೆ. ಇದನ್ನು ಸಾಕಷ್ಟು ಬಾರಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ರೈತರಿಗೆ ಉಪಯೋಗಕ್ಕೆ ಬಾರದ ಕಚೇರಿಗೆ ಬೀಗ ಜಡಿಯಲಾಗಿದೆ ಎಂದು ಪ್ರತಿಭಟನಾ ರೈತರು ದೂರಿದರು.

ನಂತರ ಎಎಲ್ಬಿಸಿನಂ. 2ರ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಆಲಮಟ್ಟಿಯ ಕೆಬಿಜೆಎನ್‌ಎಲ್ ಎಂಡಿ ಅವರಿಗೆ ಗ್ರಾಮಸ್ಥರು ಪ್ರತ್ಯೇಕವಾಗಿ ಮನವಿ ಸಲ್ಲಿಸಿ ಕೂಡಲೇ ಕಾಲುವೆ ನಿರ್ಮಾಣಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು.

ಅರ್ಧಕ್ಕೆ ನಿಂತ ಕಾಲುವೆ ಕಾಮಗಾರಿ: ಮುದ್ದೇಬಿಹಾಳ ತಾಲೂಕಿನ ನೆರಬೆಂಚಿ ಗ್ರಾಮದ ಹತ್ತಿರ ಉಪ ಕಾಲುವೆಯನ್ನು ಮಾಡಲಾಗಿದೆ. ಮುಖ್ಯ ಕಾಲುವೆ ಕೇವಲ 200 ಮೀ. ಇದ್ದು ಕಾಲುವೆ ಕಾಮಗಾರಿಯನ್ನು ನಿಲ್ಲಿಸಲಾಗಿದೆ. ಉಪ ಕಾಲುವೆ ಆದರೆ ಮುಖ್ಯ ಕಾಲುವೆಗೆ ಜೋಡನೆಯಾಗದ ಕಾರಣ ಗ್ರಾಮದ ರೈತರು ನೀರಾವರಿಯಿಂದ ವಂಚಿತರಾಗಿದ್ದಾರೆ. ಇದರ ಬಗ್ಗೆ ಸಾಕಷ್ಟು ಬಾರಿ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಮೌಖೀವಾಗಿ ಹಾಗೂ ಲಿಖೀತವಾಗಿ ದೂರು ನೀಡಿದ್ದರೂ ಅಧಿಕಾರಿಗಳು ಮಾತ್ರ ರೈತರ ಮನವಿಗೆ ಕಿವಿಗೊಡುತ್ತಿಲ್ಲ ಎಂದು ಮನವಿಯಲ್ಲಿ ದೂರಿದ್ದಾರೆ.

ಕಚೇರಿಗೆ ಕಾಯಂ ಬೀಗ ಜಡಿಯಲು ನಿರ್ಧಾರ: ಒಂದು ವೇಳೆ ಅಧಿಕಾರಿಗಳು ಕಾಲುವೆ ನಿರ್ಮಾಣಕ್ಕೆ ಮುಂದಾಗದಿದ್ದಲ್ಲಿ ಮುದ್ದೇಬಿಹಾಳ ಪಟ್ಟಣದಲ್ಲಿರುವ ಕೆಬಿಜೆಎನ್‌ಎಲ್ ಹಾಗೂ ಎಎಲ್ಬಿಸಿ ಕಚೇರಿಗಳಿಗೆ ಕಾಯಂ ಬೀಗ ಜಡಿಯಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಅಪ್ಪುಗೌಡ ಮೈಲೇಶ್ವರ, ಶಿವರಾಜ್‌ ಬೂದಿಹಾಳ, ಚನ್ನವೀರಪ್ಪ ಬಿರಾದಾರ, ಸಿದ್ದು ಪಾಟೀಲ, ನೀಲಪ್ಪ ಬಿರಾದಾರ, ನಿಂಗರಾಜ ಬಿರಾದಾರ, ಹನುಮಂತ ನೆರಬೆಂಚಿ, ಅಮರೇಶ ಬಿರಾದಾರ, ಹನುಮಂತ ಪತ್ತೇಪುರ, ಮುತ್ತಣ್ಣ ಬಿರಾದಾರ, ಹುಸೇನಸಾಬ ಚಪ್ಪರಬಂದ, ನಾಗರಾಜ ಬಿರಾದಾರ, ಸಿದ್ದನಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.