ಅಕಾಲಿಕ ಮಳೆ: ಅನ್ನದಾತರಲ್ಲಿ ಮತ್ತೆ ಆತಂಕ

ಮಳೆಯಿಂದಾಗಿ ಭತ್ತದ ಗದ್ದೆಯಲ್ಲಿ ನೀರುಕಾಫಿ ಹಾಗೂ ಅಡಕೆ ಬೆಳೆಗಾರರಿಗೆ ಸಂಕಷ್ಟ

Team Udayavani, Dec 28, 2019, 3:21 PM IST

28-December-18

ಮೂಡಿಗೆರೆ: ಪಟ್ಟಣದ ಸುತ್ತಮುತ್ತ ಗುರುವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದಾಗಿ ಕೃಷಿಕರು ಆತಂಕಕ್ಕೀಡಾಗುವಂತಹ ಸ್ಥಿತಿ ಉಂಟಾಗಿದೆ.

ಗುರುವಾರ ಸಂಜೆ 6.30ರ ಸುಮಾರಿಗೆ ಸಣ್ಣದಾಗಿ ಪ್ರಾರಂಭಗೊಂಡ ಮಳೆ, ಏಕಾಏಕಿ ಬಿರುಸು ಪಡೆದು ರಾತ್ರಿ 8 ಗಂಟೆ ವರೆಗೂ ಸುರಿಯಿತು. ಹಾಂದಿ, ಮಾಕೋನಹಳ್ಳಿ, ಬಿದಿರಹಳ್ಳಿ, ಹ್ಯಾಂಡ್‌ ಪೋಸ್ಟ್‌, ಗಂಗನಮಕ್ಕಿ, ಬಡವನ ದಿಣ್ಣೆ, ಮುಗ್ರಹಳ್ಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿತ್ತು. ಶುಕ್ರವಾರ ಸಂಜೆ ವೇಳೆಗೆ ಪುನಃ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಮತ್ತೆ ಮಳೆ ಬೀಳಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ, ಮಳೆ ಬಾರದೆ ಸ್ವಲ್ಪ ಮಟ್ಟಿಗೆ ರೈತರ ಆತಂಕವನ್ನು ದೂರ ಮಾಡಿತು.

ಬೆಳೆಗಾರರು ಕಂಗಾಲು: ಏಕಾಏಕಿ ಮಳೆ ಸುರಿದ ಕಾರಣ ಕಣದಲ್ಲಿ ಒಣಗಲು ಹಾಕಿದ್ದ ಬಹುತೇಕ ಕಾಫಿ ಬೀಜಗಳು ನೆನೆದು ತೊಪ್ಪೆಯಾಗಿತ್ತು. ಮಳೆ ಬರುವ ಮುನ್ಸೂಚನೆ ಇಲ್ಲದೇ ಇದ್ದುದರಿಂದ ಬಹುತೇಕ ಕೃಷಿಕರು ಕಾಫಿ ಬೀಜಗಳನ್ನು ಕಣದಲ್ಲಿಯೇ ರಾಶಿ ಮಾಡಿದ್ದರು. ಆದರೆ, ಮಳೆಯಿಂದ ಬಹುತೇಕ ಒಣಗಿದ್ದ ಕಾಫಿ ಬೀಜಗಳು ನೆನೆದು ಬೆಳೆಗಾರರನ್ನು ಆತಂಕಕ್ಕೀಡು ಮಾಡಿತು. ಭತ್ತದ ಗದ್ದೆಗಳಲ್ಲಿ ಪೈರು ಕೊಯ್ಲು ಮಾಡಿ ಒಣಗಲು ಬಿಟ್ಟಿದ್ದ ಭತ್ತದ ತೆನೆಗಳು ಕೂಡ ಸಂಪೂರ್ಣವಾಗಿ ನೆನೆದಿದ್ದು, ಭತ್ತದ ಕಾಳುಗಳು ಗದ್ದೆಯಲ್ಲಿಯೇ ಉದುರುವ ಭೀತಿ ಎದುರಾಗಿದೆ.

ಡಿಸೆಂಬರ್‌ನಲ್ಲಿ ಬಹುತೇಕ ಭತ್ತದ ಗದ್ದೆಗಳು ಕೊಯ್ಲಿಗೆ ಬಂದಿರುತ್ತವೆ. ಹಲವರು ಭತ್ತದ ತೆನೆಯನ್ನು ಕೊಯ್ಲು ಮಾಡಿ ಒಣಗಲು ಗದ್ದೆಗಳಲ್ಲಿ ಬಿಟ್ಟಿದ್ದರೆ, ಇನ್ನು ಕೆಲವರು ಕಣಗಳಿಗೆ ಹೊತ್ತು ರಾಶಿ ಹಾಕಿ ಸಂಸ್ಕರಣೆ ಮಾಡಿದ್ದರು. ಆದರೆ, ವರ್ಷ ಪೂರ್ತಿ ಕಷ್ಟಪಟ್ಟ ರೈತನ ಶ್ರಮವನ್ನು ಒಂದೇ ಗಂಟೆಯಲ್ಲಿ ಮಳೆರಾಯ ಹಾಳುಗೆಡವಿದ್ದಾನೆ.

ಕಾಫಿ ತೋಟಗಳಲ್ಲಿ ಕಾಫಿ ಹಣ್ಣುಗಳು ಉದುರುವ ಭೀತಿಯಲ್ಲಿದ್ದು,
ಬೆಳೆಗಾರರು ಬೇಗನೆ ಕಟಾವು ಮಾಡುವ ಯೋಜನೆಯಲ್ಲಿದ್ದಾರೆ. ಈ ಬಾರಿಯ ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಫಸಲು ನಾಶ ಮಾಡಿಕೊಂಡಿದ್ದ ರೈತರು ಇದೀಗ ಬೀಳುತ್ತಿರುವ ಅಕಾಲಿಕ ಮಳೆಯಿಂದ ಮತ್ತೆ ಚಿಂತೆಗೀಡಾಗಿದ್ದಾರೆ. ಒಂದು ಬಾರಿ ಬೆಳೆ ಕೊಯ್ಲು ಮಾಡಿ ಕೆಲಸ ಮುಗಿಸಿದರೆ ಸಾಕು ಎನ್ನುವ ಸ್ತಿತಿಗೆ ಬಂದು ತಲುಪಿದ್ದಾರೆ. ಅಡಕೆ ಬೆಳೆಗಾರರಿಗೂ ಇದೇ ಪರಿಸ್ಥಿತಿ ಎದುರಾಗಿದ್ದು, ಅಡಕೆ ಕೊಯ್ಲಿನ ಗುತ್ತಿಗೆ ಪಡೆದವರ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಕಾಳೇಗೌಡ ಅವರು ಆತಂಕ ವ್ಯಕ್ತಪಡಿಸಿದರು.

ಈ ಬಾರಿ ಅರೇಬಿಕ ಕಾಫಿ ಹಾಗೂ ಭತ್ತದ ಗದ್ದೆಗಳಿಗೆ ಅಪಾರ ಪ್ರಮಾಣದ ಹಾನಿ ಉಂಟಾಗುವ ನಿರೀಕ್ಷೆ ಇದ್ದು, ಮಲೆನಾಡಿನ ರೈತರಿಗೆ ಅಗ್ನಿ ಪರೀಕ್ಷೆ ಎಂದೇ ಹೇಳಬಹುದಾಗಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.