ಕಾಮಗಾರಿ ಅವ್ಯವಹಾರ ತನಿಖೆಗೆ ನಿರ್ಧಾರ

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭೆಯಲ್ಲಿ ಅಧ್ಯಕ್ಷೆ ಭಾರತಿ ಸ್ಪಷ್ಟನೆ

Team Udayavani, Sep 19, 2019, 6:41 PM IST

19-Sepctember-32

ಮೂಡಿಗೆರೆ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಅಧ್ಯಕ್ಷೆ ಕೆ.ಪಿ.ಭಾರತಿ ಅಧ್ಯಕ್ಷತೆಯಲ್ಲಿ ನಡೆಯಿತು.

ಮೂಡಿಗೆರೆ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಊಟದ ಹಾಲ್ ಮೇಲ್ಭಾಗದ ಕಟ್ಟಡ ನಿರ್ಮಾಣ ಮತ್ತು ರೈತ ಭವನದ ಅನೇಕ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿವೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ, ಸಮಗ್ರ ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷೆ ಕೆ.ಪಿ.ಭಾರತಿ ಹೇಳಿದರು.

ಬುಧವಾರ ರೈತ ಭವನದಲ್ಲಿ ನಡೆದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷೆ ವಹಿಸಿ ಅವರು ಕೆ.ಪಿ.ಭಾರತಿ ಮಾತನಾಡಿದರು.

ಸಂಸ್ಥೆ ಮುಂಭಾಗದಲ್ಲಿ ಇಂಟರ್ಲಾಕ್‌ ಅಳವಡಿಕೆ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ನೀಡಿದ್ದರಿಂದ ಸಂಸ್ಥೆಗೆ ಶೇ.5ರಷ್ಟು ನಷ್ಟ ಉಂಟಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ನಿರ್ಮಿತಿ ಕೇಂದ್ರಕ್ಕೆ ಕೆಲಸ ನೀಡಬಾರದು. ಸಂಸ್ಥೆಯಿಂದಲೇ ನಿರ್ಮಾಣ ಮಾಡಬೇಕು. ಆಗಿರುವ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರು ಕೇಳಿಬಂದಿದ್ದರಿಂದ ತನಿಖೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಂಘಕ್ಕೆ ಈ ವರ್ಷ 19 ಲಕ್ಷ ರೂ. ನಿವ್ವಳ ಲಾಭ ಬಂದಿದ್ದು, ರೈತ ಭವನದ ಬಾಡಿಗೆ ಬೇರೆ ಎಲ್ಲಾ ಕಡೆಗಳಿಗಿಂತ ಕಡಿಮೆ ಇದೆ. ಈ ಕಾರಣದಿಂದ ಆದಾಯದಲ್ಲಿ 5ಲಕ್ಷ ರೂ. ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ರೈತ ಭವನವನ್ನು ಉಚಿತವಾಗಿ ನೀಡಬಾರದೆಂದು ನಿರ್ಣಯಿಸಲಾಗಿದೆ ಎಂದರು.

ಜನರೇಟರ್‌ ಸ್ವಯಂ ಚಾಲನೆಗೊಳ್ಳಲು 70 ಸಾವಿರ ರೂ. ಮತ್ತು ಸಸ್ಯಾಹಾರ ಊಟ ಮಾಡುವವರಿಗೆ ಸುಮಾರು 3ಲಕ್ಷ ರೂ. ವೆಚ್ಚದಲ್ಲಿ ಕುರ್ಚಿ ಮತ್ತು ಟೇಬಲ್ಗಳನ್ನು ಖರೀದಿಸಲಾಗಿದೆ. ಸಂಘದ ಮಳಿಗೆ ಸೋರುತ್ತಿದ್ದ ಕಾರಣ ಮೇಲ್ಚಾವಣಿ ನಿರ್ಮಿಸಿ 5 ಹೊಸ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಂಘದ ವಾರ್ಷಿಕ ವ್ಯವಹಾರ, ಸಾಲ ವಿತರಣೆ, ಕಾಮಗಾರಿಗಳ ಆಯವ್ಯಯ, ಅಂದಾಜು ಪಟ್ಟಿಗಳ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಚರ್ಚಿಸಲಾಯಿತು.

ಈ ಹಿಂದೆ ಚುನಾವಣೆ ನೀತಿ ಸಂಹಿತೆ ಸಂದರ್ಭದಲ್ಲಿ 523 ಹೊಸಬರಿಗೆ ಸಂಘದ ಸದಸ್ಯತ್ವ ನೀಡಲಾಗಿದ್ದು, ಇದು ಮುಂದಿನ ಚುನಾವಣೆಯಲ್ಲಿ ಪರಿಣಾಮ ಬೀರುವ ದೃಷ್ಟಿಯಿಂದ ವಿರೋಧ ಉಂಟಾಗಿತ್ತು. ಆದರೂ, ಸದಸ್ಯತ್ವ ನೋಂದಣಿಯಾಗಿದೆ. ಆದರೆ, ಮತದಾನದ ಹಕ್ಕನ್ನು ನಿರ್ಣಯಿಸುವ ಹಕ್ಕನ್ನು ಸಹಕಾರ ನಿಬಂಧಕರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಡಿ.ಇ.ಜಗನ್ನಾಥ್‌, ನಿರ್ದೇಶಕರಾದ ರಶ್ಮಿ ಸುಧೀರ್‌ ತಳವಾರ, ದಿನೇಶ್‌ ದೇವವೃಂದ, ವಿ.ಕೆ.ಶಿವೇಗೌಡ, ಗಜೇಂದ್ರ ತರುವೆ, ಎಂ.ವಿ.ಜಗದಿಧೀಶ್‌, ಎಂ.ಎನ್‌.ಅಶ್ವತ್ಥ್, ಕಸ್ತೂರಿ ಭೈರಪ್ಪಗೌಡ, ಎಸ್‌.ಎ.ವಿಜಯೇಂದ್ರ, ಒ.ಜಿ.ರವಿ, ಸಂಪತ್‌ ಮುಗ್ರಳ್ಳಿ, ಕೆ.ಎಂ.ರಾಜೇಂದ್ರ, ಎಚ್.ಕೆ.ದಯಾನಂದ್‌, ಕೇಶವ್‌ ಬಿಳುಗುಳ, ವ್ಯವಸ್ಥಾಪಕ ನಿರ್ದೇಶಕ ರಾಮಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.