ಗದ್ದೆ ಮರಳು ತೆರವಿಗೆ ಅನುಮತಿ

ಶಾಸಕ ಎಂ.ಪಿ.ಕುಮಾರಸ್ವಾಮಿ ಯತ್ನದಿಂದ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದನೆ: ರಘು

Team Udayavani, Dec 18, 2019, 6:20 PM IST

18-Decemebr-29

ಮೂಡಿಗೆರೆ: ತಾಲೂಕಿನಾದ್ಯಂತ ಈ ಬಾರಿ ಸುರಿದ ಭಾರೀ ಮಳೆಯಿಂದಾಗಿ ಜಮೀನುಗಳಲ್ಲಿ ಶೇಖರಣೆಗೊಂಡಿರುವ ಮರಳನ್ನು ತೆರವುಗೊಳಿಸಲು ಅನುಮತಿ ನೀಡಬೇಕೆಂಬ ತಮ್ಮ ಮನವಿಗೆ ಸ್ಪಂದಿಸಿರುವ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು, ಸಮಸ್ಯೆ ಬಗೆಹರಿಸಿದ್ದಾರೆಂದು ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಎಸ್‌.ರಘು ತಿಳಿಸಿದ್ದಾರೆ.

ಈ ಬಗ್ಗೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಜತೆ ತಹಶೀಲ್ದಾರ್‌ ರಮೇಶ್‌ ಅವರಿಗೆ ಮನವಿ ಸಲ್ಲಿಸಿದ ನಂತರ ಮಾಹಿತಿ ನೀಡಿದರು. ಈ ಬಾರಿ ಮಲೆನಾಡಿನಲ್ಲಿ ಬಿದ್ದ ರಣಭೀಕರ ಮಳೆಯಿಂದಾಗಿ ತಾಲೂಕಿನಾದ್ಯಂತ ಜಮೀನುಗಳಲ್ಲಿ ನೀರು ಹರಿದು ಮರಳು ಶೇಖರಣೆಗೊಂಡಿದೆ. ಇದರಿಂದ ವ್ಯವಸಾಯ ಕಷ್ಟಕರವಾಗಿದೆ. ಹಲವೆಡೆ ಗುಡ್ಡ ಕುಸಿತ, ಕೆರೆಕಟ್ಟೆ ಒಡೆದು ತೋಟ ಮತ್ತು ಗದ್ದೆಗಳಿಗೆ ನೀರು ಹರಿದಿದೆ. ನೀರಿನ ರಭಸಕ್ಕೆ ಜಮೀನುಗಳಲ್ಲಿ ಮರಳು ಶೇಖರಣೆಯಾಗಿದೆ. ಇದರಿಂದ ಜಮೀನುಗಳಲ್ಲಿ ಕೃಷಿ ಕಾರ್ಯಗಳಿಗೆ ಹಿನ್ನಡೆಯಾಗಿದ್ದು, ಮರಳು ತೆರವುಗೊಳಿಸಲು ನಿಯಮಗಳು ಅಡ್ಡಿಯಾಗುತ್ತಿವೆ ಎಂದು ತಿಳಿಸಿದ್ದಾರೆ.

ಮರಳು ತೆಗೆಯಲು ಮತ್ತು ಸಾಗಿಸಲು ಅನುಮತಿ ಕಡ್ಡಾಯವಾಗಿದ್ದು, ತಾಲೂಕಿನ ರೈತರು ಮರಳು ತೆಗೆಯಲು ಹಿಂದೇಟು ಹಾಕುತ್ತಿದ್ದಾರೆ. ಇತ್ತ ಮರಳು ತೆಗೆಯಲೂ ಆಗದೆ, ಜಮೀನಿನಲ್ಲಿ ಕೆಲಸ ಮಾಡಿಸಲೂ ಆಗದೇ ಪರದಾಡುತ್ತಿದ್ದ ರೈತರ ಕಷ್ಟವನ್ನು ಮನಗಂಡು ಜಿಲ್ಲಾಧಿಕಾರಿಗಳಿಗೆ ಮತ್ತು ಮೂಡಿಗೆರೆ ತಹಶೀಲ್ದಾರ್‌ರಿಗೆ ಜಮೀನುಗಳಲ್ಲಿ ಶೇಖರಣೆಯಾಗಿರುವ ಮರಳು ತೆರವುಗೊಳಿಸಲು ಅನುಮತಿ ಕೋರಿ ಪತ್ರ ಬರೆದಿದ್ದೆ. ಅಲ್ಲದೇ, ಈ ವಿಚಾರವಾಗಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಲ್ಲೂ ಮನವಿ ಮಾಡಿಕೊಂಡಿದ್ದೆ ಎಂದಿದ್ದಾರೆ.

ಸಮಸ್ಯೆಗೆ ಸ್ಪಂದಿಸಿದ ಶಾಸಕರು ಕೂಡಲೇ ಮೂಡಿಗೆರೆ ತಹಶೀಲ್ದಾರ್‌, ವೃತ್ತ ನಿರೀಕ್ಷಕರು ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆದ್ದರು. ಅಲ್ಲದೇ,
ಜಿಲ್ಲಾ ಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿಯ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು. ಹಾಗಾಗಿ, ಜಿಲ್ಲಾಧಿಕಾರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸಮಸ್ಯೆ ಪರಿಹರಿಸುವಲ್ಲಿ ಸಹಕರಿಸುವುದಾಗಿ ಭರವಸೆ ನೀಡಿದ್ದರು.

ನಂತರ ತಹಶೀಲ್ದಾರ್‌ ಸಭೆಯಲ್ಲಿ ಜಮೀನುಗಳಲ್ಲಿ ಶೇಖರಣೆಗೊಂಡಿರುವ ಮರಳನ್ನು ಸಾಗಿಸಲು ಷರತ್ತುಬದ್ಧ ಒಪ್ಪಿಗೆ ನೀಡಿದ್ದಾರೆ. ಈ ಸಭೆಯಲ್ಲಿ ತಾಪಂ ಅಧ್ಯಕ್ಷ ಕೆ.ಸಿ.ರತನ್‌, ಪಪಂ ಸದಸ್ಯ ಪಟ್ಟದೂರು ಪುಟ್ಟಣ್ಣ, ಮುಖಂಡರಾದ ಪಂಚಾಕ್ಷರಿ, ದುಂಡುಗ ಪ್ರಮೋದ್‌, ಅರೇಕೂಡಿಗೆ ಶಿವು ಹಾಗೂ ವಿವಿಧ ಭಾಗಗಳಿಂದ ರೈತರು ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಬಳಿಕ ರೈತರು ತಮ್ಮ ಜಮೀನುಗಳಲ್ಲಿ ಶೇಖರಣೆಯಾಗಿರುವ ಮರಳನ್ನು ಮಾರಾಟ ಮಾಡದೆ ತಮ್ಮ ಸ್ವಂತಕ್ಕೆ ಮಾತ್ರ ಬಳಸಿಕೊಳ್ಳಬೇಕು. ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಮಾತ್ರ ಮರಳು ಸಾಗಣೆ ಮಾಡಿಕೊಳ್ಳಬೇಕೆಂದು ಷರತ್ತು ಬದ್ಧ ಒಪ್ಪಿಗೆ ನೀಡಿದ್ದಾರೆ. ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಘು ಅವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.