ಜಾನುವಾರು ಶೆಡ್‌ಗಾಗಿ ಅಲೆದಾಟ

ವಾರ್ಡ್‌ವಾರು ಸಭೆ ನಡೆಸಿ ಚರ್ಚಿಸಿದರೂ ಉದ್ಯೋಗ ಖಾತ್ರಿ ಕಾಮಗಾರಿಯಲ್ಲಿ ಸೇರ್ಪಡೆ ಮಾಡದ ಅಧಿಕಾರಿಗಳು „ ಬಿಲ್‌ ಕೂಡ ಪಾವತಿಸಿಲ್ಲ

Team Udayavani, Sep 25, 2019, 3:15 PM IST

25-Spectember-17

ದೇವಪ್ಪ ರಾಠೊಡ
ಮುದಗಲ್ಲ:
ಸಮೀಪದ ತಲೇಖಾನ ಗ್ರಾಪಂ ವ್ಯಾಪ್ತಿಯಲ್ಲಿನ ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಡಿ ಜಾನುವಾರು ಶೆಡ್‌ ನಿರ್ಮಿಸಿಕೊಳ್ಳಲು ಅರ್ಹರು ತಾಲೂಕು ಮತ್ತು ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಅಲೆದಾಡುವಂತಾಗಿದೆ.

2019-20ನೇ ಸಾಲಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ತಲೇಖಾನ ಗ್ರಾಪಂ ವ್ಯಾಪ್ತಿಯ ಪ್ರತಿ ವಾರ್ಡ್‌ಗೆ ಅಧಿಕಾರಿಗಳು ತೆರಳಿ ಗ್ರಾಮ ಸಭೆ ನಡೆಸಿದ್ದರು. ಬೇಡಿಕೆ ಅನುಸಾರ ಜಾನುವಾರು
ಶೆಡ್‌ ಸೇರಿ ಇತರೆ ಕಾಮಗಾರಿ ಕುರಿತು ಚರ್ಚಿಸಿ ಠರಾವು ಪುಸ್ತಕದಲ್ಲಿ ನಮೂದಿಸಿಕೊಂಡು ಜನರಿಂದ ಸಹಿ ಪಡೆದಿದ್ದರು. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಯಿಂದ ಕಾಮಗಾರಿಗೆ ಅನುಮೋದನೆ ಪಡೆಯುವುದಾಗಿ ಹೇಳಿದ್ದರು. ಆದರೆ ಅಧಿಕಾರಿಗಳು ಬರಿ ಕೂಲಿಕಾರರು ನಿರ್ವಹಿಸುವ ಕೆರೆ, ನಾಲೆ ಹೂಳೆತ್ತುವ ಕಾಮಗಾರಿ ಸೇರಿದಂತೆ 2-3 ರಸ್ತೆ ನಿರ್ಮಾಣ ಕಾಮಗಾರಿಗೆ ಅನುಮೋದನೆ ಪಡೆದಿದ್ದಾರೆ.

ಉಳಿದಂತೆ ಕೃಷಿ ಹೊಂಡ, ಜಾನುವಾರು ಶೆಡ್‌, ಪ್ರವಾಹ ನಿಯಂತ್ರಣ, ತಡೆಗೋಡೆ, ಸಸಿ ನೆಡುವುದು, ತೋಟಗಾರಿಕೆ, ರೇಷ್ಮೆ, ಅರಣ್ಯೀಕರಣದಂತಹ ಕಾಮಗಾರಿ ನಮೂದಿಸದೆ ಕ್ರಿಯಾಯೋಜನೆಗೆ ಜಿಪಂ ಸಿಇಒರಿಂದ ಅನುಮೋದನೆ ಪಡೆಯಲಾಗಿದೆ.

