ಸಮಸ್ಯೆ ತೆರೆದಿಟ್ಟ ಸಾರಿಗೆ ನೌಕರರು

ಸಾರಿಗೆ ನಿಗಮಗಳಲ್ಲಿ ಸೇವೆ ಸಲ್ಲಿಸುವವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ

Team Udayavani, Jun 24, 2019, 10:45 AM IST

24-June-7

ಮುದ್ದೇಬಿಹಾಳ: ಸಾರಿಗೆ ನೌಕರರು ಗೃಹ ಸಚಿವ ಎಂ.ಬಿ. ಪಾಟೀಲರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.

ಮುದ್ದೇಬಿಹಾಳ: ಸಾರಿಗೆ ಸಂಸ್ಥೆಯ ನಿಗಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸರ್ಕಾರಿ ಪಿಂಚಣಿ ಮತ್ತು ಎಲ್ಲ ಸೌಲತ್ತು ನೀಡುವಂತೆ ಮುಖ್ಯಮಂತ್ರಿಗಳ ಮನವೊಲಿಸಬೇಕು ಎಂದು ಆಗ್ರಹಿಸಿ ಕೆಎಸ್‌ಆರ್‌ಟಿಸಿ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಸ್ಥಳೀಯ ಘಟಕದ ಪದಾಧಿಕಾರಿಗಳು ಗೃಹ ಸಚಿವ ಎಂ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಚಿವರನ್ನು ಭೇಟಿ ಮಾಡಿದ ವೇದಿಕೆಯ ಸ್ಥಳೀಯ ಪದಾಧಿಕಾರಿಗಳಾದ ಎಸ್‌.ಆರ್‌. ಮುಲ್ಲಾ, ವಿ.ಎಂ. ಕುಲಕರ್ಣಿ, ಎ.ಐ. ಆಸ್ಮಿ, ಮಹೆಬೂಬ ಮುಲ್ಲಾ, ಮಂಜುನಾಥ ಸಜ್ಜನ ಮತ್ತಿತರರು ಬೇಡಿಕೆ ಈಡೇರಿಕೆಯ ಅವಶ್ಯಕತೆಯನ್ನು ಸಚಿವರಿಗೆ ವಿವರಿಸಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಹಕಾರ ನೀಡಬೇಕು ಎಂದು ಕೋರಿದರು.

ನೌಕರಿಗೆ ಸೇರಿಕೊಂಡಾಗಿನಿಂದ ನಿವೃತ್ತಿವರೆಗೂ ಶ್ರಮವಹಿಸಿ ದುಡಿಯುವ ಕೆಎಸ್‌ಆರ್‌ಟಿಸಿ ನೌಕರರು ಶ್ರಮ ಜೀವಿಗಳು. ಸರ್ಕಾರದಿಂದಲೇ ನಡೆಯುತ್ತಿರುವ ವಿವಿಧ ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಹಿಂದಿನ ಸರ್ಕಾರಗಳು ವೇತನ ತಾರತಮ್ಯ ಎಸಗುತ್ತಾ ಬಂದಿದ್ದಾರೆ. ಸರ್ಕಾರದ ಸೌಲತ್ತು, ಪಿಂಚಣಿ ಇಲ್ಲದೆ ಕಷ್ಟಗಳ ನಡುವೆಯೂ ನೌಕರರು ಶ್ರದ್ಧೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಇವರಿಗೆ ಜಿಗುಪ್ಸೆ ಶುರುವಾಗಿದೆ. ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಈ ನೌಕರರು ಇದೀಗ ಸಹನೆಯನ್ನು ಮೀರುವ ಹಂತಕ್ಕೆ ಬಂದಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬೆಳಗಾವಿ ಅಧಿವೇಶನ ವೇಳೆ ಸಾರಿಗೆ ನೌಕರರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಇದುವರೆಗೂ ಯಾವುದೇ ರೀತಿಯ ಸಕಾರಾತ್ಮಕ ಸ್ಪಂದನೆ ದೊರಕಿಲ್ಲ. ಸಾರಿಗೆ ನೌಕರಿ ಎಂದರೆ ಕಷ್ಟದ ಕೆಲಸ. ಕರ್ತವ್ಯದಲ್ಲಿ ಉದ್ಭವಿಸುವ ಎಲ್ಲ ಕಷ್ಟಗಳನ್ನು ಸಮರ್ಥವಾಗಿ ಎದುರಿಸಬೇಕಿದೆ. ನೌಕರರನ್ನು ನಂಬಿದ ಕುಟುಂಬವರ್ಗವನ್ನೂ ಸಾಕಿ ಸಲಹುವ ಹೊಣೆಗಾರಿಕೆ ಇದೆ. ಇವರಿಗೆ ನಿವೃತ್ತಿಯಾದಾಗ ಇವರ ವಿಶ್ರಾಂತಿ ಜೀವನಕ್ಕೊಂದು ಭದ್ರತೆಯಾಗಿ ಸರ್ಕಾರಿ ಪಿಂಚಣಿ ಬೇಕು. ಸಾರಿಗೆ ನೌಕರರನ್ನು ಸರ್ಕಾರಿ ನೌಕರ ಎಂಬಂತೆ ಸಮಾನತೆಯಿಂದ ನೋಡಿಕೊಳ್ಳಬೇಕು. ಸಮಾನ ವೇತನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನೆರೆಯ ಆಂಧ್ರ ಪ್ರದೇಶದಲ್ಲಿ ಸಾರಿಗೆ ನೌಕರರನ್ನು ಸರ್ಕಾರದ ಜೊತೆ ವಿಲೀನಗೊಳಿಸಿದಂತೆ ಇಲ್ಲೂ ಮಾಡಬೇಕು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಸಿದ್ದಾರೆ. ಸಾರಿಗೆ ಸಚಿವರೂ ಧನಾತ್ಮಕ ಹೇಳಿಕೆ ನೀಡಿದ್ದಾರೆ.

ಪೊಲೀಸ್‌ ಇಲಾಖೆಯ ನೌಕರರಿಗೆ ಔರಾದಕರ ವರದಿಯನ್ನು ಅನುಷ್ಠಾನಗೊಳಿಸಿದ ರೀತಿಯಲ್ಲಿ ಸಾರಿಗೆ ನೌಕರರ ಬೇಡಿಕೆಗಳನ್ನೂ ಮುಖ್ಯಮಂತ್ರಿಗಳ ಮೂಲಕ ಈಡೇರಿಸಿ ಸಾರಿಗೆ ನೌಕರರ ಸಂಕಷ್ಟಗಳಿಗೆ ಮುಕ್ತಾಯ ಹೇಳಬೇಕು ಎಂದು ಪದಾಧಿಕಾರಿಗಳು ಕೇಳಿಕೊಂಡರು.

ಅಹವಾಲು ಆಲಿಸಿದ ಸಚಿವರು ಸಾರಿಗೆ ನೌಕರರ ಬೇಡಿಕೆ ನ್ಯಾಯಯುತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು. ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಸಿ.ಎಸ್‌. ನಾಡಗೌಡ, ಎಪಿಎಂಸಿ ಅಧ್ಯಕ್ಷ ಗುರಣ್ಣ ತಾರನಾಳ, ಪುರಸಭೆ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.