ಈಗ ಸಣ್ಣ ಸ್ಫೋಟವಾದರೂ ಡ್ಯಾಂ ಬಿರುಕು ಸಾಧ್ಯತೆ

ಸದ್ಯ ಜಲಾಶಯ ಪೂರ್ಣ ತುಂಬಿರುವುದರಿಂದ ಮತ್ತು ಅಣೆಕಟ್ಟೆ ನೀರಿನ ಒತ್ತಡಕ್ಕೆ ಬಿರುಕು ಸಂಭವ

Team Udayavani, Aug 24, 2019, 5:34 PM IST

24-April-42

ಅಣೆಕಟ್ಟೆಯ ಸುರಕ್ಷತೆ ಬಗ್ಗೆ ನಗರದ ಎಂಜಿನಿಯರುಗಳ ಸಂಸ್ಥೆಯಲ್ಲಿ ತಜ್ಞರ ಸಭೆ ನಡೆಯಿತು.

ಮೈಸೂರು: ಕೆಆರ್‌ಎಸ್‌ ಅಣೆಕಟ್ಟೆಯ ಹಿತದೃಷ್ಟಿ ಯಿಂದ ಮಂಡ್ಯ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಅಣೆಕಟ್ಟೆಯ ಸುತ್ತಮುತ್ತ ಸುಮಾರು 20 ಕಿ.ಮೀ ವರೆಗೆ ಶಾಶ್ವತವಾಗಿ ಎಲ್ಲಾ ರೀತಿಯ ಗಣಿಗಾರಿಕೆಯನ್ನು ನಿಷೇಧಿಸಬೇಕು ಎಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆ ಶಿಫಾರಸು ಮಾಡಿದೆ.

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ನಗರದ ಎಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ನಿವೃತ್ತ ಮೇಜರ್‌ ಜನರಲ್ ಒಂಬತ್ಕೆರೆ ಮತ್ತು ಎಂ.ಲಕ್ಷ್ಮಣ ಅವರ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಿದ ಎಂಜಿನಿಯರುಗಳು ಹಾಗೂ ರೈತ ಮುಖಂಡರು, ಕೆಆರ್‌ಎಸ್‌ ಅಣೆಕಟ್ಟೆ ಸುತ್ತಮುತ್ತ ಕಲ್ಲು ಗಣಿಗಾರಿಕೆಗಾಗಿ ಸ್ಫೋಟಕಗಳನ್ನು ಬಳಸುತ್ತಿರುವುದರಿಂದ ಅಣೆಕಟ್ಟು ಎಷ್ಟರ ಮಟ್ಟಿಗೆ ಸುರಕ್ಷಿತ ಎಂಬುದರ ಬಗ್ಗೆ ಚರ್ಚಿಸಿ, ತಾಂತ್ರಿಕ ವರದಿ ಸರ್ಕಾರಕ್ಕೆ ಸಲ್ಲಿಸಲು ತೀರ್ಮಾನಿಸಿತು.

ಅಣೆಕಟ್ಟೆ ಸುರಕ್ಷತೆ ವರದಿ ನೀಡಿ: ಕೆಆರ್‌ಎಸ್‌ ಅಣೆಕಟ್ಟೆಯನ್ನು ಭೂಕಂಪನ ವಲಯದಲ್ಲಿ ನಿರ್ಮಿಸಿರುವುದರಿಂದ ಸ್ಫೋಟಕಗಳಿಂದ ಅಣೆಕಟ್ಟೆಯ ಕಟ್ಟಡ ಬಿರುಕು ಬಿಡುವ ಸಾಧ್ಯತೆಗಳಿದ್ದು, ಕೆಆರ್‌ಎಸ್‌ ಸುತ್ತಮುತ್ತ ಎಲ್ಲ ರೀತಿಯ ಸ್ಫೋಟಕಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಕೆಆರ್‌ಎಸ್‌ ಅಣೆಕಟ್ಟೆಗೆ 90 ವರ್ಷಗಳಾಗಿರುವುದರಿಂದ ಕೇಂದ್ರ ಭೂವಿಜ್ಞಾನ ಇಲಾಖೆಯಿಂದ ಸರ್ವೆಯಾಗಬೇಕು ಹಾಗೂ ಕೂಡಲೇ ಅಣೆಕಟ್ಟೆಯ ಸುರಕ್ಷತೆ ಬಗ್ಗೆ ವರದಿ ನೀಡಬೇಕು. ಅಣೆಕಟ್ಟೆಯ ಕಟ್ಟಡದ ಆಯಸ್ಸಿನ ಬಗ್ಗೆ ತಿಳಿಯಲು ಅಣೆಕಟ್ಟೆಯ ಅನಾಲಿಸಿಸ್‌ ಆಗಬೇಕಿದೆ. ಇದರಿಂದ ಅಣೆಕಟ್ಟೆ ಇನ್ನೂ ಎಷ್ಟರ ಮಟ್ಟಿಗೆ ಗಟ್ಟಿತನ ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕೆಆರ್‌ಎಸ್‌ ಅಣೆಕಟ್ಟೆಯ ಹಿತದೃಷ್ಟಿಯಿಂದಶಾಶ್ವತವಾಗಿ ಅಣೆಕಟ್ಟೆಯ ಸುತ್ತಮುತ್ತ ಸುಮಾರು 20 ಕಿ.ಮೀ ವರೆಗೆ ಎಲ್ಲಾ ರೀತಿಯ ಗಣಿಗಾರಿಕೆಯನ್ನು ನಿಷೇಧಿಸಬೇಕು.

ಸದ್ಯ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿರುವುದರಿಂದ ಮತ್ತು ಅಣೆಕಟ್ಟೆ ನೀರಿನ ಒತ್ತಡಕ್ಕೆ ಒಳಗಾಗಿರುವುದರಿಂದ, ಸಣ್ಣ ಪ್ರಮಾಣದ ಸ್ಫೋಟ ಕೂಡ ಅಣೆಕಟ್ಟೆ ಬಿರುಕು ಬಿಡಲು ಅವಕಾಶ ನೀಡುತ್ತದೆ. ಸಣ್ಣ ಬಿರುಕು ನೀರಿನ ಒತ್ತಡದಿಂದ ಕೆಲವೇ ದಿನಗಳಲ್ಲಿ ದೊಡ್ಡ ಬಿರುಕಾಗಿ ಮಾರ್ಪಡುತ್ತದೆ ಎಂದು ಶಿಫಾರಸು ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ತ.ಮ.ವಿಜಯಭಾಸ್ಕರ್‌, ಮಂಡ್ಯ ಜಿಲ್ಲಾಧಿಕಾರಿ ಹಾಗೂ ಕೇಂದ್ರ ಜಲಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್‌ಗೆ ಕಳುಹಿಸಲು ತೀರ್ಮಾನಿಸಿತು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.