ನೆಲ ಕಚ್ಚಿದ ಕಾಫಿ ಫಸಲು: ಸಂಕಷ್ಟದಲ್ಲಿ ಬೆಳೆಗಾರ

ಭಾರೀ ಮಳೆಗೆ ಮಲೆನಾಡಿನ ಜೀವಬೆಳೆ ಕಾಫಿ- ಏಲಕ್ಕಿ -ಕಾಳುಮೆಣಸು ಸಂಪೂರ್ಣ ನಾಶ

Team Udayavani, Nov 24, 2019, 11:39 AM IST

24-November-9

„ಸುಧೀರ್‌ ಬಿ.ಟಿ.
ಮೂಡಿಗೆರೆ:
ಈ ಬಾರಿ ಸುರಿದ ಭಾರೀ ಮಳೆಯಿಂದಾಗಿ ಕಾಫಿ ನಾಡಿನ, ರೈತರು ಕಂಗಾಲಾಗಿದ್ದಾರೆ. ಮೂಡಿಗೆರೆ ತಾಲೂಕಿನ ಜೀವಬೆಳೆ ಕಾಫಿ , ಏಲಕ್ಕಿ ಮತ್ತು ಕಾಳುಮೆಣಸು ಸಂಪೂರ್ಣವಾಗಿ ನೆಲಕಚ್ಚಿದ್ದು, ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಾರಿಯ ಮಳೆ ಆರ್ಭಟದಿಂದಾಗಿ ಶೇ.60 ಕ್ಕೂ ಹೆಚ್ಚು ಫಸಲು ನಾಶವಾಗಿದ್ದು, ಇರುವ ಅಲ್ಪಸ್ವಲ್ಪ ಬೆಳೆಯನ್ನೇ ಬೆಳೆಗಾರರು ಕೊಯ್ಲು ಮಾಡಬೇಕಿದೆ. ಈ ಬಾರಿ ಮುಂಗಾರು ನಿಗದಿತ ವೇಳೆಗೆ ಬರದೆ ರೈತರನ್ನು ಚಿಂತೆಗೀಡುಮಾಡಿತ್ತು. ಆದರೆ ನಂತರದ ದಿನಗಳಲ್ಲಿ ವಾಡಿಕೆಗಿಂತ ಅತೀಹೆಚ್ಚು ಸುರಿದು ರೈತರ ಬದುಕನ್ನೇ ಕಿತ್ತುಕೊಂಡಿತು. ನಿರಂತರ ಕುಂಭದ್ರೋಣ ಮಳೆಯಿಂದ ಒದ್ದೆಯಾದ ಭೂಮಿ ಕುಸಿದು ಅಪಾರ ನಷ್ಟವಾಯಿತು.

ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಬಾಳೂರು, ಜಾವಳಿ, ನಿಡುವಾಳೆ, ಕೂವೆ ಮುಂತಾದ ಕಡೆಗಳಲ್ಲಿ ಗುಡ್ಡ, ಭೂಮಿ ಕುಸಿದ ಪರಿಣಾಮ ತೋಟಗಳಿಗೆ ಅಪಾರ ಹಾನಿ ಉಂಟಾಗಿತ್ತು.

ಇದರಿಂದ ಮೂಡಿಗೆರೆಯ ಹಲವು ಭಾಗಗಳಲ್ಲಿ ಪ್ರಮುಖ ಆರ್ಥಿಕ ಬೆಳೆಗಳಾದ ಕಾಫಿ , ಕಾಳುಮೆಣಸು, ಏಲಕ್ಕಿ ಫಸಲು ಬಹುತೇಕ ನಾಶವಾಗಿ ಹೋಗಿದೆ. ಅ ಧಿಕ ಮಳೆಯ ಪರಿಣಾಮ ಒಂದು ಎಕರೆ ತೋಟದಲ್ಲಿ ಕೇವಲ 6-9 ಚೀಲ ಕಾಫಿ ಮಾತ್ರ ಕೈ ಸೇರುವ ಅಂದಾಜಿದೆ. ಹಿಂದಿನ ವರ್ಷಗಳಲ್ಲಿ ಲಾರಿಗಳಲ್ಲಿ ಟನ್‌ ಗಟ್ಟಲೆ ಕಾಫಿ ಬೀಜದ ಚೀಲಗಳನ್ನು ಸಾಗಿಸುತ್ತಿದ್ದ ಬೆಳೆಗಾರರು ಈ ಬಾರಿ ಕೆಲವೇ ಮೂಟೆಗಳಷ್ಟು ಬೆಳೆಗೆ ತೃಪ್ತಿ ಪಟ್ಟುಕೊಳ್ಳಬೇಕಿದೆ.

ಈ ವರ್ಷದ ಮಹಾಮಳೆ ಮೂಡಿಗೆರೆ ತಾಲೂಕನ್ನು ಹೆಚ್ಚಾಗಿ ಕಾಡಿದ್ದು, ಹಲವು ಕಡೆ ತೋಟ, ಮನೆ, ಗದ್ದೆ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು ಕೆಲ ಕೃಷಿಕರ ಕುಟುಂಬ ಬೀದಿಗೆ ಬಂದು ನಿಂತಿದೆ. ಸರಕಾರಗಳಿಂದ ಸಿಗಬೇಕಾದ ಪರಿಹಾರ ದೊರೆತರೂ ಅದು ಯಾತಕ್ಕೂ ಸಾಲುತ್ತಿಲ್ಲ. ರಾಜ್ಯದ ಹಲವೆಡೆಯಿಂದ ದಾನಿಗಳು ಹಲವು ವಸ್ತು ನೀಡಿದ್ದು ತಾತ್ಕಾಲಿಕ ರಿಲೀಫ್‌ ನೀಡಿದೆ. ಆದರೆ ಕಾಫಿ ತೋಟ, ಗದ್ದೆಗಳನ್ನೇ ನಂಬಿಕೊಂಡಿರುವ ಬೆಳೆಗಾರರು, ಕೂಲಿ ಕಾರ್ಮಿಕರು ಮಾತ್ರ ದಿಕ್ಕು ತೋಚದಂತಾಗಿದ್ದಾರೆ.

ವಿದೇಶಿ ವಿನಿಮಯದ ನೇರ ಲಾಭ, ಕಾಫಿ ಬೆಳೆಗೆ ವಿಮೆ ಸೌಲಭ್ಯ ಇಲ್ಲದಿರುವುದು, ಸಕಾಲಕ್ಕೆ ಎನ್‌ಡಿಆರ್‌ಎಫ್‌ ಪರಿಹಾರದಲ್ಲಿನ ಅಡೆತಡೆಗಳು ಮಲೆನಾಡಿನ ರೈತರು ನರಕಯಾತನೆ ಅನುಭವಿಸುವಂತೆ ಮಾಡಿದೆ.

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.