ಸಂಬಳಕ್ಕಾಗಿ ಡಿ ದರ್ಜೆ ನೌಕರರ ಧರಣಿ

ವೇತನ ನೀಡುವವರೆಗೂ ಕೆಲಸಕ್ಕೆ ಹಾಜರಾಗಲ್ಲವೆಂದು ಪಟ್ಟುಹಿಡಿದ ಹೊರಗುತ್ತಿಗೆ ನೌಕರರು

Team Udayavani, Jun 26, 2019, 12:01 PM IST

26-June-15

ಮೂಡಿಗೆರೆ: ಎಂಜಿಎಂ ಸರಕಾರಿ ಆಸ್ಪತ್ರೆ ಎದುರು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುತ್ತಿಗೆ ಆಧಾರದ ಡಿ ದರ್ಜೆ ನೌಕರರು ಸಂಬಳಕ್ಕಾಗಿ ಧರಣಿ ನಡೆಸಿದರು.

ಮೂಡಿಗೆರೆ: ಸರಕಾರ ಕಳೆದ 5 ತಿಂಗಳಿಂದ ತಮಗೆ ಸಂಬಳ ನೀಡದೇ ಸತಾಯಿಸಲಾಗುತ್ತಿದೆ. ಮನೆಗೆ ಅಕ್ಕಿ, ತರಕಾರಿ ಕೊಳ್ಳಲು ಹಣವಿಲ್ಲ. ಸಾಲಗಾರರು ಮನೆಗೆ ಎಡತಾಕುತ್ತಿದ್ದಾರೆ. ನಮಗೆ ಸಂಬಳ ನೀಡದಿದ್ದರೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಎಂಜಿಎಂ ಆಸ್ಪತ್ರೆಯ ಹೊರ ಗುತ್ತಿಗೆ ಡಿ ದರ್ಜೆ ನೌಕರರು ಆಸ್ಪತ್ರೆ ಎದುರು ಧರಣಿ ನಡೆಸಿದರು.

ಇಂಡಿಯನ್‌ ಎಂಪ್ಲಾಯಿಮೆಂಟ್ ಬ್ಯೂರೋ ಹಾಸನದ ಏಜೆನ್ಸಿಯಿಂದ 13 ಮಂದಿ ಹಾಗೂ ಮೈಸೂರಿನ ಏಜೆನ್ಸಿಯೊಬ್ಬರು ಒಟ್ಟು 14 ಮಂದಿ ಡಿ ದರ್ಜೆ ನೌಕರರು ಆಸ್ಪತ್ರೆ ಸ್ವಚ್ಛತೆ ಮತ್ತಿತರೆ ಕೆಲಸ ನಿರ್ವಹಿಸುತ್ತಿದ್ದು, ನಮಗೆ ಜನವರಿ ತಿಂಗಳ ವರೆಗೆ ಮಾತ್ರ ಸಂಬಳ ನೀಡಲಾಗಿದೆ. ಫೆಬ್ರವರಿಯಿಂದ ಇಲ್ಲಿಯವರೆಗೂ ಸಂಬಳವನ್ನೇ ನೀಡಿಲ್ಲ. ಹಲವು ಬಾರಿ ಹಿರಿಯ ಅಧಿಕಾರಿಗಳಿಗೆ ಸಂಬಳ ನೀಡುವಂತೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ನಮ್ಮನ್ನು ಚೆನ್ನಾಗಿ ದುಡಿಸಿಕೊಂಡು ಸಂಬಳಕ್ಕಾಗಿ ಪರದಾಡುವಂತೆ ಮಾಡುತ್ತಿದ್ದಾರೆ. ಅಧಿಕಾರಿಗಳು ಭರವಸೆ ನೀಡಿದರೆ ಸಾಲದು. ಸಂಬಳ ನೀಡಿದರೆ ಮಾತ್ರ ನಾವು ಕರ್ತವ್ಯಕ್ಕೆ ತೆರಳುತ್ತೇವೆ. ಇಲ್ಲವಾದರೆ ಧರಣಿ ಮುಂದುವರಿಸುತ್ತೇವೆ ಎಂದು ಧರಣಿನಿರತ ನೌಕರರು ಪಟ್ಟು ಹಿಡಿದರು.

