ರಸ್ತೆ ಕಾಮಗಾರಿ ಕ‌ಳಪೆ-ಆರೋಪ

ಗುತ್ತಿಗೆದಾರರಿಂದ ಟೆಂಡರ್‌ ನಿಯಮ ಗಾಳಿಗೆ

Team Udayavani, May 20, 2019, 4:39 PM IST

20-May-32

ಮುದಗಲ್ಲ: ನರೇಗಾ ಯೋಜನೆಯಡಿ ನಾಗಲಾಪುರ-ಹಡಗಲಿ ಮುಖ್ಯ ರಸ್ತೆಯಿಂದ ಕನ್ನಾಳ ಹಡಗಲಿವರೆಗೆ ನಿರ್ಮಿಸಿದ ರಸ್ತೆ.

ಮುದಗಲ್ಲ: ಸಮೀಪದ ನಾಗಲಾಪುರ ಗ್ರಾಪಂ ವ್ಯಾಪ್ತಿಯ ನಾಗಲಾಪುರ-ಹಡಗಲಿ ಮುಖ್ಯ ರಸ್ತೆಯಿಂದ ಕನ್ನಾಳ ಹಡಗಲಿ ಮಾರ್ಗದವರೆಗೆ ನಿರ್ಮಿಸಿದ ರಸ್ತೆ ಕಾಮಗಾರಿ ಕಳಪೆ ಆಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

2018-19ನೇ ಸಾಲಿನ ನರೇಗಾ ಕನ್ವರ್ಜೆನ್ಸಿ ಕಾಮಗಾರಿಯಲ್ಲಿ ಸುಮಾರು 8 ಲಕ್ಷ ರೂ. ಮಂಜೂರಾಗಿದೆ. ಶಾಸಕ ಡಿ.ಎಸ್‌. ಹೂಲಗೇರಿ ಹಿಂಬಾಲಕರು ಕಾಮಗಾರಿ ನಿರ್ವಹಿಸಿದ್ದಾರೆ. ಇದರಲ್ಲಿ ನರೇಗಾ ಯೋಜನೆಯಡಿ ಶೇ.90, ಶಾಸಕರ ಅನುದಾನದಡಿ ಶೇ.10ರಷ್ಟು ಅನುದಾನ ಒಗ್ಗೂಡಿಸಿ ಪಂಚಾಯತ ರಾಜ್‌ ಇಲಾಖೆಯಲ್ಲಿ ಎನ್‌ಎಂಆರ್‌ ಅಳವಡಿಸುವ ಮೂಲಕ ಕಾಮಗಾರಿ ನಿರ್ವಹಿಸಲಾಗಿದೆ. ಹೊಲದಿಂದ ಹೊಲಕ್ಕೆ ಹೋಗುವ ರಸ್ತೆ ಇದಾಗಿದೆ. ಅಂದಾಜು ಪತ್ರಿಕೆಯಲ್ಲಿರುವಂತೆ ರಸ್ತೆಯ ಎರಡೂ ಬದಿಯಲ್ಲಿ ಟ್ರಂಚ್ ಹಾಕಿ ರಸ್ತೆ ಎತ್ತರಿಸಬೇಕು. ನಂತರ ಮಣ್ಣು ಹಾಕಿ, ನೀರು ಸಿಂಪಡಿಸಿ ರೂಲರ್‌ ಹಾಯಿಸಬೇಕು. ಆದರೆ ಒಂದು ದಿನ 1 ಜೆಸಿಬಿ, 4 ಟ್ರ್ಯಾಕ್ಟರ್‌ ಮೂಲಕ 150 ಟ್ರಿಪ್‌ ಮಣ್ಣು ಹಾಕಿಸಿ ಮರಂ ಅರವಿದ್ದು ಬಿಟ್ಟರೆ ಬೇರೆ ಯಾವುದೇ ಕೆಲಸವಾಗಿಲ್ಲ. ಕಚ್ಚಾ ರಸ್ತೆ ಅಕ್ಕಪಕ್ಕದಲ್ಲಿ ರೈತರು ತಮ್ಮ ಹೊಲದಲ್ಲಿನ ಕಲ್ಲು ಹಾಕಿದ್ದು ಹಾಗೆಯೇ ಉಳಿದಿವೆ. ರಸ್ತೆಯಲ್ಲಿ ಗಿಡಗಂಟಿಗಳು ಬೆಳೆದಿವೆ. ರಸ್ತೆ ಕಾಮಗಾರಿ ಗುಣಮಟ್ಟದ ಬಗ್ಗೆ ಸ್ಥಳೀಯರು ಹಲವು ಬಾರಿ ದೂರು ನೀಡಿದ್ದರೂ ಅಧಿಕಾರಿಗಳು ಮಾತ್ರ ಶಾಸಕರು ಹೇಳಿದ್ದಾರೆ ನಾವು ಏನೂ ಮಾಡಲು ಬರುವುದಿಲ್ಲ ಎನ್ನುತ್ತಾರೆಂದು ಕನ್ನಾಳ ಗ್ರಾಮದ ಮುಖಂಡರೊಬ್ಬರು ದೂರಿದ್ದಾರೆ. ಇಲಾಖೆ ಹಿರಿಯ ಅಧಿಕಾರಿಗಳು ರಸ್ತೆ ಕಾಮಗಾರಿ ಪರಿಶೀಲಿಸಿ ಗುತ್ತಿಗೆದಾರರ ಬಿಲ್ ಪಾವತಿ ತಡೆಹಿಡಿದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ನಿಯಮಗಳಂತೆ ಕನ್ವರ್ಜೆನ್ಸಿ ಕಾಮಗಾರಿ ನಡೆದಿಲ್ಲ. ಅಧಿಕಾರಿಗಳು ಒತ್ತಡದಲ್ಲಿ ಕೆಲಸ ಮಾಡಿದ್ದಾರೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸರಕಾರಕ್ಕೆ ದೂರು ನೀಡುತ್ತೇನೆ.
ಶ್ವೇತಾ ವೆಂಕನಗೌಡ,
ತಾಪಂ ಅಧ್ಯಕ್ಷೆ, ಲಿಂಗಸುಗೂರು

ಕಾಮಗಾರಿ ಪರಿಶೀಲಿಸಿ ಕೆಲಸ ಎಷ್ಟಾಗಿದೆಯೋ ಅಷ್ಟು ಮಾತ್ರ ಬಿಲ್ ಪಾವತಿಸುತ್ತೇವೆ.
ಎಸ್‌.ಆರ್‌.ಮಿಣಜಗಿ,
ಎಇಇ ಪಂಚಾಯತ್‌ ರಾಜ್‌ ಇಲಾಖೆ ಲಿಂಗಸುಗೂರ 

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.