ನೆರೆ ಹಾನಿಯ ಸಂಪೂರ್ಣ ಮಾಹಿತಿ ನೀಡಲು ಸೂಚನೆ

ಅಧಿಕಾರಿಗಳ ಸಭೆಯಲ್ಲಿ ಎಂಎಲ್ಸಿ ಎಂ.ಕೆ.ಪ್ರಾಣೇಶ್‌ ತಾಕೀತು

Team Udayavani, Sep 8, 2019, 6:43 PM IST

8-Sepctember-33

ಮೂಡಿಗೆರೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅತಿವೃಷ್ಟಿ ಹಾನಿ ಕುರಿತು ಎಂಎಲ್ಸಿ ಪ್ರಾಣೇಶ್‌ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಮೂಡಿಗೆರೆ: ಕಳೆದ ವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಅತಿವೃಷ್ಟಿ ಹಾನಿಯ ಬಗ್ಗೆ ಸಭೆ ನಡೆಸಲಾಗಿತ್ತು. ಜಿಲ್ಲಾಧಿಕಾರಿ ಗೌತಮ್‌ ಬಗಾದಿ ಅವರು ಸಭೆಗೆ ಅತಿವೃಷ್ಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಕೆಲವು ಮಾಹಿತಿಗಳನ್ನು ನೀಡಿಲ್ಲ. ಹಾಗಾಗಿ, ಅಧಿಕಾರಿಗಳು ನೆರೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರೆ ಸರಕಾರಕ್ಕೆ ತಲುಪಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಹೇಳಿದರು.

ಶನಿವಾರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನಲ್ಲಿ ಉಂಟಾದ ಅತಿವೃಷ್ಟಿ ಕುರಿತು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಮಹಾಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕಂದಾಯ ಇಲಾಖೆ ಸೇರಿದಂತೆ ಯಾವ ಇಲಾಖೆಗಳ ಅಧಿಕಾರಿಗಳೂ ಭೇಟಿ ನೀಡಿಲ್ಲವೆಂಬ ದೂರು ಬಂದಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂದೆ ಜಿಪಂನಲ್ಲಿ ಸಚಿವರ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಅಧಿಕಾರಿಗಳ ಅಸಡ್ಡೆ ತಿಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅತಿವೃಷ್ಟಿ ವಿಚಾರವಾಗಿ ಆಯಾ ಪ್ರದೇಶದ ಜನಪ್ರತಿನಿಧಿಗಳ ಗಮನಕ್ಕೂ ತಾರದೇ ಬೇಕಾಬಿಟ್ಟಿ ವರ್ತಿಸಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಚಿವರಲ್ಲಿ ಮನವಿ ಮಾಡಲಾಗುವುದು. ತಾಲೂಕಿನಲ್ಲಿ 454 ಮಂದಿ ನಿರಾಶ್ರತರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಸುಳ್ಳು. ನಿರಾಶ್ರಿತರ ಸಂಖ್ಯೆ ಹೆಚ್ಚಾಗಿದೆ. ಸ್ಪಷ್ಟ ಮಾಹಿತಿ ಪಡೆಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಈ ವಿಚಾರವನ್ನು ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪಿಸಲಾಗುವುದು. ಜನಪ್ರತಿನಿಧಿಗಳನ್ನು ಅಧಿಕಾರಿಗಳು ಕಡೆಗಣಿಸುತ್ತಿದ್ದೀರಿ. ಅದನ್ನು ಹಕ್ಕುಚ್ಯುತಿಗೆ ಮಂಡಿಸಿದರೆ ಅಮಾನತಾಗುತ್ತೀರಿ ಎಂದು ಎಚ್ಚರಿಸಿದರು.

