ಸೈನಿಕರ ಕುಟುಂಬ ರಕ್ಷಣೆ ಎಲ್ಲರ ಜವಾಬ್ದಾರಿ


Team Udayavani, Jul 28, 2019, 4:19 PM IST

28-July-41

ಮುದ್ದೇಬಿಹಾಳ: ದೇಶ ಸೇವೆಯೇ ಈಶ ಸೇವೆ ಎನ್ನುವುದನ್ನು ಸೈನಿಕರು, ಗ್ರಾಮೀಣ ಜನರು ಕಂಡುಕೊಂಡಿದ್ದಾರೆ. ದೇಶರಕ್ಷಣೆ ನಿಜವಾದ ಕಾಳಜಿ, ಕಿಚ್ಚು ಗ್ರಾಮೀಣರಲ್ಲೇ ಹೆಚ್ಚಿಗೆ ಕಾಣುತ್ತದೆ ಎಂದು ಇಟಗಿ ಭೂ ಕೈಲಾಸ ಮೇಲಗದ್ದುಗೆ ಸಂಸ್ಥಾನ ಹಿರೇಮಠದ ಗುರು ಶಾಂತವೀರ ಶಿವಾಚಾರ್ಯರು ಹೇಳಿದರು.

ಪಟ್ಟಣದ ಸೈನಿಕ ಮೈದಾನದಲ್ಲಿ ಕಾರ್ಗಿಲ್ ವೀರ ಯೋಧರ ಸ್ಮಾರಕ ನಿರ್ಮಾಣ ಸಮಿತಿ ಆಶ್ರಯದಲ್ಲಿ ಏರ್ಪಡಿಸಿದ್ದ 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವ, ಹುತಾತ್ಮ ಯೋಧರ ಕುಟುಂಬದವರಿಗೆ ಸನ್ಮಾನ ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಗ್ರಾಮೀಣ ಜನರೇ ತಮ್ಮ ಮಕ್ಕಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೈನ್ಯಕ್ಕೆ ಸೇರಿಸುತ್ತಾರೆ. ಪಟ್ಟಣ, ನಗರ ಪ್ರದೇಶಗಳಲ್ಲಿ ಈ ಪ್ರಮಾಣ ಕಡಿಮೆ. ಸೈನಿಕರನ್ನು ಜಾತಿ ಆಧಾರದ ಮೇಲೆ ವಿಭಜಿಸದೆ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಗಡಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಶತ್ರುಗಳಿಂದ ನಮ್ಮನ್ನು ಕಾಪಾಡುವ ಸೈನಿಕರ ಕುಟುಂಬದ ರಕ್ಷಣೆ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್‌ ವಿನಯಕುಮಾರ ಪಾಟೀಲ, ಮುಖ್ಯ ಅತಿಥಿಯಾಗಿದ್ದ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ನಾನಪ್ಪ ನಾಯಕ ಸೇನೆಯಲ್ಲಿನ ಸೇವೆ, ಸೈನಿಕರ ಪರಿಶ್ರಮ ಕುರಿತು ಮಾತನಾಡಿದರು.

ಬಳಬಟ್ಟಿ ಗ್ರಾಮದ ಹುತಾತ್ಮ ಯೋಧ ಶ್ರೀಶೈಲ ತೋಳಮಟ್ಟಿ (ಬಳಬಟ್ಟಿ) ಅವರ ತಂದೆ ರಾಯಪ್ಪ, ತಾಯಿ ಮಹಾದೇವಿ, ಪತ್ನಿ ಗೀತಾ ಮತ್ತು ಕಾರ್ಗಿಲ್ ಹುತಾತ್ಮ ಯೋಧ ದಾವಲಸಾಬ ಕಂಬಾರ ಅವರ ಸಹೋದರ ಲಾಲಸಾಬ ಕಂಬಾರ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಶ್ರೀಶೈಲ ಅವರ ಪತ್ನಿ ಗೀತಾ ಅವರನ್ನು ಸನ್ಮಾನಿಸುವಾಗ ಪತಿಯನ್ನು ನೆನೆದು ವೇದಿಕೆಯಲ್ಲೇ ಕಣ್ಣೀರು ಸುರಿಸಿದರು. ಇವರ 5 ವರ್ಷದ ಪುತ್ರ ಯುಕೆಜಿ ಓದುತ್ತಿರುವ ವಿಶ್ವನಾಥ ತಾನು ತನ್ನ ತಂದೆಯ ಕೆಲಸ ಮುಂದುವರಿಸಲು ದೊಡ್ಡವನಾದ ಮೇಲೆ ಸೇನೆಗೆ ಸೇರುವುದಾಗಿ ಹೇಳಿ ಎಲ್ಲರಿಂದಲೂ ಭೇಷ್‌ ಎನ್ನಿಸಿಕೊಂಡ. ಕಾರ್ಯಕ್ರಮಕ್ಕೂ ಮುನ್ನ ತಹಶೀಲ್ದಾರ್‌, ಸಮಿತಿ ಪದಾಧಿಕಾರಿಗಳು, ಗಣ್ಯರು ಕಾರ್ಗಿಲ್ ಹುತಾತ್ಮ ಯೋಧ ದಾವಲಸಾಬ ಕಂಬಾರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಮಹಾಂತೇಶ ಬಂಗಾರಗುಂಡ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಕಿರಣರಾಜ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಗೋಪಾಲ ಹೂಗಾರ ನಿರೂಪಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.