ಈಗ ಜನರಿಗೆ ಅವಶ್ಯಕವಾಗಿರುವ ತೋಟಗಾರಿಕೆ, ರೇಷ್ಮೆ ಬೆಳೆ ನಾಟಿ, ಮಳೆ-ಬಿಸಿಲಿನಿಂದ ಜಾನುವಾರು ರಕ್ಷಿಸಿಕೊಳ್ಳು ಶೆಡ್‌ ನಿರ್ಮಾಣಕ್ಕೆ ಬೇಡಿಕೆ ಇಟ್ಟರೆ ನಿಮ್ಮ ಹೆಸರು ಕ್ರಿಯಾಯೋಜನೆಯಲ್ಲಿ ಇಲ್ಲ. ಅಂದಾಜು ಪತ್ರಿಕೆ ತಯಾರಿಸಲು ಬರುವುದಿಲ್ಲ ಎಂದು ನರೇಗಾ ಅಭಿಯಂತರ ಸತ್ಯನಾರಾಯಣ ಹೇಳುತ್ತಾರೆಂದು ಗ್ರಾಮಸ್ಥರು ದೂರಿದ್ದಾರೆ. ಇತ್ತ ತಾಪಂ ಅಧಿಕಾರಿಗಳಿಗೆ ವಿಚಾರಿಸಿದರೆ ಪ್ರತಿವರ್ಷ ಮುಕ್ತ ಕ್ರಿಯಾಯೋಜನೆ ತಯಾರಿಸಲಾಗುತ್ತಿತ್ತು. ಆದರೆ ಈ ಬಾರಿ ಕ್ರಿಯಾ ಯೋಜನೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ಮಾತ್ರ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯಿತಿಯಿಂದ ಸೂಚನೆ ಬಂದಿದೆ. ಈ ಹಿನ್ನೆಲೆಯಲ್ಲಿ ಖಾತ್ರಿ ಕ್ರಿಯಾ ಯೋಜನೆಯಲ್ಲಿ ಇರುವ ಕಾಮಗಾರಿ ಮಾತ್ರ ಅನುಷ್ಠಾನ ಮಾಡಲಾಗುವುದು ಎಂದು ಹೇಳುತ್ತಾರೆ.

ಬಿಲ್‌ ಪಾವತಿಸಿಲ್ಲ: 2018-19ರಲ್ಲಿ ನಿರ್ಮಿಸಿಕೊಂಡ ಜಾನುವಾರು ಶೆಡ್‌ಗಳ ಕೂಲಿ ಹಣ ಹೊರತುಪಡಿಸಿ ಬಿಒಸಿ ಅನುದಾನವನ್ನು ಫಲಾನುಭವಿಗಳಿಗೆ ಪಾವತಿಸದೇ ಅಧಿ ಕಾರಿಗಳು ಸತಾಯಿಸುತ್ತಿದ್ದಾರೆ. ಅನುದಾನಕ್ಕಾಗಿ ತಾಪಂ ಅ ಧಿಕಾರಿಗಳ ಹತ್ತಿರ ಅಲೆಯುವಂತಾಗಿದೆ ಎಂದು ರಾಜು ವಸನಪ್ಪ, ಹನುಮಂತಪ್ಪ, ಅಮರೇಶ ದೂರಿದ್ದಾರೆ.

ಚುನಾಯಿತ ಪ್ರತಿನಿಧಿ ಗಳು ತಮ್ಮ ಹಿಂಬಾಲಕರು, ಬೆಂಬಲಿಗರ ಹೆಸರಲ್ಲಿ ಕಾಮಗಾರಿ ಬರೆಸುತ್ತಾರೆಂಬ ಕಾರಣಕ್ಕೆ ವಾರ್ಡ್‌ಗಳಲ್ಲಿ ಗ್ರಾಮಸಭೆ ನಡೆಸಿ ಜನರ ಮೂಲಕ ಕಾಮಗಾರಿ ಬರೆಸಿಕೊಳ್ಳುವ ಅಧಿಕಾರಿಗಳು ಗ್ರಾಮಸಭೆ ಠರಾವುದಲ್ಲಿ ನಮೂದಿಸಿದ ಕಾಮಗಾರಿಗಳಿಗೆ ಅನುಮೋದನೆ ಪಡೆಯದಿರುವುದು ಹಲವು ಸಂಶಯಕ್ಕೆಡೆ ಮಾಡಿದೆ. ಸಂಬಂಧಿಸಿದ ಅಧಿಕಾರಿಗಳು ಗ್ರಾಪಂಗೆ ಭೇಟಿ ನೀಡಿ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.