ಕಾಲುಸಂಕ; ಮಲೆನಾಡಿಗರ ಜೀವಕ್ಕೇ ಕಂಟಕ!

ಅಪಾಯಕಾರಿ ಕಾಲುಸಂಕಗಳ ಮೂಲಕ ಹೊಳೆ ದಾಟುವ ಜನರ ಪರಿಸ್ಥಿತಿ ಶೋಚನೀಯ

Team Udayavani, Jul 13, 2019, 11:44 AM IST

13-July-15

ಮೂಡಿಗೆರೆ: ತಾಲೂಕಿನ ಸಂಸೆ ಗ್ರಾಪಂ ವ್ಯಾಪ್ತಿಯ ಬಸರೀಕಲ್ ಗ್ರಾಮದಲ್ಲಿ ಸೋಮಾವತಿ ಹೊಳೆಗೆ ಗ್ರಾಮಸ್ಥರು ನಿರ್ಮಿಸಿರುವ ಕಾಲುಸಂಕ.

ಮೂಡಿಗೆರೆ: ಭಾಗಶ: ಗುಡ್ಡಗಾಡು ಪ್ರದೇಶದಿಂದ ಕೂಡಿರುವ ತಾಲೂಕಿನ ರೈತರು, ಕೂಲಿ ಕಾರ್ಮಿಕರು ಸಣ್ಣಪುಟ್ಟ ಹಳ್ಳಕೊಳ್ಳಗಳನ್ನು ದಾಟಲು ನಿರ್ಮಿಸಿಕೊಂಡಿರುವ ಕಾಲುಸಂಕಗಳು ಅಪಾಯದಲ್ಲಿದ್ದು, ಜನರು ಕೈಯಲ್ಲಿ ಜೀವ ಹಿಡಿದುಕೊಂಡು ಹೊಳೆ ದಾಟುವ ಶೋಚನೀಯ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಲ್ಯ ಗ್ರಾಮದ ಬಳಿಯ ಬಸರೀಕಲ್ನಲ್ಲಿ ಮಳೆಗಾಲದಲ್ಲಿ ಸೋಮಾವತಿ ಹೊಳೆ ದಾಟಲು ಸ್ಥಳೀಯರೇ ನಿರ್ಮಿಸಿದ ತಾತ್ಕಾಲಿಕ ಕಾಲುಸಂಕವೊಂದಿದ್ದು, ಗಟ್ಟಿಮುಟ್ಟಾಗಿದೆ. ಬಸರೀಕಲ್ನಿಂದ ಬಾಯಿಕುಂಡ್ರಿ, ಬೆಳ್ಳ, ಗುಚ್ಚರ್ಕ ಗ್ರಾಮಗಳಿಗೆ ಜನರು ತೆರಳಲು ಸುಮಾರು 12 ಕಿ.ಮೀ. ಸುತ್ತಿ ಬರಬೇಕಾಗುತ್ತದೆ. ಆದರೆ, ಸ್ಥಳೀಯರು ನಿರ್ಮಿಸಿದ ಈ ಕಾಲುಸಂಕದಿಂದ ಆ ಗ್ರಾಮಗಳಿಗೆ ನೇರವಾಗಿ ತೆರಳಲು ಅನುಕೂಲವಾಗಿದೆ. ಸೋಮಾವತಿ ಹೊಳೆ ದಾಟಲು ಸೇತುವೆ ನಿರ್ಮಾಣ ಮಾಡಿಕೊಡುವಂತೆ ಗ್ರಾಮಸ್ಥರು ಹಲವು ಬಾರಿ ಇಲ್ಲಿನ ಗ್ರಾಪಂ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಹಾಗೆಯೇ ಗೋಣಿಬೀಡು ಗ್ರಾಪಂ ವ್ಯಾಪ್ತಿಯ ಚುಮುಟಿಗೆರೆ ಶಾಲೆ ಹತ್ತಿರ ಹಿರೇಶಿಗಿರ ಕಾಲೋನಿಗೆ ಸಂಪರ್ಕ ಕಲ್ಪಿಸುವ ಕಾಲುಸಂಕವೊಂದಿದ್ದು, ಈಗಲೋ ಆಗಲೋ ಬೀಳುವಂತಿದೆ. ಒಂದೊಮ್ಮೆ ಈ ಬಾರಿ ಮಳೆ ಹೆಚ್ಚಾಗಿ ಬಂದಲ್ಲಿ ಈ ಕಾಲುಸಂಕ ಮುರಿದುಬಿದ್ದರೆ ಹಿರೇಶಿಗಿರ ಕಾಲೋನಿಗೆ 4 ಕಿ.ಮೀ.ನಷ್ಟು ಸುತ್ತಿಕೊಂಡು ಹೋಗಬೇಕಾಗುತ್ತದೆ. ಹಾಗಾಗಿ, ಮಳೆ ಹೆಚ್ಚಾಗುವ ಮುನ್ನ ಹಿರೇಶಿಗಿರ ಕಾಲೋನಿಗೆ ತೆರಳಲು ಕಾಲುಸೇತುವೆ ನಿರ್ಮಾಣ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದೇ ಗ್ರಾಪಂ ವ್ಯಾಪ್ತಿಯಲ್ಲಿ ತಮಟೆಬೈಲ್ನಿಂದ ಸೀಗೆಹಳ್ಳಿಗೆ ಸಂಪರ್ಕ ಕಲ್ಪಿಸುವ ಕಾಲುಸಂಕ ಇದೀಗ ಸಂಪೂರ್ಣ ನೆಲಕಚ್ಚಿದೆ. ಆದರೆ, ಇಲ್ಲಿ ಬದಲಿ ರಸ್ತೆ ಇರುವುದರಿಂದ ಈ ಕಾಲುಸಂಕದ ಬಗ್ಗೆ ಜನರು ತಲೆಕೆಡಿಸಿಕೊಂಡಿಲ್ಲ.