ಗೌತಹಳ್ಳಿ ಸಮೀಪ ಪುರದಲ್ಲಿ ವಾಸದ ಮನೆಯೊಂದು ಕುಸಿದಿರುವ ಬಗ್ಗೆ ಆ ಮನೆ‌ ಮಾಲಿಕರ ಹೆಸರು ಏನೆಂದು ಕಂದಾಯ ಇಲಾಖೆ ನಿರೀಕ್ಷಕ ಮತ್ತು ಗ್ರಾಮಲೆಕ್ಕಿಗರನ್ನು ಸಭೆಯಲ್ಲಿ ಪ್ರಶ್ನಿಸಿದಾಗ ಹೇಳಲು ತಡವರಿಸಿದರು. ಇದಕ್ಕೆ ಎಂಎಲ್ಸಿ ಪ್ರಾಣೇಶ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ತಾಲೂಕಿನ ಎಲ್ಲಾ ಗ್ರಾಮದಲ್ಲಿರುವ ಕಂದಾಯ ಇಲಾಖೆ ಜಾಗವನ್ನು ಅಧಿಕಾರಿಗಳು ಪರಿಶೀಲನೆ ಮಾಡಬೇಕು. ಆ ಜಾಗವನ್ನು ಮನೆ ಕಳೆದುಕೊಂಡ ನಿರಾಶ್ರಿತರಿಗೆ ಒದಗಿಸಲು ಮೀಸಲಿರಿಸಬೇಕು ಎಂದು ಸೂಚಿಸಿದರು.