ಮಂಗಳವಾರ ಆಸ್ಪತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ಇದ್ದದ್ದರಿಂದ ಸಭೆಗೆ ಹಾಜರಾಗಲು ಆಸ್ಪತ್ರೆಗೆ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಧರಣಿ ನಡೆಸುತ್ತಿದ್ದ ನೌಕರರ ಬಳಿ ತೆರಳಿದರು. ಸ್ಥಳದಿಂದಲೇ ಆರೋಗ್ಯ ಇಲಾಖೆ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ, ನೌಕರರಿಗೆ ಕೂಡಲೇ ಸಂಬಳ ನೀಡುವಂತೆ ತಿಳಿಸಿದರು. ಆಗ, ಜುಲೈ ಮೊದಲ ವಾರದಲ್ಲಿ ಸಂಬಳ ನೀಡುವುದಾಗಿ ನಿರ್ದೇಶಕರು ಭರವಸೆ ನೀಡಿದರು. ಅವರ ಭರವಸೆಗೆ ಧರಣಿ ನಿರತ ನೌಕರರು ಬಗ್ಗಲಿಲ್ಲ. ನಮಗೆ ಭರವಸೆ ಬೇಕಿಲ್ಲ. ಸಂಬಳ ನೀಡಿ ಎಂದು ಪಟ್ಟು ಹಿಡಿದರು.

ಧರಣಿ ನಿರತ ನೌಕರರ ಹಠದಿಂದ ಇರಿಸುಮುರಿಸಿಗೆ ಒಳಗಾದ ಶಾಸಕರು ಧರಣಿನಿರತರನ್ನು ಒಳಗೆ ಬನ್ನಿ ಮಾತನಾಡೋಣ. ಇದರ ಒಳ ಮರ್ಮಗಳು ನಿಮಗೆ ಅರ್ಥವಾಗಲ್ಲ. ಧರಣಿ ಮುಂದುವರಿಸಿದರೆ ಕೆಲಸ ಕಳೆದುಕೊಳ್ಳುತ್ತೀರಿ ಎನ್ನುತ್ತಾ ತರಾತುರಿಯಲ್ಲಿ ಒಳ ನಡೆದರು. ಶಾಸಕರ ಮಾತಿಗೆ ಅಸಮಧಾನಗೊಂಡ ಧರಣಿನಿರತರು ಕೆಲಹೊತ್ತು ಧರಣಿ ನಡೆಸಿ ಮತ್ತೆ ಕರ್ತವ್ಯಕ್ಕೆ ಹಾಜರಾದರು.

ಧರಣಿ ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಸುಂದರೇಶ್‌, ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಅಶ್ವತ್ಥಬಾಬು, ಡಾ.ಸಂತೋಷ್‌, ಮಂಜುಳಾ ಮನವೊಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.

ಧರಣಿಯಲ್ಲಿ ವಿನಯ್‌, ಸುರೇಶ್‌, ಮಂಜುನಾಥ್‌, ಶಾಮ್‌, ಪ್ರಭು, ತೀರ್ಥ, ಉಮಾ, ಶೈಲಾ, ಶರಣ್‌, ಲೋಕೇಶ್‌, ನಾಗೇಶ್‌, ನವೀನ್‌, ಭವ್ಯಾ ಉಪಸ್ಥಿತರಿದ್ದರು.

ಆಸ್ಪತ್ರೆಯಲ್ಲಿ ಶಾಸಕರ ಸಭೆ: ಮಂಗಳವಾರ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ಇದ್ದಿದ್ದರಿಂದ 7ಮಂದಿ ವೈದ್ಯಾಧಿಕಾರಿಗಳು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಒಬ್ಬಿಬ್ಬರು ವೈದ್ಯಾಧಿಕಾರಿಗಳು ಕಾಟಾಚಾರಕ್ಕೆ ಎಂಬಂತೆ ಕರ್ತವ್ಯ ನಿರ್ವಹಿಸುತ್ತಾರೆ. ಉಳಿದ ವೈದ್ಯರು ಕಣ್ಣಿಗೆ ಕಾಣಸಿಗುವುದಿಲ್ಲ. ಆದರೆ, ಮಂಗಳವಾರ ಆಸ್ಪತ್ರೆಯ ಎಕ್ಸರೇ ವಿಭಾಗ, ಕಣ್ಣು ಪರೀಕ್ಷಾ ವಿಭಾಗ, ರಕ್ತ ಪರೀಕ್ಷೆ ಸೇರಿದಂತೆ ಬಹುತೇಕ ವಿಭಾಗಗಳಲ್ಲಿ ಸಿಬ್ಬಂದಿ ಮುತುವರ್ಜಿಯಿಂದ ಕೆಲಸದಲ್ಲಿ ಮಗ್ನರಾಗಿದ್ದರು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.