ಮನೆ ಸುತ್ತ ಚರಂಡಿ ನೀರು: ಊರ ತುಂಬಾ ದುರ್ನಾತ


Team Udayavani, Jan 5, 2020, 3:30 PM IST

5-January-16

ಮುಂಡರಗಿ: ತಾಲೂಕಿನ ಕಲಕೇರಿ ಗ್ರಾಮದ ಹನುಮಂತ ದೇವಸ್ಥಾನ ಹಿಂಬದಿಯ ತಗ್ಗಿನ ಹೊಂಡದಲ್ಲಿ ಚರಂಡಿ ನೀರು ಹರಿದು ಬಂದು ನಿಂತಿರುವುದರಿಂದಾಗಿ ಸಾಂಕ್ರಾಮಿಕ ರೋಗಗಳ ತಾಣವಾಗಿ ಮಾರ್ಪಟ್ಟಿದೆ. ಸುತ್ತಲಿನ ಮನೆಯಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಮನೆ ಸುತ್ತಲೂ ಚರಂಡಿ ನೀರು ನಿಂತಿರುವುದರಿಂದಾಗಿ ಮನೆ ಗೋಡೆಗಳಿಗೆ ತೇವಾಂಶ ಹೆಚ್ಚಾಗಿ ಬೀಳುವ ಸ್ಥಿತಿ ತಲುಪಿವೆ. ಅಲ್ಲದೇ ಮನೆಯ ಗೋಡೆಗಳು ತೇವಾಂಶದಿಂದ ಯಾವಾಗ ಬೀಳುತ್ತಯೋ ಎನ್ನುವ ಆತಂಕದಲ್ಲಿ ಸ್ಥಳೀಯರು ದಿನ ದೂಡುವಂತಾಗಿದೆ. ಮನೆ ಸುತ್ತಲೂ ನೀರು ಇರುವುದರ ಜೊತೆಗೆ ರಸ್ತೆಯಲ್ಲೂ ಚರಂಡಿ ನೀರು ಹರಿಯುತ್ತದೆ. ಇದರಿಂದಾಗಿ ಮನೆಯವರು ರಸ್ತೆಯಲ್ಲಿ ಓಡಾಡಬೇಕೆಂದರೆ ಚರಂಡಿ ನೀರು ದಾಟಿಕೊಂಡೆ ಹೋಗಬೇಕಾಗುತ್ತದೆ.

ಮಕ್ಕಳು, ವಯೋವೃದ್ದರು ಚರಂಡಿಯ ನೀರಿನಲ್ಲಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಎಂಟು ಮನೆಗಳ ಚರಂಡಿಯ ನೀರಿನಿಂದಾಗಿ ಸುತ್ತಮುತ್ತಲಿನ ವಾತಾವರಣ ಕಲುಷಿತವಾಗಿದೆ. ಚರಂಡಿ ನೀರು ದುರ್ನಾತ ಬೀರುತ್ತಿರುವುದರಿಂದಾಗಿ ಮೂಗು ಮುಚ್ಚಿಕೊಂಡು ಜನರು ಓಡಾಡಬೇಕಾಗಿದೆ.

ಸುತ್ತಲಿನ ಜನ ಯಮಯಾತನೆ ಅನುಭವಿಸುವಂತಾಗಿದೆ. ಮೇಲ್ಭಾಗದಿಂದ ಹರಿದು ಬರುವ ಚರಂಡಿ ನೀರು ಸರಾಗವಾಗಿ ಗ್ರಾಮದ ಹೊರಗೆ ಹರಿದು ಹೋಗಲು ಉತ್ತಮವಾದ ಚರಂಡಿ ನಿರ್ಮಾಣ ಮಾಡಬೇಕಿದೆ. ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮುಂದಾಗಬೇಕಿದೆ.

