ನೆಲ ಕಚ್ಚಿದ ಕಾಫಿ ಫಸಲು: ಸಂಕಷ್ಟದಲ್ಲಿ ಬೆಳೆಗಾರ

ಭಾರೀ ಮಳೆಗೆ ಮಲೆನಾಡಿನ ಜೀವಬೆಳೆ ಕಾಫಿ- ಏಲಕ್ಕಿ -ಕಾಳುಮೆಣಸು ಸಂಪೂರ್ಣ ನಾಶ

Team Udayavani, Nov 24, 2019, 11:39 AM IST

24-November-9

„ಸುಧೀರ್‌ ಬಿ.ಟಿ.
ಮೂಡಿಗೆರೆ:
ಈ ಬಾರಿ ಸುರಿದ ಭಾರೀ ಮಳೆಯಿಂದಾಗಿ ಕಾಫಿ ನಾಡಿನ, ರೈತರು ಕಂಗಾಲಾಗಿದ್ದಾರೆ. ಮೂಡಿಗೆರೆ ತಾಲೂಕಿನ ಜೀವಬೆಳೆ ಕಾಫಿ , ಏಲಕ್ಕಿ ಮತ್ತು ಕಾಳುಮೆಣಸು ಸಂಪೂರ್ಣವಾಗಿ ನೆಲಕಚ್ಚಿದ್ದು, ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಾರಿಯ ಮಳೆ ಆರ್ಭಟದಿಂದಾಗಿ ಶೇ.60 ಕ್ಕೂ ಹೆಚ್ಚು ಫಸಲು ನಾಶವಾಗಿದ್ದು, ಇರುವ ಅಲ್ಪಸ್ವಲ್ಪ ಬೆಳೆಯನ್ನೇ ಬೆಳೆಗಾರರು ಕೊಯ್ಲು ಮಾಡಬೇಕಿದೆ. ಈ ಬಾರಿ ಮುಂಗಾರು ನಿಗದಿತ ವೇಳೆಗೆ ಬರದೆ ರೈತರನ್ನು ಚಿಂತೆಗೀಡುಮಾಡಿತ್ತು. ಆದರೆ ನಂತರದ ದಿನಗಳಲ್ಲಿ ವಾಡಿಕೆಗಿಂತ ಅತೀಹೆಚ್ಚು ಸುರಿದು ರೈತರ ಬದುಕನ್ನೇ ಕಿತ್ತುಕೊಂಡಿತು. ನಿರಂತರ ಕುಂಭದ್ರೋಣ ಮಳೆಯಿಂದ ಒದ್ದೆಯಾದ ಭೂಮಿ ಕುಸಿದು ಅಪಾರ ನಷ್ಟವಾಯಿತು.

ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಬಾಳೂರು, ಜಾವಳಿ, ನಿಡುವಾಳೆ, ಕೂವೆ ಮುಂತಾದ ಕಡೆಗಳಲ್ಲಿ ಗುಡ್ಡ, ಭೂಮಿ ಕುಸಿದ ಪರಿಣಾಮ ತೋಟಗಳಿಗೆ ಅಪಾರ ಹಾನಿ ಉಂಟಾಗಿತ್ತು.

ಇದರಿಂದ ಮೂಡಿಗೆರೆಯ ಹಲವು ಭಾಗಗಳಲ್ಲಿ ಪ್ರಮುಖ ಆರ್ಥಿಕ ಬೆಳೆಗಳಾದ ಕಾಫಿ , ಕಾಳುಮೆಣಸು, ಏಲಕ್ಕಿ ಫಸಲು ಬಹುತೇಕ ನಾಶವಾಗಿ ಹೋಗಿದೆ. ಅ ಧಿಕ ಮಳೆಯ ಪರಿಣಾಮ ಒಂದು ಎಕರೆ ತೋಟದಲ್ಲಿ ಕೇವಲ 6-9 ಚೀಲ ಕಾಫಿ ಮಾತ್ರ ಕೈ ಸೇರುವ ಅಂದಾಜಿದೆ. ಹಿಂದಿನ ವರ್ಷಗಳಲ್ಲಿ ಲಾರಿಗಳಲ್ಲಿ ಟನ್‌ ಗಟ್ಟಲೆ ಕಾಫಿ ಬೀಜದ ಚೀಲಗಳನ್ನು ಸಾಗಿಸುತ್ತಿದ್ದ ಬೆಳೆಗಾರರು ಈ ಬಾರಿ ಕೆಲವೇ ಮೂಟೆಗಳಷ್ಟು ಬೆಳೆಗೆ ತೃಪ್ತಿ ಪಟ್ಟುಕೊಳ್ಳಬೇಕಿದೆ.

ಈ ವರ್ಷದ ಮಹಾಮಳೆ ಮೂಡಿಗೆರೆ ತಾಲೂಕನ್ನು ಹೆಚ್ಚಾಗಿ ಕಾಡಿದ್ದು, ಹಲವು ಕಡೆ ತೋಟ, ಮನೆ, ಗದ್ದೆ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು ಕೆಲ ಕೃಷಿಕರ ಕುಟುಂಬ ಬೀದಿಗೆ ಬಂದು ನಿಂತಿದೆ. ಸರಕಾರಗಳಿಂದ ಸಿಗಬೇಕಾದ ಪರಿಹಾರ ದೊರೆತರೂ ಅದು ಯಾತಕ್ಕೂ ಸಾಲುತ್ತಿಲ್ಲ. ರಾಜ್ಯದ ಹಲವೆಡೆಯಿಂದ ದಾನಿಗಳು ಹಲವು ವಸ್ತು ನೀಡಿದ್ದು ತಾತ್ಕಾಲಿಕ ರಿಲೀಫ್‌ ನೀಡಿದೆ. ಆದರೆ ಕಾಫಿ ತೋಟ, ಗದ್ದೆಗಳನ್ನೇ ನಂಬಿಕೊಂಡಿರುವ ಬೆಳೆಗಾರರು, ಕೂಲಿ ಕಾರ್ಮಿಕರು ಮಾತ್ರ ದಿಕ್ಕು ತೋಚದಂತಾಗಿದ್ದಾರೆ.

ವಿದೇಶಿ ವಿನಿಮಯದ ನೇರ ಲಾಭ, ಕಾಫಿ ಬೆಳೆಗೆ ವಿಮೆ ಸೌಲಭ್ಯ ಇಲ್ಲದಿರುವುದು, ಸಕಾಲಕ್ಕೆ ಎನ್‌ಡಿಆರ್‌ಎಫ್‌ ಪರಿಹಾರದಲ್ಲಿನ ಅಡೆತಡೆಗಳು ಮಲೆನಾಡಿನ ರೈತರು ನರಕಯಾತನೆ ಅನುಭವಿಸುವಂತೆ ಮಾಡಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.