ಕಾಳಜಿ ಕೇಂದ್ರವನ್ನು ತೆರೆದಿರುವ ಹಾಸ್ಟೆಲ್ಗಳಲ್ಲಿ ನಿರಾಶ್ರಿತರಿಗೆ ನೀಡುವ ಆಹಾರ ಪದಾರ್ಥಗಳಿಗೆ ಮುಗ್ಗಲು ಅಕ್ಕಿಯನ್ನು ಬಳಸಲಾಗುತ್ತಿದೆ. ಈ ಅಕ್ಕಿಯನ್ನು ಎಲ್ಲಿಂದ ತಂದಿದ್ದೀರಿ ಎಂದು ಕೆ.ಸಿ.ರತನ್‌ ಸಮಾಜ ಕಲ್ಯಾಣಾಧಿಕಾರಿ ಧನಂಜಯ ಅವರನ್ನು ಪ್ರಶ್ನಿಸಿದರು. ಆಗ, ಕಳೆದ 6 ತಿಂಗಳಿಂದ ಹಾಸ್ಟೆಲ್ಗಳಲ್ಲಿ ಮಕ್ಕಳಿಗೆಂದು ಅಕ್ಕಿಯನ್ನು ಶೇಖರಿಸಿಡಲಾಗಿದೆ. ಇದರಲ್ಲಿ ತೊಂದರೆ ಬಂದಿರಬಹುದು ಎಂದಾಗ, ಅಧ್ಯಕ್ಷರು ತರಾಟೆಗೆ ತೆಗೆದುಕೊಂಡರು. ಅಲ್ಲದೇ, ಸಂಪೂರ್ಣ ಮನೆ ಕುಸಿತಕ್ಕೊಳಗಾದವರು ಬಾಡಿಗೆ ಮನೆಯಲ್ಲಿ ವಾಸಿಸಲು ಪ್ರತಿ ತಿಂಗಳು 5 ಸಾವಿರ ರೂ. ನೀಡಲು ಸರಕಾರ ನಿರ್ಧರಿಸಿದೆ. ಆದರೆ, ಇದೂವರೆಗೂ ಬಾಡಿಗೆ ಹಣ ನಿರಾಶ್ರಿತರಿಗೆ ನೀಡಿಲ್ಲ. ಹಣದ ಕೊರತೆಯಿಂದ ಈ ರೀತಿ ಮಾಡುತ್ತಿದ್ದಾರೆಯೇ ಎಂದು ತಾಪಂ ಅಧ್ಯಕ್ಷ ಕೆ.ಸಿ.ರತನ್‌ ಪ್ರಶ್ನಿಸಿದರು. ಆಗ, ತಕ್ಷಣಕ್ಕೆ ಬಾಡಿಗೆ ಹಣ ನೀಡಲು ಸಾಧ್ಯವಾಗಿಲ್ಲ. ಆದೇಶ ಬಂದ ಕೂಡಲೇ ನಿರಾಶ್ರಿತರಿಗೆ ಹಣ ನೀಡಲಾಗುವುದು ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಸದಸ್ಯ ರಂಜನ್‌ ಅಜಿತ್‌ ಕುಮಾರ್‌ ಮತನಾಡಿ, ತಾಲೂಕಿನಾದ್ಯಂತ ಕಾಫಿ ತೋಟ, ಭತ್ತದ ಗದ್ದೆಗಳಿಗೆ ಹಾನಿಯಾಗಿರುವುದರಿಂದ ರಾಜ್ಯ ಸರಕಾರ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಹಿತ್ತಲಮಕ್ಕಿ ರಾಜೇಂದ್ರ, ಕಾಫಿ ತೋಟ ಹಾನಿಗೆ ಹೆಕ್ಟೇರ್‌ಗೆ 18 ಸಾವಿರ ರೂ., ಭತ್ತದ ಗದ್ದೆಗೆ ಎಕರೆಗೆ 6.200 ರೂ. ಪರಿಹಾರ ನೀಡಲಾಗುತ್ತಿದೆ. ಇದು ಸಾಲದು. ಹೆಚ್ಚಿನ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಗೋಣಿಬೀಡು ಹೋಬಳಿಯ ಉಗ್ಗೆಹಳ್ಳಿ ಕಾಲೋನಿಯಲ್ಲಿ 4 ಮನೆ ಸಂಪೂರ್ಣ ಕುಸಿದಿದೆ. 158 ಮನೆ ಭಾಗಶಃ ಹಾನಿಯಾಗಿದೆ. ಜಮೀನು ಹಾಗೂ ವಾಸದ ಮನೆಯ ಹಾನಿಯ 726 ಅರ್ಜಿಗಳು ಬಂದಿವೆ. ಕಳಸ ಹೋಬಳಿಯಲ್ಲಿ 26 ಮನೆ ಸಂಪೂರ್ಣ ಕುಸಿದಿದೆ. 150 ಮನೆ ಶೇ.75ರಷ್ಟು ಕುಸಿದಿದೆ. ಒಟ್ಟು 293 ಮನೆಗೆ ಹಾನಿಯಾಗಿದೆ. ಬಣಕಲ್ ಹೋಬಳಿಯಲ್ಲಿ 11 ಮನೆ ಸಂಪೂರ್ಣ ಕುಸಿದಿದೆ. ಬಾಳೂರು ಹೋಬಳಿ ವ್ಯಾಪ್ತಿಯಲ್ಲಿ 6 ಮನೆ ಕುಸಿದಿದೆ. ಕಸಬಾದಲ್ಲಿ 30 ಮನೆ ಹಾನಿಗೊಂಡಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಅಲ್ಲದೇ, ತಾಲೂಕಿನಲ್ಲಿ 366 ಕಡೆ ರಸ್ತೆಗೆ ದೊಡ್ಡ ಮಟ್ಟದಲ್ಲಿ ಹಾನಿಯಾಗಿದೆ. 72 ಭಾಗಗಳಲ್ಲಿ ರಸ್ತೆ ಕುಸಿದಿವೆ. 140 ಕಡೆ ಗುಡ್ಡ ಕುಸಿದಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿ ವೆಂಕಟೇಶ್‌ ಸಭೆಗೆ ಮಾಹಿತಿ ನೀಡಿದರು.

ತಾಪಂ ಉಪಾಧ್ಯಕ್ಷೆ ಪ್ರಮೀಳಾ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಲ್.ದೇವರಾಜು, ಸವಿತಾ ರಮೇಶ್‌, ವೀಣಾ ಉಮೇಶ್‌, ಭಾರತೀ ರವೀಂದ್ರ, ಸುಂದರ್‌ ಕುಮಾರ್‌, ಮೀನಾಕ್ಷಿ ಮೋಹನ್‌, ವೇದವತಿ ಲಕ್ಷ್ಮಣ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.