ಮನೆಯ ಸುತ್ತಲೂ ಗಟಾರದ ನೀರು ನಿಂತು ಮನೆಯಲ್ಲಿ ಇರಲು ಆಗುತ್ತಿಲ್ಲ. ಗಟಾರ ನೀರಿನ ಕೆಟ್ಟ ವಾಸನೆಯಿಂದ ಮನೆಯಲ್ಲಿ ಕುಳಿತುಕೊಳ್ಳಲಾಗುತ್ತಿಲ್ಲ. ಗಟಾರದ ನೀರಿನಿಂದ ಮನೆಯ ಗೋಡೆಗಳು ಜವುಳು ಅಡರಿ ಯಾವಾಗ ಬೀಳುತ್ತವೆ ಎನ್ನುವ ಭಯ ಕಾಡುತ್ತಿದೆ. ಗ್ರಾಪಂನವರಿಗೆ ಮನವಿ ಸಲ್ಲಿಸಿ ಎರಡು ತಿಂಗಳು ಗತಿಸಿದರೂ ನಮ್ಮ ಕಡೆಗೆ ಕಣ್ಣೆತ್ತಿ ನೋಡದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಹಿಗೇಯೇ ಚರಂಡಿ ನೀರಿನ ಸಮಸ್ಯೆ ಬಗೆಹರಿಸದೇ ನಿರ್ಲಕ್ಷ್ಯ ಮಾಡಿದರೆ ದಯಾಮರಣ ಕೋರಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮನವಿಯಲ್ಲಿ ಆಗ್ರಹಿಸಿದ್ದೇನೆ .
ರಶೀದ್‌ಸಾಬ್‌ ಕರೀಮಸಾಬ್‌ ಮೋರಗೇರಿ,
ಗ್ರಾಮಸ್ಥ

ಕಲಕೇರಿ ಗ್ರಾಮದ ಸಮಸ್ಯೆಯು ಗಮನಕ್ಕೆ ಬಂದಿದ್ದು, ಚರಂಡಿಯ ನೀರು ತಗ್ಗಿನಲ್ಲಿ ನಿಲ್ಲದಂತೆ ನೀರು ಗ್ರಾಮದ ಹೊರಕ್ಕೆ ಹೋಗುವಂತೆ ಶಾಶ್ವತ ಪರಿಹಾರಕ್ಕಾಗಿ 14ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾಯೋಜನೆ ರೂಪಿಸಿ ಯೋಜನೆಯನ್ನು ಒಂದು ತಿಂಗಳ ಒಳಗಾಗಿ ಜಾರಿಗೊಳಿಸಲಾಗುವುದು.
ಎಸ್‌.ಎಸ್‌. ಕಲ್ಮನಿ,
ತಾಪಂ ಇಒ

ಮನವಿಗೆ ಸ್ಪಂದಿಸದ ಗ್ರಾಪಂ
ಚರಂಡಿ ನೀರು ಮನೆ ಸುತ್ತಲೂ ನಿಂತು ಮನೆಯವರು ಅನಾರೋಗ್ಯಕ್ಕೆ ಈಡಾಗುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿಗೆ ರಶೀದ್‌ ಸಾಬ್‌ ಕರೀಮಸಾಬ್‌ ಮೋರಗೇರಿಯವರು ಮನವಿ ಸಲ್ಲಿಸಿದ್ದಾರೆ. ಆದರೆ ಗ್ರಾಪಂ ಅಭಿವೃದ್ಧಿ ಅಧಿಕಾರಿಯು ಎರಡು ತಿಂಗಳು ಗತಿಸಿದರೂ ಸಮಸ್ಯೆ ಬಗ್ಗೆ ಸ್ಪಂದಿಸಿಲ್ಲ. ಇದರಿಂದ ನೊಂದುಕೊಂಡಿರುವ ರಶೀದ್‌ಸಾಬ್‌ ಮೋರಗೇರಿ ಕುಟುಂಬವು ನೆಮ್ಮದಿಯಾಗಿ ಜೀವಿಸಬೇಕೆಂದರೆ ನಮ್ಮ ಮಾನವ ಹಕ್ಕುಗಳ ಉಲ್ಲಂಘನೆಯು ಆಗುತ್ತಿದೆ. ಆದ್ದರಿಂದ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಮಾಡಿಕೊಳ್ಳುವ ಅನಿವಾರ್ಯತೆಯು ಕುರಿತು ಅಳಲು ತೋಡಿಕೊಂಡಿದ್ದಾರೆ.

„ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ರಾಣಿ ಚನ್ನಮ್ಮ

ಗದಗ: ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ರಾಣಿ ಚನ್ನಮ್ಮ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ

Jagadish Shettar: ಕಾಂಗ್ರೆಸ್‌ನವರಿಂದಲೇ ಸಿಎಂ ಕೆಳಗಿಳಿಸಲು ಯತ್ನ

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.