ನಿರಂತರ ಸುರಿದ ಮಳೆಗೆ ಕೆರೆ, ಚೆಕ್‌ಡ್ಯಾಂ ಭರ್ತಿ

ಬರದ ನಾಡಿನಲ್ಲಿ ನೀರಿನ ಬವಣೆಗೆ ತಾತ್ಕಾಲಿಕ ಪರಿಹಾರ „ ರೈತರ ಮೊಗದಲ್ಲಿ ಮೂಡಿದ ಮಂದಹಾಸ

Team Udayavani, Oct 10, 2019, 4:50 PM IST

10-October-19

ಮುಳಬಾಗಿಲು: ಜಿಲ್ಲೆಯ ಬರಪೀಡಿತವಾಗಿರುವ ತಾಲೂಕಿನಲ್ಲಿ ಕಳೆದ ಎರಡು-ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಚೆಕ್‌ಡ್ಯಾಂ, ನಾಲೆ, ಕೆರೆಗಳು ಭರ್ತಿಯಾಗುವ ಹಂತದಲ್ಲಿವೆ. ಜತೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಈ ಭಾಗದ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಗಲಿದೆ.

ರೈತರ ಮೊಗದಲ್ಲಿ ಮಂದಹಾಸ: ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಕಮರುತ್ತಿದ್ದ ಬೆಳೆಗಳಿಗೆ ಜೀವಕಳೆ ಬಂದಿದೆ. ತಾಲೂಕಿನ ರೈತರು ಬೆಳೆದಿದ್ದ ಭತ್ತ, ರಾಗಿ, ನೆಲಗಡಲೆ ಸೇರಿದಂತೆ ದ್ವಿದಳ ದಾನ್ಯಗಳಾದ ತೊಗರಿ, ಅವರೆ, ಅಲಸಂಧೆಗಳ ಉತ್ತಮ ಫ‌ಸಲು ದೊರೆಯುವ ನಿರೀಕ್ಷೆ ಮೂಡಿದೆ. ಇದರಿಂದಾಗಿ ರೈತರು, ಮತ್ತೊಮ್ಮೆ ಬೆಳೆ ನಷ್ಟದ ಸಂಕಷ್ಟದಿಂದ ಪಾರಾಗಿದ್ದಾರೆ. ಜತೆಗೆ ತಾಲೂಕಿನಲ್ಲಿರುವ ಬಹುತೇಕ ಕೆರೆಗಳು, ಚೆಕ್‌ಮ್‌ಂಗಳಿಗೆ ನೀರು ಹರಿದು ಬಂದಿರವುದು ರೈತರಲ್ಲಿ ಮತ್ತಷ್ಟು ಸಂತಸ ತಂದಿದೆ.

ತಾಲೂಕಿನಲ್ಲಿ ಮಳೆಯ ಪ್ರಮಾಣ: ಜೂನ್‌ನಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗುತ್ತದೆ. ಆದರೆ ತಾಲೂಕಿನಲ್ಲಿ ಮಳೆಯ ಕೊರತೆ ಎದುರಾಗಿ, ಬರಪೀಡಿತವಾಗಿತ್ತು. ತಾಲೂಕಿನಲ್ಲಿ ಏಪ್ರಿಲ್‌ನಲ್ಲಿ 30 ಮಿ. ಮೀ., ಮೇ ತಿಂಗಳಿನಲ್ಲಿ 71 ಮಿ.ಮೀ., ಮತ್ತು ಜೂನ್‌ ತಿಂಗಳಿನಲ್ಲಿ ಆವಣಿ ಹೋಬಳಿಯಲ್ಲಿ 125 ಮಿ.ಮೀ., ಮಳೆಯಾಗಿತ್ತು. ಭೈರಕೂರು 105 ಮಿ.ಮೀ., ದುಗ್ಗಸಂದ್ರ 130 ಮಿ.ಮೀ., ಕಸಬಾ 113 ಮಿ. ಮೀ., ತಾಯಲೂರು 194 ಮಿ.ಮೀ., ಮಳೆಯಾಗಿದ್ದರಿಂದ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಂಡಿದ್ದರು.

