ಮಕ್ಕಳಿಗಿನ್ನೂ ಇಲ್ಲ ಶೂ-ಸಾಕ್ಸ್‌ ಭಾಗ್ಯ

ಶಾಲೆಗಳ ಎಸ್ಡಿಎಂಸಿ-ಮುಖ್ಯ ಶಿಕ್ಷಕರ ಜಂಟಿ ಖಾತೆಗೆ ಅನುದಾನ ಬಿಡುಗಡೆಯಾದರೂ ಶೂ-ಸಾಕ್ಸ್‌ ಖರೀದಿ ಆಗಿಲ್ಲ

Team Udayavani, Aug 26, 2019, 11:23 AM IST

26-Agust-10

ಸಾಂದರ್ಭಿಕ ಚಿತ್ರ

ಮುದಗಲ್ಲ: ಶಾಲೆಗಳು ಆರಂಭವಾಗಿ ಮೂರು ತಿಂಗಳಾದರೂ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ಭಾಗ್ಯ ಇಲ್ಲದಾಗಿದೆ.

ತಾಲೂಕಿನ 26 ಕ್ಲಸ್ಟರ್‌ಗಳಲ್ಲಿ 318 ಸರಕಾರಿ ಪ್ರಾಥಮಿಕ ಶಾಲೆ, 44 ಸರಕಾರಿ ಪ್ರೌಢ ಶಾಲೆಗಳಿವೆ. 1ರಿಂದ 10ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್‌ ವಿತರಣೆಗೆ ಸರ್ಕಾರ ಆದೇಶಿಸಿದೆ. ಸುಮಾರು 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಶೂ ಮತ್ತು ಸಾಕ್ಸ್‌ಗೆ ತರಗತಿವಾರು ದರ ನಿಗದಿಪಡಿಸಲಾಗಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ 265 ರೂ. 6ರಿಂದ8 ನೇ ತರಗತಿವರೆಗೆ 295 ರೂ. ಹಾಗೂ 9ರಿಂದ10ನೇ ತರಗತಿವರೆಗೆ 325 ರೂ. ನಿಗದಿಪಡಿಸಿದೆ. ಈ ಹಣದಲ್ಲಿ ಪ್ರತಿ ವಿದ್ಯಾರ್ಥಿಗೆ ಶೂ ಮತ್ತು 2 ಜೊತೆ ಸಾಕ್ಸ್‌ಗಳನ್ನು ಖರೀದಿಸುವಂತೆ ಸೂಚಿಸಿ ಶಿಕ್ಷಣ ಇಲಾಖೆ ಆಯಾ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಮುಖ್ಯಶಿಕ್ಷಕರ ಜಂಟಿ ಖಾತೆಗೆ ಅನುದಾನ ವರ್ಗಾವಣೆ ಮಾಡಿದೆ. ಆದರೆ ಹಣ ಜಮೆಯಾಗಿ 20 ದಿನ ಗತಿಸಿದರೂ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್‌ ಭಾಗ್ಯ ದೊರೆಯದಿರುವುದು ಬಡ ಮಕ್ಕಳ ಆಶೆಗೆ ತಣ್ಣೀರು ಎರಚಿದಂತಾಗಿದೆ. ಹಣ ಜಮೆಯಾದ ತಕ್ಷಣವೇ ಶಾಲೆಗಳ ಎಸ್‌ಡಿಎಂಸಿ ಸಭೆ ಕರೆದು ಠರಾವು ಪಾಸ್‌ ಮಾಡಬೇಕು. ನಂತರದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು-ಮುಖ್ಯಗುರು ಹಾಗೂ 5 ಜನ ಸಮಿತಿ ಸದಸ್ಯರು ಸೇರಿ ಶೂ-ಸಾಕ್ಸ್‌ ಖರೀದಿಸಬೇಕು. ಆದರೆ ಶೈಕ್ಷಣಿಕ ವರ್ಷ ಆರಂಭದ ಜೂನ್‌ ಕೊನೆಯಲ್ಲಿ ಮಕ್ಕಳಿಗೆ ಶೂ-ಸಾಕ್ಸ್‌, ಪಠ್ಯಪುಸ್ತಕ, ಸಮವಸ್ತ್ರ, ಸೈಕಲ್ ವಿತರಿಸಬೇಕು. ಆದರೆ ಶೈಕ್ಷಣಿಕ ವರ್ಷದ ಮೂರು ತಿಂಗಳು ಗತಿಸಿದರೂ ಮಕ್ಕಳಿಗೆ ಸೌಲಭ್ಯ ಕಲ್ಪಿಸದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿವೆ.

ಶಂಕೆ: ಶಾಲಾ ಮಕ್ಕಳ ಶೂ-ಸಾಕ್ಸ್‌ ಖರೀದಿಗೆ ಆಯಾ ವಲಯವಾರು ಸಿಆರ್‌ಪಿ, ಬಿಆರ್‌ಪಿ ಮತ್ತು ಶಿಕ್ಷಣ ಸಂಯೋಜಕರು ಅನುಮತಿ ಪಡೆಯುವ ಜತೆಗೆ ಅವರು ಸೂಚಿಸಿದ ಅಂಗಡಿಗಳಲ್ಲಿಯೇ ಮುಖ್ಯಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಶೂ-ಸಾಕ್ಸ್‌ ಖರೀದಿಸಬೇಕೆಂಬ ನಿಯಮ ಹೇರಲಾಗುತ್ತಿದೆ. ಇದೇ ಆ ಕಾರಣದಿಂದ ಶೂ, ಸಾಕ್ಸ್‌ ಖರೀದಿ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಇಲಾಖೆ ನಿಯಮನುಸಾರ ರಚಿಸಲಾದ ಸಮಿತಿಗಳು ಪಾರದರ್ಶಕವಾಗಿ ಶೂ-ಸಾಕ್ಸ್‌ ಗಳನ್ನು ಖರೀದಿಸಿ ವಿದ್ಯಾರ್ಥಿಗಳಿಗೆ ವಿತರಣೆಗೆ ಮುಂದಾಗಬೇಕೆಂಬುದು ಶಿಕ್ಷಣ ಪ್ರೇಮಿಗಳು, ಪಾಲಕರ ಆಶಯವಾಗಿದೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.