ತಾಲೂಕಿನ ಊರುಬಗೆ ಗ್ರಾಪಂ ವ್ಯಾಪ್ತಿಯ ಮೂಲರಹಳ್ಳಿಯಿಂದ ಹಡಗುಡ್ಡೆ ಗ್ರಾಮದಲ್ಲಿ 14ಗಿರಿಜನ ಮಲಕುಡುಗೆ ಸಮುದಾಯದವರು ವಾಸವಿದ್ದು, ಮೂಲರಹಳ್ಳಿಯಿಂದ ಹಡಗುಡ್ಡೆ ಗ್ರಾಮಕ್ಕೆ ತೆರಳಲು ಕಾಲುಸಂಕವೊಂದನ್ನು ಅಲ್ಲಿನ ಜನರೇ ನಿರ್ಮಿಸಿಕೊಂಡಿದ್ದಾರೆ. ಆದರೆ, ಈ ಕಾಲುಸಂಕ ಅಷ್ಟೇನೂ ಸುರಕ್ಷಿತವಲ್ಲದ ಕಾರಣ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಲಿನ ಜನರು ಪರ್ಯಾಯ ವ್ಯವಸ್ಥೆ ಮಾಡಿಕೊಡಲು ಆಗ್ರಹಿಸಿ ಚುನಾವಣೆಗೆ ಬಹಿಷ್ಕಾರ ಹಾಕಿದ್ದರು. ಇದರ ಪರಿಣಾಮವಾಗಿ ಮಾಜಿ ಸಚಿವೆ, ವಿಧಾನ ಪರಿಷತ್‌ ಸದಸ್ಯೆ ಮೋಟಮ್ಮ ತಮ್ಮ ಅನುದಾನದಲ್ಲಿ ಸೇತುವೆಗೆ ಹಣ ಬಿಡುಗಡೆಗೊಳಿಸಿ, ಇದೀಗ ಸೇತುವೆ ನಿರ್ಮಿಸಿಕೊಟ್ಟಿದ್ದಾರೆ.

ಆಯಾ ಗ್ರಾಮದ ಗ್ರಾಮಸ್ಥರು ನಿರ್ಮಿಸುವ ಅಷ್ಟೇನೂ ಭದ್ರವಲ್ಲದ ತಾತ್ಕಾಲಿಕ ಕಾಲುಸಂಕಗಳ ಮೂಲಕ ಓಡಾಡುವ ಜನರು ಯಾವಾಗಲೂ ಜೀವ ಭಯದಿಂದಲೇ ತೆರಳಬೇಕಾಗುತ್ತದೆ. ಮಳೆಗಾಲದಲ್ಲಿ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುವುದರಿಂದ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಹಾಗಾಗಿ, ಸಂಬಂಧಿಸಿದ ಅಕಾರಿಗಳು ಈ ರೀತಿಯ ಕಾಲುಸಂಕಗಳ ಬಗ್ಗೆ ಗಮನ ಹರಿಸಿ ಸುಭದ್ರ ಕಾಲು ಸೇತುವೆ ನಿರ್ಮಾಣ ಮಾಡಿಕೊಡಲು ಇನ್ನಾದರೂ ಗಮನ ಹರಿಸಬೇಕಾಗಿದೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.