ರೈತರ ಕೈ ಸೇರದ ಸಹಾಯಧನ

ಕೃಷಿ ಹೊಂಡ ನಿರ್ಮಿಸಿ ಆರು ತಿಂಗಳಾದರೂ ಬರಲಿಲ್ಲ ಅನುದಾನ • ತಪ್ಪದ ರೈತರ ಅಲೆದಾಟ

Team Udayavani, Aug 23, 2019, 11:42 AM IST

23-April-11

ಮುದಗಲ್ಲ: ಪಟ್ಟಣದ ವ್ಯಾಪ್ತಿಯ ಜಮೀನೊಂದರಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿದ ಕೃಷಿ ಹೊಂಡ

ದೇವಪ್ಪ ರಾಠೊಡ
ಮುದಗಲ್ಲ:
ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸ್ವಂತ ಹಣ ಹಾಕಿ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡ ರೈತರಿಗೆ ಈವರೆಗೆ ಇಲಾಖೆಯಿಂದ ಅನುದಾನ ಬಿಡುಗಡೆ ಆಗದ್ದಕ್ಕೆ ರೈತರು ಕೈ ಸುಟ್ಟುಕೊಳ್ಳುವಂತಾಗಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರಿಗೆ ದುರ್ಭಾಗ್ಯವಾಗಿದೆ. ಸರ್ಕಾರದ ಸಹಾಯಧನ ನಂಬಿಕೊಂಡು ಇದ್ದ ಅಲ್ಪಸ್ವಲ್ಪ ಜಮಿನುದಲ್ಲಿ ಸಾಲ ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡ ರೈತರು ಸರ್ಕಾರದ ಸಹಾಯಧನಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಒಂದು ಕಡೆ ಸರ್ಕಾರದಿಂದ ಸಹಾಯಧನ ಬರುತ್ತಿಲ್ಲ, ಇನ್ನೊಂದೆಡೆ ಸಾಲಗಾರರ ಕಾಟದಿಂದ ರೈತರು ಗೋಳಾಡುವಂತಾಗಿದೆ.

ಸುಮಾರು 60 ಹಳ್ಳಿಗಳಿಗೆ ಕೇಂದ್ರವಾಗಿರುವ ಮುದಗಲ್ಲ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿಯೇ 498 ಕೃಷಿ ಹೊಂಡ ನಿರ್ಮಾಣವಾಗಿವೆ. ಇನ್ನು ಲಿಂಗಸುಗೂರು ತಾಲೂಕಿನ ವ್ಯಾಪ್ತಿಯಲ್ಲಿನ ಅಂಕಿ-ಸಂಖ್ಯೆ ದೊಡ್ಡದಿದೆ. 2018-19ನೇ ಸಾಲಿನ ಬೇಸಿಗೆ ಆರಂಭಕ್ಕೂ ಮುಂಚೆಯೇ ರೈತರು ನಿರ್ಮಿಸಿಕೊಂಡ ಕೇವಲ 82 ಕೃಷಿ ಹೊಂಡಗಳಿಗೆ ಮಾತ್ರ ಸುಮಾರು 55 ಲಕ್ಷ ರೂ.ಸಹಾಯಧನ ಬಂದಿದೆ. ಆ ನಂತರ ಇದೇ ಯೋಜನೆಯಡಿ 18, 21 ಹಾಗೂ 30 ಮೀಟರ್‌ ಉದ್ದ-ಅಗಲ ಅಳತೆಯಲ್ಲಿ ನಿರ್ಮಿಸಿದ ಒಟ್ಟು 416 ಕೃಷಿ ಹೊಂಡಗಳಿಗೆ ಇದುವರೆಗೂ ಒಂದು ಪೈಸೆಯೂ ಸಹಾಯಧನ ಬಿಡುಗಡೆಯಾಗಿಲ್ಲ. ನಿರ್ಮಿಸಿದ ಒಟ್ಟು 416 ವಿವಿಧ ಅಳತೆಯ ಕೃಷಿ ಹೊಂಡಗಳಿಗೆ 2.95 ಕೋಟಿ ರೂ.ಸಹಾಯಧನ ಬರಬೇಕಾಗಿದೆ ಎಂದು ಕೃಷಿ ಅಧಿಕಾರಿಗಳು ವಿವರಿಸುತ್ತಾರೆ. ರೈತರು ನಿರ್ಮಿಸಿಕೊಂಡ ಕೃಷಿಹೊಂಡಗಳನ್ನು ಕೃಷಿ ಅಧಿಕಾರಿಗಳು ಪರಿಶೀಲಿಸಿ ಭಾವಚಿತ್ರ ತೆಗೆದು, ಜಿಪಿಎಸ್‌ ಮಾಡಿದ್ದಾರೆ. ಕೃಷಿ ಇಲಾಖೆಗೆ ಕಂಪ್ಯೂಟರ್‌ ಮೂಲಕ ಅಪ್‌ಲೋಡ್‌ ಮಾಡಿದ್ದಾರೆ. ಆದರೆ ಕೃಷಿ ಹೊಂಡ ನಿರ್ಮಿಸಿಕೊಂಡು ಆರು ತಿಂಗಳಾದರೂ ಸಹಾಯಧನ ಬಾರದಿರುವುದಕ್ಕೆ ರೈತರು ನಿತ್ಯ ಕೃಷಿ ಇಲಾಖೆಗೆ ಅಲೆಯುವಂತಾಗಿದೆ. ಶಾಸಕರು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ಸರ್ಕಾರದಿಂದ ಸಹಾಯಧನ ಮಂಜೂರಿಗೆ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ.

ಸರಕಾರದ ಅನುದಾನ ನೆಚ್ಚಿಕೊಂಡು ಕೃಷಿ ಹೊಂಡ ನಿರ್ಮಿಸಿಕೊಂಡಿದ್ದೇವೆ. ವರ್ಷ ಗತಿಸಿದರೂ ಬಿಡಿಗಾಸು ಬಂದಿಲ್ಲ.
ಹನುಮಂತಪ್ಪ,
ಕೃಷಿ ಹೊಂಡ ನಿರ್ಮಿಸಿಕೊಂಡ ರೈತ.

ತಾಂತ್ರಿಕ ತೊಂದರೆಯಿಂದ ಕೃಷಿ ಹೊಂಡ ಅನುದಾನ ಬಂದಿರಲಿಲ್ಲ. ಈಗ 1 ಕೋಟಿಗೂ ಅಧಿಕ ಹಣ ಸರಕಾರ ಜಮೆ ಮಾಡಿದೆ. ಒಂದು ವಾರದಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡ ರೈತರ ಬ್ಯಾಂಕ್‌ ಖಾತೆಗೆ ಅನುದಾನ ಜಮಾ ಮಾಡುತ್ತೇವೆ.
ಮಹಾಂತೇಶ ಹವಾಲ್ದಾರ್‌,
ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ ಲಿಂಗಸುಗೂರು.

 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.