ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರ
ಪರಿಹಾರ ಕೇಂದ್ರದಲ್ಲಿ ತಲೆ ಮೇಲೆ ಕೈಹೊತ್ತು ಕುಳಿತವರಿಗೆ ನಾಡಿನ ಜನರ ಮಾನವೀಯ ಸ್ಪಂದನೆ
Team Udayavani, Aug 14, 2019, 12:14 PM IST
ಮೂಡಿಗೆರೆ: ಪಟ್ಟಣಕ್ಕೆ ನೆರೆ ಸಂತ್ರಸ್ತರಿಗಾಗಿ ರಾಜ್ಯದ ವಿವಿಧೆಡೆಗಳಿಂದ ಬಂದ ಸರಕು ಸಾಮಗ್ರಿಗಳನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ವೀಕರಿಸಿದರು.
ಮೂಡಿಗೆರೆ: ಕಳೆದ ಹತ್ತು ದಿನಗಳಿಂದ ತಾಲೂಕಿನಾದ್ಯಂತ ಸುರಿದ ಮಹಾಮಳೆಗೆ ಮನೆ, ತೋಟ, ಜಾನುವಾರು ಒಳಗೊಂಡಂತೆ ಸರ್ವಸ್ವವನ್ನೂ ಕಳೆದುಕೊಂಡು ಪುನರ್ವಸತಿ ಕೇಂದ್ರಗಳಲ್ಲಿ ತಲೆ ಮೇಲೆ ಕೈಹೊತ್ತು ಕುಳಿತ ಸಂತ್ರಸ್ತರಿಗೆ ನಾಡಿನ ನಾನಾ ಭಾಗಗಳಿಂದ ನೆರವಿನ ಮಹಾಪೂರವೇ ಹರಿಸುಬರುತ್ತಿದೆ.
ತಾಲೂಕಿನ ಜಾವಳಿ, ಆಲೆಖಾನ್ ಹೊರಟ್ಟಿ, ಮಧುಗುಂಡಿ, ದುರ್ಗದಹಳ್ಳಿ, ಮಲೆಮನೆ, ಚೆನ್ನಹಡ್ಲು ಸೇರಿದಂತೆ ಅನೇಕ ಗ್ರಾಮಗಳ ಜನರು ತಮ್ಮ ಸರ್ವಸ್ವವನ್ನೂ ಕಳೆದುಕೊಂಡು ಪುನರ್ವಸತಿ ಕೇಂದ್ರಗಳಲ್ಲಿ ಕಂಗಾಲಾಗಿ ಕುಳಿತಿದ್ದಾರೆ.
ಕಳೆದ ಎರಡು ದಿನಗಳಿಂದ ವರುಣನ ರೌದ್ರಾವತಾ ಸ್ವಲ್ಪಮಟ್ಟಿಗೆ ಶಮನಗೊಂಡಿದ್ದು, ಎಲ್ಲರೂ ಈಗ ಆಗಿರುವ ದುರಂತ ಮರುಕಳಿಸದಂತೆ ದೇವರಲ್ಲಿ ಮೊರೆಯಿಡುತ್ತಿದ್ದಾರೆ. ವರುಣನ ಆರ್ಭಟಕ್ಕೆ ರೈತರು ಮತ್ತು ಕಾರ್ಮಿಕರು ಸೇರಿದಂತೆ ಎಲ್ಲರೂ ಎಲ್ಲವನ್ನೂ ಕಳೆದುಕೊಂಡು ಅಕ್ಷರಶಃ ಅನಾಥರಾಗಿದ್ದಾರೆ.
ಮನೆ-ಮಠಗಳನ್ನು ಕಳೆದುಕೊಂಡ ಮತ್ತು ತಮ್ಮ ವಾಸಸ್ಥಳಕ್ಕೆ ಸದ್ಯಕ್ಕೆ ಹೋಗಲಾರದೇ ಪರಿಹಾರ ಕೇಂದ್ರಗಳಲ್ಲಿರುವ ಸಂತ್ರಸ್ತರ ದೈನಂದಿನ ಅಗತ್ಯಗಳಿಗಾಗಿ ಈಗಾಗಲೇ ರಾಜ್ಯದ ನಾನಾ ಭಾಗಗಳಿಂದ ತಾತ್ಕಾಲಿಕವಾಗಿ ಆಹಾರ, ಬಟ್ಟೆಗಳು, ನೀರು, ಬಿಸ್ಕತ್ ಪ್ಯಾಕ್, ಚಪ್ಪಲಿಗಳು, ಚಾಪೆ, ಬೆಡ್ಶೀಟ್, ಟೂತ್ಬ್ರಷ್, ಪೇಸ್ಟ್, ಔಷಧ ಮೊದಲಾದ ಎಲ್ಲಾ ಅಗತ್ಯ ಸಾಮಗ್ರಿಗಳು ಭರಪೂರಾಗಿ ಮೂಡಿಗೆರೆ ಕೇಂದ್ರಕ್ಕೆ ಕ್ಯಾಂಟರ್ ಮತ್ತು ಟೆಂಪೋಗಳಲ್ಲಿ ಹರಿದುಬರುತ್ತಿವೆ.
ಈ ಸಾಮಗ್ರಿಗಳ ವಿಲೇವಾರಿಯ ಉಸ್ತುವಾರಿಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ವಿವಿಧ ಕ್ಷೇತ್ರಗಳ ಕಾರ್ಯುಕರ್ತರು ತಾಲೂಕಿನಾದ್ಯಂತವಿರುವ 6 ಪುನರ್ವಸತಿ ಕೇಂದ್ರಗಳಿಗೆ ಬೇಡಿಕೆಗೆ ಅನುಸಾರವಾಗಿ ವ್ಯವಸ್ಥಿತ ರೀತಿಯಲ್ಲಿ ವಿತರಣೆ ಮಾಡುತ್ತಿದ್ದಾರೆ.
ಸಂತ್ರಸ್ತರಿಗೆ ಸಹಕರಿಸಿದ ಎಲ್ಲರಿಗೂ ಶಾಸಕ ಎಂ.ಪಿ.ಕುಮಾರಸ್ವಾಮಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