ಸಾಹಿತಿ ರಮೇಶ್ಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಪುರಸ್ಕಾರ
ಜೀವಮಾನ ಸಾಧನೆಗಾಗಿ ಬೆಂಗಳೂರಿನಲ್ಲಿ ವನಕಲ್ಲು ಡಾ| ಬಸವ ರಮಾನಂದ ಸ್ವಾಮೀಜಿಯಿಂದ ಪ್ರಶಸ್ತಿ ಪ್ರದಾನ
Team Udayavani, Oct 6, 2019, 5:57 PM IST
ಮೂಡಿಗೆರೆ: ತಾಲೂಕಿನ ಕಾಫಿ ಬೆಳೆಗಾರ ಹಾಗೂ ಹಿರಿಯ ಸಾಹಿತಿ ಹಳೆಕೋಟೆ ರಮೇಶ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶ್ವೇಶ್ವರಯ್ಯ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಭವನದ ನಯನ ಮಂದಿರದಲ್ಲಿ ನಡೆದ ಅಖೀಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜೀವಮಾನ ಸಾಧನೆಗಾಗಿ 100 ಪುಟಗಳನ್ನು ಮೀರಿದ ಕನಿಷ್ಟ 10 ಪುಸ್ತಕಗಳನ್ನು ರಚಿಸಿದ 50ವರ್ಷ ಮೇಲ್ಪಟ್ಟ ತಾಲೂಕಿನ ಹಿರಿಯ ಸಾಹಿತಿ ಹಳೆಕೋಟೆ ರಮೇಶ್ ಸೇರಿದಂತೆ ರಾಜ್ಯದ 17 ಮಂದಿ ಸಾಹಿತಿಗಳಿಗೆ ಈ ವರ್ಷದಲ್ಲಿ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ನೀಡಲಾಗಿದೆ. ಹಿರಿಯ ಸಾಹಿತಿ ಜಯದೇವಪ್ಪ ಜೈನಕೇರಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವನಕಲ್ಲು ಸುಕ್ಷೇತ್ರದ ಡಾ| ಬಸವ ರಮಾನಂದ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಮಾಜಿ ಸಚಿವ ಅಮರೇಗೌಡ, ಕಲಾವಿದ ಬ್ಯಾಂಕ್ ಜನಾರ್ದನ್, ಪಂಕಜಾ ರವಿಶಂಕರ್ ಮತ್ತು ಮುತ್ತುರಾಜು ಮುಂತಾದವರು ಉಪಸ್ಥಿತರಿದ್ದರು.
ತಾಲೂಕಿನ ನಿವೃತ್ತ ಶಿಕ್ಷಕ ಹಾಗೂ ಕೃಷಿಕರು ಆದ ದಿ| ನಂಜೇಗೌಡ ಹಾಗೂ ಸೀತಮ್ಮ ದಂಪತಿ ಪುತ್ರ ಸಾಹಿತಿ ಹಳೆಕೋಟೆ ರಮೇಶ್ ಅವರು, ಕಾಫಿ, ಮೆಣಸು,
ಏಲಕ್ಕಿ ಸೇರಿದಂತೆ ಬಹುವಿಧ ಬೆಳೆಗಳನ್ನು ಬೆಳೆಯುವ ಪ್ರಗತಿಪರ ಕೃಷಿಕರಾಗಿದ್ದಾರೆ. ಸಾಹಿತ್ಯ ರಚನೆ ಅವರ ಹವ್ಯಾಸವಾಗಿದ್ದು, ಈಗಾಗಲೇ 25 ಕೃತಿಗಳನ್ನು ರಚಿಸಿ, ಬಿಡುಗಡೆಗೊಳಿಸಿದ್ದಾರೆ. ಹಳೆಕೋಟೆ ರಮೇಶ್ ಅವರು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎರಡೂವರೆ ದಶಕ ಸೇವೆ ಸಲ್ಲಿಸಿದ್ದು, ಸಾಹಿತ್ಯ ಮತ್ತು ಕೃಷಿಯಲ್ಲಿನ ಸಾಧನೆಗಾಗಿ ವಿವಿಧ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಇವರ ಸಾಧನೆಗಾಗಿ ಪ್ರಸಕ್ತ ಸಾಲಿನ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