ಬಿತ್ತನೆಯಲ್ಲೂ ಕೊರತೆ: ತಾಲೂಕಿನಲ್ಲಿ ಒಟ್ಟಾರೆ 25,167 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಬೇಕಿತ್ತು. ಆದರೆ ಮಳೆ ಕೊರತೆ ಯಿಂದ ಕೇವಲ 3,147 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ಇದೂ ಕೂಡ ಮಳೆ ಕೊರತೆಯಿಂದ ಬಾಡಿಹೋಗುವ ಸಂಕಷ್ಟ ಎದುರಾಗಿತ್ತು. ಆದರೆ ಸತತ ಎರಡ್ಮೂರು ದಿನಗಳಿಂದ ಸುರಿಯುತ್ತಿ ರುವ ಮಳೆಗೆ ಮತ್ತೆ ಬೆಳೆಗಳಿಗೆ ಕಳೆ ಬಂದಿದ್ದು, ಉತ್ತಮ ಫ‌ಸಲಿನ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಿ ಇದೇ ರೀತಿ ಮಳೆ ಬಂದರೆ ರಾಗಿ ಬೆಳೆಯು ಉತ್ತಮ ಫ‌ಸಲು ಬರಲಿದೆ ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.

ಚೆಕ್‌ ಡ್ಯಾಂ, ಕೆರೆ, ನಾಲೆಗಳು ಭರ್ತಿ: ಸತತ ಬರಗಾಲದಿಂದ ತತ್ತರಿಸಿದ್ದ ತಾಲೂಕು, ಕೇವಲ ಎರಡ್ಮೂರು ದಿನಗಳಲ್ಲಿ ಭರಪೂರ ಮಳೆಯಿಂದ ತಣಿದಿದೆ. ಇನ್ನೂ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದ್ದು, ತಾಲೂಕಿನ ನೀರಿನ ಸಮಸ್ಯೆ ತಾತ್ಕಾಲಿಕವಾಗಿ ಪರಿಹಾರವಾಗಲಿದೆ.

ನಿರಂತರ ಮಳೆಯಿಂದಾಗಿ ಕೆರೆ, ಚೆಕ್‌ಡ್ಯಾಂ, ನಾಲೆ, ಕಾಲುವೆಗಳು ಸಂಪೂರ್ಣ ಭರ್ತಿಯಾಗುವ ಹಂತದಲ್ಲಿವೆ. ಜಂಗಾಲಹಳ್ಳಿ ಬಳಿ ನಿರ್ಮಾಣ ಮಾಡಲಾಗಿರುವ ನಾಲಾ ಬದು, ಚೆಕ್‌ ಡ್ಯಾಂ, ಕಾಲುವೆ ತುಂಬಿವೆ. ಜಿಲ್ಲೆಯ ಅಂತರ್ಜಲ ಹೆಚ್ಚಿಸಲು ಜಿಪಂ ಸಿಇಒ ಜಿ. ಜಗದೀಶ್‌, ಸಾಕಷ್ಟು ಮುತುವರ್ಜಿ ವಹಿಸಿ 600 ಚೆಕ್‌ಡ್ಯಾಂ ನಿರ್ಮಾಣಕ್ಕೆ ಕ್ರಮಕೈಗೊಂಡಿದ್ದರು. ದುಗ್ಗಸಂದ್ರ ಹೋಬಳಿಯ ಕೂತಾಂಡಹಳ್ಳಿಯಲ್ಲಿ ನಿರ್ಮಿಸಲಾಗಿರುವ ಚೆಕ್‌ ಡ್ಯಾಂ ಮಳೆ ನೀರಿನಿಂದ ಭರ್ತಿಯಾಗಿದೆ.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.