ಮೃತ್ಯುಕೂಪವಾದ ಹೊಂಡ

ಪವರ್‌ ಸ್ಟೇಷನ್‌ ನಿರ್ಮಾಣಕ್ಕೆ ತೆರೆದಿರುವ ಹೊಂಡದಲ್ಲಿ ಬೀಳುತ್ತಿರುವ ಜಾನುವಾರುಗಳು

Team Udayavani, Jun 5, 2019, 11:37 AM IST

5-June-16

ಮೂಡಿಗೆರೆ: ವಿದ್ಯುತ್‌ ಪವರ್‌ ಸ್ಟೇಷನ್‌ ಕಾಮಗಾರಿ ನಡೆಯುವ ಸ್ಥಳದ ಅಡಿಪಾಯದ ಗುಂಡಿಗಳಿಗೆ ದನಗಳು ಬಿದ್ದಿರುವುದು.

ಮೂಡಿಗೆರೆ: ತಾಲ್ಲೂಕಿನ ಬಣಕಲ್ ಗ್ರಾಮದ ಸುಭಾಷ್‌ನಗರದಲ್ಲಿ ವಿದ್ಯುತ್‌ ಪವರ್‌ ಸ್ಟೇಷನ್‌ ನಿರ್ಮಾಣದ ಕಾಮಗಾರಿಗಾಗಿ ತೆರೆದಿರುವ 10 ಅಡಿಪಾಯದ ಬೃಹತ್‌ ಗುಂಡಿಗಳಲ್ಲಿ ಐದು ದನಗಳು ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.

ಮೆಸ್ಕಾಂನಿಂದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ವಿದ್ಯುತ್‌ ಪವರ್‌ಸ್ಟೇಷನ್‌ ನಿರ್ಮಾಣ ಮಾಡಲು ಆಳವಾದ ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದಾರೆ. ಅದಕ್ಕೆ ಯಾವುದೇ ಸುರಕ್ಷತೆ ಮಾಡದೇ ಬಿಟ್ಟಿರುವುದರಿಂದ ದನಗಳು ನಡೆದುಕೊಂಡು ಹೋಗಿ ರಾತ್ರಿ ಸಮಯದಲ್ಲಿ ಬಿದ್ದಿವೆ. ಗುಂಡಿಗೆ ಬಿದ್ದಿದ್ದ ದನಗಳನ್ನು ನೋಡಿದ ಸ್ಥಳೀಯರು ಅವುಗಳಿಗೆ ಅಪಾಯವಾಗದಂತೆ ಮೇಲೆತ್ತಿ ರಕ್ಷಿಸಿದ್ದಾರೆ.

ಬೃಹತ್‌ ಗುಂಡಿಗಳನ್ನು ತೆಗೆದಾಗ ಅದಕ್ಕೆ ತಡೆಗೋಡೆ ಮಾಡುವ ಅಗತ್ಯವಿದೆ ಎಂದು ದೂರುವ ಗ್ರಾಮಸ್ಥರು, ಪಕ್ಕದಲ್ಲಿಯೇ ಅಂಗನವಾಡಿ ಕೇಂದ್ರವಿದೆ. ಮಕ್ಕಳು ಈ ಭಾಗದಲ್ಲಿ ಓಡಾಡುತ್ತಲೇ ಇರುತ್ತಾರೆ. ಇದರತ್ತ ಗಮನ ಹರಿಸದೆ ಗುಂಡಿ ತೋಡಿ ತಡೆ ನಿರ್ಮಿಸದೆ ಬಿಟ್ಟಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗುತ್ತಿಗೆದಾರರು ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸುವಾಗ ಸುತ್ತಲೂ ಬೇಲಿ ನಿರ್ಮಿಸಿ ಕೆಲಸ ಮಾಡುವುದು ಅಗತ್ಯ. ಆದರೆ ಸುರಕ್ಷತೆ ಬಗ್ಗೆ ನಿಗಾ ವಹಿಸದೇ ಗುಂಡಿಗೆ 5 ದನಗಳು ಬಿದ್ದು ಮೇಲೆ ಬರಲಾಗದೇ ಒದ್ದಾಡಿದವು. ಕಾಮಗಾರಿ ನಡೆಸಲು 10 ಅಡಿಪಾಯದ ಸುಮಾರು 12 ಗುಂಡಿಗಳನ್ನು ತೆರೆದಿದ್ದು, ಅವು ಅಪಾಯದ ಮೃತ್ಯು ಕೂಪಗಳಾಗಿವೆ. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಗುತ್ತಿಗೆದಾರರು ಸುರಕ್ಷತೆಯ ಕ್ರಮಗಳನ್ನು ಪಾಲಿಸಿ ಜನರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವಿದ್ಯುತ್‌ ಪವರ್‌ ಸ್ಟೇಷನ್‌ ಮಾಡಲು ಕೇವಲ ಅಡಿಪಾಯ ಹಾಕಲಾಗಿದೆ. ನಾವು ಅಡಿಪಾಯ ತೆಗೆದ ಸ್ಥಳದ ಸುತ್ತ ಮುತ್ತ 10 ಅಡಿ ಗುಂಡಿ ತೆಗೆದು ಸುರಕ್ಷತೆ ಮಾಡಲಾಗಿದೆ. ಎಲೆಕ್ಟ್ರಿಕಲ್ ಅರ್ಥಿಂಗ್‌ ವರ್ಕ್‌ ಆದ ನಂತರ ನಾವು ಕಾಮಗಾರಿ ನಡೆಯುವ ಸ್ಥಳದಲ್ಲಿ ಬೇಲಿ ನಿರ್ಮಾಣ ಮಾಡುತ್ತೇವೆ.ಸದ್ಯಕ್ಕೆ ಕಚೇರಿಗೆ ಬರುವ ರಸ್ತೆಯ ಭಾಗದಿಂದ ದನಗಳು ಒಳಪ್ರವೇಶ ಮಾಡುವುದರಿಂದ ಅಲ್ಲಿಗೆ ಸುರಕ್ಷತೆ ಮಾಡಿ ದನಗಳು ಬರದಂತೆ ತಡೆಯುತ್ತೇವೆ ಎಂದು ಬಣಕಲ್ ಮೆಸ್ಕಾಂನ ಕಿರಿಯ ಅಭಿಯಂತರ ಮಂಜುನಾಥ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.