ರಸ್ತೆ ತುಂಬಾ ಗುಂಡಿಗಳದ್ದೇ ಕಾರುಬಾರು!

ಬಿಳಗೊಳದಿಂದ ಹ್ಯಾಂಡ್‌ಪೋಸ್ಟ್‌ವರೆಗಿನ ರಸ್ತೆ ಸಂಪೂರ್ಣ ಹಾಳು: ಸವಾರರ ಆರೋಪ

Team Udayavani, Nov 16, 2019, 6:28 PM IST

16-November-33

„ಸುಧೀರ್‌ ಬಿ.ಟಿ. ಮೊದಲ ಮನೆ
ಮೂಡಿಗೆರೆ:
ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-173ಯಲ್ಲಿ ಗುಂಡಿಗಳೇ ತುಂಬಿಕೊಂಡಿದ್ದು, ಗುಂಡಿಗಳಲ್ಲಿ ರಸ್ತೆ ಹುಡುಕಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಸವಾರರಿಗೆ ಬಂದೊದಗಿದೆ.

ಕಡೂರಿನಿಂದ ಮೂಡಿಗೆರೆಯ ಹ್ಯಾಂಡ್‌ ಪೋಸ್ಟ್‌ವರೆಗಿನ ರಸ್ತೆಯನ್ನು ಮೇಲ್ದರ್ಜೆಗೇರಿಸಿ ಹಲವು ವರ್ಷಗಳ ನಂತರ 2018ರ ಏಪ್ರಿಲ್‌ ತಿಂಗಳಿನಲ್ಲಿ ಚಿಕ್ಕಮಗಳೂರಿನ ಆಲದಗುಡ್ಡೆಯಿಂದ ಮೂಡಿಗೆರೆಯ ಬಿಳಗುಳದ ಅಂಚಿನವರೆಗೆ ಡಾಂಬರೀಕರಣ ಮಾಡಲಾಗಿತ್ತು. ಅಧಿಕಾರಿಗಳ ದೂರಾಲೋಚನೆಯ ಕೊರತೆಯೋ ಅಥವಾ ಯೋಜನೆ ತಯಾರಿಸುವುದರಲ್ಲಿ ಆದ ತಪ್ಪುಗಳಿಂದಾಗಿಯೋ ಏನೋ ಬಿಳಗೊಳದಿಂದ ಹ್ಯಾಂಡ್‌ಪೋಸ್ಟ್‌ವರೆಗೆ ಮಾತ್ರ ಡಾಂಬರೀಕರಣ ಆಗಿಲ್ಲ.

ಈ ವಿಚಾರವಾಗಿ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಮಾಡಿ ಹ್ಯಾಂಡ್‌ ಪೋಸ್ಟ್‌ವರೆಗೆ ಡಾಂಬರೀಕರಣ ಮಾಡುವಂತೆ ಅಹವಾಲು ಸಲ್ಲಿಸಿದ್ದರು. ಕೂಡಲೇ ಸೂಕ್ತ ಸ್ಪಂದನೆ ಸಿಕ್ಕಿತಾದರೂ ಕಾರ್ಯ ಮಾತ್ರ ಪ್ರಗತಿಗೆ ಬರಲಿಲ್ಲ. ಇದರ ಪರಿಣಾಮವಾಗಿ ಮೊದಲೇ ಹಾಳಾಗಿದ್ದ ರಸ್ತೆ ಈ ಬಾರಿಯ ಮಳೆಗಾಲದಲ್ಲಿ ಪೂರ್ತಿಯಾಗಿ ಹಾಳಾಗಿದ್ದು, ರಸ್ತೆ ಇದೆ ಎನ್ನುವ ಯಾವುದೇ ಕುರುಹು ಕಾಣಿಸುತ್ತಿಲ್ಲ.

ಬಿಳಗೊಳದಿಂದ ಮೂಡಿಗೆರೆ ಪಟ್ಟಣ ಸೇರಿದಂತೆ ಹ್ಯಾಂಡ್‌ಪೋಸ್ಟ್ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಸ್ಥಳೀಯರು ಮತ್ತು ವಾಹನ ಸವಾರರು ರಸ್ತೆಯಲ್ಲಿ ತಿರುಗಾಡಲು ಹರಸಾಹಸ ಪಡುವಂತಾಗಿದೆ. ಇನ್ನು ಪಾದಚಾರಿಗಳ ಕಥೆ ಊಹೆಗೆ ನಿಲುಕದ್ದಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿಯಿಂದ ಹೆದ್ದಾರಿ ಮರಣಗುಂಡಿಗಳಾಗಿ ಮಾರ್ಪಾಟಾಗಿವೆ. ಯಾವ ಗುಂಡಿ ಯಾರ ಜೀವ ತೆಗೆಯಲು ಸಿದ್ಧವಾಗಿ ಕುಳಿತಿದೆಯೋ ಎಂಬ ಚಿಂತೆ ಇಲ್ಲಿನ ನಾಗರಿಕರದ್ದು. ಚಿಕ್ಕಮಗಳೂರಿನಲ್ಲಿ ಯುವತಿಯೊಬ್ಬಳು ಇಂಥ ಗುಂಡಿಗಳಿಂದಾಗಿ ಸಾವನ್ನಪ್ಪಿದ ದೃಶ್ಯ ಮರೆಯುವ ಮುನ್ನ ಮತ್ತೂಂದು ಭೀಕರ ಅಪಘಾತ ಸಂಭವಿಸುವ ಮೊದಲು ಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕಿದೆ.

ಹ್ಯಾಂಟ್‌ ಪೋಸ್ಟ್‌ವರೆಗಿನ ರಸ್ತೆ ಗುಂಡಿ ಬಿದ್ದು 2 ವರ್ಷ ಕಳೆದರೂ ಕೂಡ ಅನುದಾನ ಬಿಡುಗಡೆ, ಟೆಂಡರ್‌ ಪ್ರಕ್ರಿಯೆ ಎಂದು ಸರಕಾರದ ಬಗ್ಗೆ ಬೆರಳು ತೋರಿಸುವುದರ ಬದಲು ಲಭ್ಯವಿರುವ ಅನುದಾನ ಬಳಸಿಕೊಂಡು ಗುಂಡಿ ಮುಚ್ಚಿಸುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.