ಮೃತ್ಯುಕೂಪವಾದ ಹೊಂಡ

ಪವರ್‌ ಸ್ಟೇಷನ್‌ ನಿರ್ಮಾಣಕ್ಕೆ ತೆರೆದಿರುವ ಹೊಂಡದಲ್ಲಿ ಬೀಳುತ್ತಿರುವ ಜಾನುವಾರುಗಳು

Team Udayavani, Jun 5, 2019, 11:37 AM IST

5-June-16

ಮೂಡಿಗೆರೆ: ವಿದ್ಯುತ್‌ ಪವರ್‌ ಸ್ಟೇಷನ್‌ ಕಾಮಗಾರಿ ನಡೆಯುವ ಸ್ಥಳದ ಅಡಿಪಾಯದ ಗುಂಡಿಗಳಿಗೆ ದನಗಳು ಬಿದ್ದಿರುವುದು.

ಮೂಡಿಗೆರೆ: ತಾಲ್ಲೂಕಿನ ಬಣಕಲ್ ಗ್ರಾಮದ ಸುಭಾಷ್‌ನಗರದಲ್ಲಿ ವಿದ್ಯುತ್‌ ಪವರ್‌ ಸ್ಟೇಷನ್‌ ನಿರ್ಮಾಣದ ಕಾಮಗಾರಿಗಾಗಿ ತೆರೆದಿರುವ 10 ಅಡಿಪಾಯದ ಬೃಹತ್‌ ಗುಂಡಿಗಳಲ್ಲಿ ಐದು ದನಗಳು ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.

ಮೆಸ್ಕಾಂನಿಂದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ವಿದ್ಯುತ್‌ ಪವರ್‌ಸ್ಟೇಷನ್‌ ನಿರ್ಮಾಣ ಮಾಡಲು ಆಳವಾದ ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದಾರೆ. ಅದಕ್ಕೆ ಯಾವುದೇ ಸುರಕ್ಷತೆ ಮಾಡದೇ ಬಿಟ್ಟಿರುವುದರಿಂದ ದನಗಳು ನಡೆದುಕೊಂಡು ಹೋಗಿ ರಾತ್ರಿ ಸಮಯದಲ್ಲಿ ಬಿದ್ದಿವೆ. ಗುಂಡಿಗೆ ಬಿದ್ದಿದ್ದ ದನಗಳನ್ನು ನೋಡಿದ ಸ್ಥಳೀಯರು ಅವುಗಳಿಗೆ ಅಪಾಯವಾಗದಂತೆ ಮೇಲೆತ್ತಿ ರಕ್ಷಿಸಿದ್ದಾರೆ.

ಬೃಹತ್‌ ಗುಂಡಿಗಳನ್ನು ತೆಗೆದಾಗ ಅದಕ್ಕೆ ತಡೆಗೋಡೆ ಮಾಡುವ ಅಗತ್ಯವಿದೆ ಎಂದು ದೂರುವ ಗ್ರಾಮಸ್ಥರು, ಪಕ್ಕದಲ್ಲಿಯೇ ಅಂಗನವಾಡಿ ಕೇಂದ್ರವಿದೆ. ಮಕ್ಕಳು ಈ ಭಾಗದಲ್ಲಿ ಓಡಾಡುತ್ತಲೇ ಇರುತ್ತಾರೆ. ಇದರತ್ತ ಗಮನ ಹರಿಸದೆ ಗುಂಡಿ ತೋಡಿ ತಡೆ ನಿರ್ಮಿಸದೆ ಬಿಟ್ಟಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗುತ್ತಿಗೆದಾರರು ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸುವಾಗ ಸುತ್ತಲೂ ಬೇಲಿ ನಿರ್ಮಿಸಿ ಕೆಲಸ ಮಾಡುವುದು ಅಗತ್ಯ. ಆದರೆ ಸುರಕ್ಷತೆ ಬಗ್ಗೆ ನಿಗಾ ವಹಿಸದೇ ಗುಂಡಿಗೆ 5 ದನಗಳು ಬಿದ್ದು ಮೇಲೆ ಬರಲಾಗದೇ ಒದ್ದಾಡಿದವು. ಕಾಮಗಾರಿ ನಡೆಸಲು 10 ಅಡಿಪಾಯದ ಸುಮಾರು 12 ಗುಂಡಿಗಳನ್ನು ತೆರೆದಿದ್ದು, ಅವು ಅಪಾಯದ ಮೃತ್ಯು ಕೂಪಗಳಾಗಿವೆ. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಗುತ್ತಿಗೆದಾರರು ಸುರಕ್ಷತೆಯ ಕ್ರಮಗಳನ್ನು ಪಾಲಿಸಿ ಜನರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವಿದ್ಯುತ್‌ ಪವರ್‌ ಸ್ಟೇಷನ್‌ ಮಾಡಲು ಕೇವಲ ಅಡಿಪಾಯ ಹಾಕಲಾಗಿದೆ. ನಾವು ಅಡಿಪಾಯ ತೆಗೆದ ಸ್ಥಳದ ಸುತ್ತ ಮುತ್ತ 10 ಅಡಿ ಗುಂಡಿ ತೆಗೆದು ಸುರಕ್ಷತೆ ಮಾಡಲಾಗಿದೆ. ಎಲೆಕ್ಟ್ರಿಕಲ್ ಅರ್ಥಿಂಗ್‌ ವರ್ಕ್‌ ಆದ ನಂತರ ನಾವು ಕಾಮಗಾರಿ ನಡೆಯುವ ಸ್ಥಳದಲ್ಲಿ ಬೇಲಿ ನಿರ್ಮಾಣ ಮಾಡುತ್ತೇವೆ.ಸದ್ಯಕ್ಕೆ ಕಚೇರಿಗೆ ಬರುವ ರಸ್ತೆಯ ಭಾಗದಿಂದ ದನಗಳು ಒಳಪ್ರವೇಶ ಮಾಡುವುದರಿಂದ ಅಲ್ಲಿಗೆ ಸುರಕ್ಷತೆ ಮಾಡಿ ದನಗಳು ಬರದಂತೆ ತಡೆಯುತ್ತೇವೆ ಎಂದು ಬಣಕಲ್ ಮೆಸ್ಕಾಂನ ಕಿರಿಯ ಅಭಿಯಂತರ ಮಂಜುನಾಥ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.